‘ಚಂದ್ರಯಾನ 3’ ಬಗ್ಗೆ ಪ್ರಕಾಶ್​ ರಾಜ್​ ಮಾಡಿದ ಹಾಸ್ಯದ ಹಿಂದೆ ಬೇರೆಯದೇ ಕಥೆ ಇದೆ; ವಿವರಿಸಿದ ನಟ

ತಾವು ಹಂಚಿಕೊಂಡಿರುವ ಟ್ವೀಟ್​ನ ಹಿಂದೆ ಇರುವ ಕತೆಯೇ ಬೇರೆ ಎಂದು ಪ್ರಕಾಶ್​ ರಾಜ್​ ವಿವರಿಸಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುವಂತಹ ಒಂದು ಲಿಂಕ್​ ಅನ್ನು ಕೂಡ ಅವರು ಹಂಚಿಕೊಂಡಿದ್ದಾರೆ. ಅದು ಬಹಳ ವರ್ಷಗಳ ಹಿಂದಿನ ಜೋಕ್​. ಅದನ್ನು ಈಗ ಪ್ರಕಾಶ್​ ರಾಜ್​ ಮತ್ತೆ ನೆನಪಿಸಿಕೊಂಡಿದ್ದಾರೆ.

‘ಚಂದ್ರಯಾನ 3’ ಬಗ್ಗೆ ಪ್ರಕಾಶ್​ ರಾಜ್​ ಮಾಡಿದ ಹಾಸ್ಯದ ಹಿಂದೆ ಬೇರೆಯದೇ ಕಥೆ ಇದೆ; ವಿವರಿಸಿದ ನಟ
ಪ್ರಕಾಶ್​ ರೈ
Follow us
|

Updated on: Aug 22, 2023 | 3:10 PM

ಬಹುಭಾಷಾ ನಟ ಪ್ರಕಾಶ್​ ರಾಜ್​ (Prakash Raj) ಅವರು ಈಗ ಚರ್ಚೆಯ ಕೇಂದ್ರಬಿಂದು ಆಗಿದ್ದಾರೆ. ಭಾರತವು ನಡೆಸಿದ ‘ಚಂದ್ರಯಾನ 3’ (Chandrayaan 3) ಬಗ್ಗೆ ಅವರು ಅಪಹಾಸ್ಯ ಮಾಡಿದ್ದಾರೆ ಎಂದು ಟ್ರೋಲಿಗರು ಗರಂ ಆಗಿದ್ದಾರೆ. ಪ್ರಕಾಶ್​ ರಾಜ್​ ಹಂಚಿಕೊಂಡ ಒಂದು ಕಾರ್ಟೂನ್​ ಇದಕ್ಕೆಲ್ಲ ಪ್ರಮುಖ ಕಾರಣ. ಆದರೆ ಚಂದ್ರಯಾನ ಯೋಜನೆಯನ್ನು ಅಪಹಾಸ್ಯ ಮಾಡುವ ಉದ್ದೇಶ ತಮ್ಮದಲ್ಲ ಎಂದು ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ತಾವು ಹಂಚಿಕೊಂಡಿರುವ ಟ್ವೀಟ್​ನ (Prakash Raj Tweet) ಹಿಂದೆ ಇರುವ ಕತೆಯೇ ಬೇರೆ ಎಂದು ಪ್ರಕಾಶ್​ ರಾಜ್​ ವಿವರಿಸಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುವಂತಹ ಒಂದು ಲಿಂಕ್​ ಅನ್ನು ಕೂಡ ಅವರು ಹಂಚಿಕೊಂಡಿದ್ದಾರೆ. ಅದು ಬಹಳ ವರ್ಷಗಳ ಹಿಂದಿನ ಜೋಕ್​. ಅದನ್ನು ಈಗ ಪ್ರಕಾಶ್​ ರೈ​ ಮತ್ತೆ ನೆನಪಿಸಿಕೊಂಡಿದ್ದಾರೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳದ ಅನೇಕರು ಸುಮ್ಮನೇ ಕೂಗಾಡಿದ್ದಾರೆ ಎಂಬುದು ಪ್ರಕಾಶ್​ ರಾಜ್​ ವಾದ.

1969ರಲ್ಲಿ ಅಮೆರಿಕದ ಗಗನಯಾತ್ರಿ ನೀಲ್​ ಆರ್ಮ್​ಸ್ಟ್ರಾಂಗ್​​ ಅವರು ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಟ್ಟರು. ಆ ಸಮಯದಲ್ಲಿ ಮಲಯಾಳಿಗಳ ಕುರಿತು ಒಂದು ಜೋಕ್​ ಹುಟ್ಟಿಕೊಂಡಿತ್ತು. ನೀಲ್​ ಆರ್ಮ್​ಸ್ಟ್ರಾಂಗ್​​ ಚಂದ್ರನ ಮೇಲೆ ಕಾಲಿಟ್ಟಾಗ ಅಲ್ಲಿ ಅವರಿಗೆ ಮೊದಲು ಕಾಣಿಸಿದ್ದು ಮಲಯಾಳಿ ಚಾಯ್​ವಾಲಾ. ಅಂದರೆ, ನೀಲ್​ ಆರ್ಮ್​ಸ್ಟ್ರಾಂಗ್​​ ಅವರಿಗಿಂತಲೂ ಮುನ್ನವೇ ಮಲಯಾಳಿಗಳು ಚಂದ್ರಲೋಕದಲ್ಲಿ ಚಹದ ಅಂಗಡಿ ತೆರೆದಿದ್ದರು ಎಂಬುದು ಆ ಜೋಕ್​ನ ಸಾರಾಂಶ. ಕೇರಳದವರು ಎಲ್ಲ ಕಡೆಗಳಲ್ಲಿ ವ್ಯಾಪಾರ ನಡೆಸುತ್ತಾರೆ ಎಂಬ ಅರ್ಥದಲ್ಲಿ ಆ ಜೋಕ್​ ಚಾಲ್ತಿಯಲ್ಲಿತ್ತು. ಅದನ್ನು ನೆನಪಿಸುವ ರೀತಿಯಲ್ಲಿ ಪ್ರಕಾಶ್​ ರಾಜ್​ ಅವರು ಈ ಕಾರ್ಟೂನ್​ ಹಂಚಿಕೊಂಡಿದ್ದಾರೆ. ಅದನ್ನು ಅರ್ಥ ಮಾಡಿಕೊಳ್ಳದೇ ಎಲ್ಲರೂ ಟ್ರೋಲ್​ ಮಾಡಿದ್ದಾರೆ.

ಇದನ್ನೂ ಓದಿ: ‘ವಾಟ್ಸಪ್​ ಯೂನಿವರ್ಸಿಟಿ’ ಬಗ್ಗೆ ಸಂದೇಶ ಇರುವ ಟಿ-ಶರ್ಟ್​ ಧರಿಸಿ ‘ಡೇರ್​ಡೆವಿಲ್​ ಮುಸ್ತಫಾ’ ಚಿತ್ರ ವೀಕ್ಷಿಸಿದ ಪ್ರಕಾಶ್​ ರಾಜ್​

‘ಎಲ್ಲರ ಗಮನಕ್ಕೆ.. ಗೋದಿ ಮೀಡಿಯಾದವರಿಗೆ ಮತ್ತು ಅನಕ್ಷರಸ್ಥ ಟ್ರೋಲ್​ನವರಿಗೆ ತಿಳಿದಿರುವುದು ಒಬ್ಬರೇ ಚಾಯ್​ವಾಲಾ. 1960ರ ಕಾಲದಿಂದಲೂ ಸ್ಫೂರ್ತಿದಾಯಕವಾಗಿರುವ ನಮ್ಮ ಮಲಯಾಳಿ ಚಾಯ್​ವಾಲಾ ಬಗ್ಗೆ ಹೆಮ್ಮೆಯಿಂದ ಹೇಳುತ್ತಿದ್ದೇನೆ. ತಿಳಿದುಕೊಳ್ಳಬೇಕಾದರೆ ಇದನ್ನು ಓದಿ’ ಎಂದು ಮೂಲ ಜೋಕ್​ ಇರುವ ಲಿಂಕ್​ ಅನ್ನು ಪ್ರಕಾಶ್​ ರಾಜ್​ ಅವರು ಹಂಚಿಕೊಂಡಿದ್ದಾರೆ.

ಪ್ರಕಾಶ್ ರಾಜ್ ಟ್ವೀಟ್​:

ಪ್ರಕಾಶ್ ರಾಜ್ ವಿರುದ್ಧ ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಹಿಂದೂ ಸಂಘಟನೆಯ ಮುಖಂಡ ನಂದು ಗಾಯಕವಾಡ ಅವರು ಪ್ರಕಾಶ್​ ರಾಜ್ ವಿರುದ್ಧ ದೂರು ನೀಡಿದ್ದಾರೆ. ‘ಪ್ರಕಾಶ್ ರೈ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನ ತಕ್ಷಣ ಬಂಧಿಸಬೇಕು. ಇಸ್ರೋ ವಿಜ್ಞಾನಿಗಳು ಕಳಿಸಿರುವ ಚಂದ್ರಯಾನ‌ ನೌಕೆಯ ಕಾರಣದಿಂದ ಭಾರತದ ಶಕ್ತಿ ಇಮ್ಮಡಿಯಾಗಿದೆ. ಅದಕ್ಕಾಗಿ ಎಲ್ಲರೂ ನಮ್ಮ ವಿಜ್ಞಾನಿಗಳನ್ನು ಹೊಗಳುತ್ತಿದ್ದಾರೆ. ಹಾಗಿದ್ದರೂ ಕೂಡ, ಪ್ರಕಾಶ್ ರಾಜ್ ಅವರು ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿ ವಿಕೃತಿ ತೋರಿದ್ದಾರೆ. ಪ್ರಕಾಶ್ ರಾಜ್ ವಿರುದ್ಧ ಕಾನೂನಿನ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದ್ದೇವೆ’ ಎಂದು ನಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?