AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MAA ಚುನಾವಣೆಯಲ್ಲಿ ಪ್ರಕಾಶ್​ ರಾಜ್​ಗೆ ಉಂಟಾಗಲಿದೆ ಹಿನ್ನಡೆ? ಕಳಚಿತು ಮೆಗಾ ಕುಟುಂಬದ ಬೆಂಬಲ

MAA ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ, ಜೀವಿತಾ ಮೊದಲಾದವರಿದ್ದಾರೆ ಎನ್ನಲಾಗಿದೆ. ಪ್ರಕಾಶ್​ ಅವರು ಇತ್ತೀಚೆಗೆ ಸಮಿತಿ ಒಂದನ್ನು ರಚನೆ ಮಾಡಿದ್ದರು. ಈ ಸಮಿತಿಗೆ ಜೀವಿತಾ ಸೇರ್ಪಡೆ ಆಗಿದ್ದಾರೆ.

MAA ಚುನಾವಣೆಯಲ್ಲಿ ಪ್ರಕಾಶ್​ ರಾಜ್​ಗೆ ಉಂಟಾಗಲಿದೆ ಹಿನ್ನಡೆ? ಕಳಚಿತು ಮೆಗಾ ಕುಟುಂಬದ ಬೆಂಬಲ
ಪ್ರಕಾಶ್​ ರೈ
TV9 Web
| Edited By: |

Updated on: Sep 06, 2021 | 3:38 PM

Share

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ನಟ ಪ್ರಕಾಶ್​ ರಾಜ್​ (ಪ್ರಕಾಶ್ ರೈ) ಸೇರಿ ಅನೇಕರು ಚುನಾವಣಾ ಕಣದಲ್ಲಿದ್ದಾರೆ. ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಅನೇಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರಕಾಶ್​ ರಾಜ್​ ನಮ್ಮವರಲ್ಲ ಎನ್ನುವ ಆರೋಪವನ್ನು ಅವರು ಮಾಡುತ್ತಿದ್ದಾರೆ. ಈ ಮಧ್ಯೆ, ಪ್ರಕಾಶ್​ ರಾಜ್​ಗೆ ಚುನಾವಣೆಯಲ್ಲಿ ಹಿನ್ನಡೆ ಆಗುವ ಬೆಳವಣಿಗೆಯೊಂದು ನಡೆದಿದೆ.

MAA ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ, ಜೀವಿತಾ ಮೊದಲಾದವರಿದ್ದಾರೆ ಎನ್ನಲಾಗಿದೆ. ಪ್ರಕಾಶ್​ ಅವರು ಇತ್ತೀಚೆಗೆ ಸಮಿತಿ ಒಂದನ್ನು ರಚನೆ ಮಾಡಿದ್ದರು. ಈ ಸಮಿತಿಗೆ ಜೀವಿತಾ ಸೇರ್ಪಡೆ ಆಗಿದ್ದಾರೆ. ಇದು ಮೆಗಾ ಕುಟುಂಬದ ಅನುಯಾಯಿ​ ಬಂಡ್ಲ ಗಣೇಶ್​ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ, ಅವರು ಪ್ರಕಾಶ್​ ರಾಜ್​ಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದಾರೆ. ಇದರಿಂದ ಪ್ರಕಾಶ್​ ರಾಜ್​ಗೆ ಹಿನ್ನಡೆ ಆಗುವ ಸಾಧ್ಯತೆ ಗೋಚರವಾಗಿದೆ.

‘ಪ್ರಕಾಶ್​ ರಾಜ್​ ವಿರುದ್ಧ ನನಗೆ ಯಾವುದೇ ಕೋಪವಿಲ್ಲ. ಜೀವಿತಾ ಅವರು ಪ್ರಕಾಶ್​ ರಾಜ್​ ಪರ ನಿಂತಿದ್ದಾರೆ. ಇದರಿಂದ ನಾನು ರಾತ್ರಿಯಿಡೀ ನಿದ್ರಿಸಿಲ್ಲ. ಚಿರಂಜೀವಿ ವಿರುದ್ಧ ಜೀವಿತಾ ಈ ಮೊದಲು ಆರೋಪಗಳನ್ನು ಮಾಡಿದ್ದರು. ಹೀಗಾಗಿ, ನಾನು ಜೀವಿತಾ ಅವರನ್ನು ವಿರೋಧಿಸುತ್ತಿದ್ದೇನೆ’ ಎಂದಿದ್ದಾರೆ ಗಣೇಶ್​.

‘ಕಳೆದ 2 ವರ್ಷಗಳಲ್ಲಿ MAAನ ಪ್ರಧಾನ ಕಾರ್ಯದರ್ಶಿಯಾಗಿ ಜೀವಿತಾ ಏನನ್ನೂ ಮಾಡಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಲ್ಲದೆ ಖಚಿತವಾಗಿಯೂ ಗೆಲ್ಲುತ್ತೇನೆ’ ಎಂದು ಭವಿಷ್ಯ ನುಡಿದಿದ್ದಾರೆ.

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್​ ರಾಜ್ ಸ್ಪರ್ಧಿಸುತ್ತಿದ್ದಾರೆ​. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ