AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕಾಶ್ ರಾಜ್; ವಾಂಗ್​ಚುಕ್ ಸತ್ಯಾಗ್ರಹಕ್ಕೆ ಬೆಂಬಲ

ಮಂಗಳವಾರ ಪ್ರಕಾಶ್ ರಾಜ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜನ್ಮದಿನದಂದು ಒಂದೊಳ್ಳೆಯ ಕೆಲಸ ಮಾಡಬೇಕು ಎನ್ನುವ ಕಾರಣಕ್ಕೆ ಅವರು ವಾಂಗ್​ಚುಕ್ ಚಳವಳಿಯನ್ನು ಬೆಂಬಲಿಸಿದ್ದಾರೆ. ಇವರನ್ನು ಬೆಂಬಲಿಸಲು ಅವರು ಸ್ವತಃ ಚಳವಳಿ ನಡೆಯವ ಸ್ಥಳಕ್ಕೆ ತೆರಳಿದ್ದರು ಅನ್ನೋದು ವಿಶೇಷ. ‘

ಲಡಾಖ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕಾಶ್ ರಾಜ್; ವಾಂಗ್​ಚುಕ್ ಸತ್ಯಾಗ್ರಹಕ್ಕೆ ಬೆಂಬಲ
ವಾಂಗ್​ಚುಕ್-ಪ್ರಕಾಶ್ ರಾಜ್
ರಾಜೇಶ್ ದುಗ್ಗುಮನೆ
|

Updated on:Mar 26, 2024 | 2:27 PM

Share

ಲಡಾಖ್‌ನ ಹಕ್ಕುಗಳು ಮತ್ತು ಪರಿಸರವನ್ನು ರಕ್ಷಿಸಲು ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್​ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮಾರ್ಚ್ 6ರಂದು ‘ಕ್ಲೈಮೇಟ್ ಫಾಸ್ಟ್’ ಹೆಸರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಆಂದೋಲನಕ್ಕೆ ಪರಿಸರವಾದಿಗಳು, ಸ್ಥಳೀಯ ಜನರು, ಸೆಲೆಬ್ರಿಟಿಗಳು, ವಿವಿಧ ಸಮುದಾಯಗಳು ಬೆಂಬಲ ನೀಡುತ್ತಿವೆ. ಈಗ ನಟ ಪ್ರಕಾಶ್ ರಾಜ್ ಕೂಡ ಅವರನ್ನು ಬೆಂಬಲಿಸಿದ್ದಾರೆ. ಈ ಕುರಿತು ಅವರು ಟ್ವಿಟರ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಮಂಗಳವಾರ (ಮಾರ್ಚ್ 26) ಪ್ರಕಾಶ್ ರಾಜ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜನ್ಮದಿನದಂದು ಒಂದೊಳ್ಳೆಯ ಕೆಲಸ ಮಾಡಬೇಕು ಎನ್ನುವ ಕಾರಣಕ್ಕೆ ಅವರು ವಾಂಗ್​ಚುಕ್ ಚಳವಳಿಯನ್ನು ಬೆಂಬಲಿಸಿದ್ದಾರೆ. ಇವರನ್ನು ಬೆಂಬಲಿಸಲು ಅವರು ಸ್ವತಃ ಚಳವಳಿ ನಡೆಯವ ಸ್ಥಳಕ್ಕೆ ತೆರಳಿದ್ದರು ಅನ್ನೋದು ವಿಶೇಷ. ‘ಇವರನ್ನು ಬೆಂಬಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ’ ಎಂದು ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.

‘ಇಂದು ನನ್ನ ಬರ್ತ್​ಡೇ. ಹೀಗಾಗಿ ನಾನು ಈ ದಿನವನ್ನು ಲೇಹ್ ಲಡಾಕ್​ನಲ್ಲಿ ಕಳೆಯಲು ನಿರ್ಧರಿಸಿದೆ. ಈ ಜನ ತಮಗಾಗಿ ಹೋರಾಡುತ್ತಿಲ್ಲ. ಇಲ್ಲಿನ ಜನರು ನಮ್ಮ ದೇಶ, ನಮ್ಮ ಪರಿಸರ ಮತ್ತು ನಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಿದ್ದಾರೆ. ಅವರ ಬೆಂಬಲಕ್ಕೆ ನಿಲ್ಲೋಣ’ ಎಂದು ವಿಡಿಯೋದಲ್ಲಿ ಹೇಳೊದ್ದಾರೆ. ಇದರಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಕಂಡು ಬಂದಿದೆ.

ಪ್ರಕಾಶ್ ರೈ ಟ್ವೀಟ್..

‘ಲಡಾಖ್ ಮತ್ತು ಹಿಮಾಲಯವನ್ನು ಉಳಿಸಿ’ ಎಂಬ ವಾಂಗ್‌ಚುಕ್ ಅವರ ಉಪವಾಸ 21 ದಿನಗಳನ್ನು ತಲುಪಿದೆ. ಪ್ರತಿಭಟನೆಗೆ ರಾಜಕೀಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವಾಂಗ್​ಚುಕ್ ಟ್ವೀಟ್ ಮಾಡಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಅವರು ಅಪ್‌ಡೇಟ್‌ ನೀಡುತ್ತಾ ಬರುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಶೀಘ್ರವೇ ಸ್ಪಂದನೆ ಸಿಗುವ ಭರವಸೆಯಲ್ಲಿ ಅವರಿದ್ದಾರೆ.

ಪ್ರಕಾಶ್ ರೈ ಅವರು ಸಿನಿಮಾ ಜೊತೆಗೆ ಅನೇಕ ಸಾಮಾಜಿಕ ಕೆಲಸ ಮಾಡುವ ಮೂಲಕವೂ ಗುರುತಿಸಿಕೊಂಡಿದ್ದಾರೆ. ಪುನೀತ್ ಹೆಸರಲ್ಲಿ ಅವರು ಆ್ಯಂಬುಲೆನ್ಸ್ ಸೇವೆ ಕೂಡ ಆರಂಭಿಸಿದ್ದಾರೆ ಅನ್ನೋದು ವಿಶೇಷ. ಇನ್ನೂ ಹಲವು ಸಾಮಾಜಿಕ ಕೆಲಸಗಳು ಅವರ ಕಡೆಯಿಂದ ಆಗುತ್ತಿವೆ.

Published On - 2:27 pm, Tue, 26 March 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು