AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MAA ಚುನಾವಣೆಯಲ್ಲಿ ಪ್ರಕಾಶ್​ ರಾಜ್​ಗೆ ಉಂಟಾಗಲಿದೆ ಹಿನ್ನಡೆ? ಕಳಚಿತು ಮೆಗಾ ಕುಟುಂಬದ ಬೆಂಬಲ

MAA ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ, ಜೀವಿತಾ ಮೊದಲಾದವರಿದ್ದಾರೆ ಎನ್ನಲಾಗಿದೆ. ಪ್ರಕಾಶ್​ ಅವರು ಇತ್ತೀಚೆಗೆ ಸಮಿತಿ ಒಂದನ್ನು ರಚನೆ ಮಾಡಿದ್ದರು. ಈ ಸಮಿತಿಗೆ ಜೀವಿತಾ ಸೇರ್ಪಡೆ ಆಗಿದ್ದಾರೆ.

MAA ಚುನಾವಣೆಯಲ್ಲಿ ಪ್ರಕಾಶ್​ ರಾಜ್​ಗೆ ಉಂಟಾಗಲಿದೆ ಹಿನ್ನಡೆ? ಕಳಚಿತು ಮೆಗಾ ಕುಟುಂಬದ ಬೆಂಬಲ
ಪ್ರಕಾಶ್​ ರೈ
TV9 Web
| Edited By: |

Updated on: Sep 06, 2021 | 3:38 PM

Share

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ನಟ ಪ್ರಕಾಶ್​ ರಾಜ್​ (ಪ್ರಕಾಶ್ ರೈ) ಸೇರಿ ಅನೇಕರು ಚುನಾವಣಾ ಕಣದಲ್ಲಿದ್ದಾರೆ. ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಅನೇಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರಕಾಶ್​ ರಾಜ್​ ನಮ್ಮವರಲ್ಲ ಎನ್ನುವ ಆರೋಪವನ್ನು ಅವರು ಮಾಡುತ್ತಿದ್ದಾರೆ. ಈ ಮಧ್ಯೆ, ಪ್ರಕಾಶ್​ ರಾಜ್​ಗೆ ಚುನಾವಣೆಯಲ್ಲಿ ಹಿನ್ನಡೆ ಆಗುವ ಬೆಳವಣಿಗೆಯೊಂದು ನಡೆದಿದೆ.

MAA ಚುನಾವಣಾ ಕಣದಲ್ಲಿ ಪ್ರಕಾಶ್​ ರಾಜ್​, ಮಂಚು ವಿಷ್ಣು, ಹೇಮಾ, ಜೀವಿತಾ ಮೊದಲಾದವರಿದ್ದಾರೆ ಎನ್ನಲಾಗಿದೆ. ಪ್ರಕಾಶ್​ ಅವರು ಇತ್ತೀಚೆಗೆ ಸಮಿತಿ ಒಂದನ್ನು ರಚನೆ ಮಾಡಿದ್ದರು. ಈ ಸಮಿತಿಗೆ ಜೀವಿತಾ ಸೇರ್ಪಡೆ ಆಗಿದ್ದಾರೆ. ಇದು ಮೆಗಾ ಕುಟುಂಬದ ಅನುಯಾಯಿ​ ಬಂಡ್ಲ ಗಣೇಶ್​ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ, ಅವರು ಪ್ರಕಾಶ್​ ರಾಜ್​ಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದಾರೆ. ಇದರಿಂದ ಪ್ರಕಾಶ್​ ರಾಜ್​ಗೆ ಹಿನ್ನಡೆ ಆಗುವ ಸಾಧ್ಯತೆ ಗೋಚರವಾಗಿದೆ.

‘ಪ್ರಕಾಶ್​ ರಾಜ್​ ವಿರುದ್ಧ ನನಗೆ ಯಾವುದೇ ಕೋಪವಿಲ್ಲ. ಜೀವಿತಾ ಅವರು ಪ್ರಕಾಶ್​ ರಾಜ್​ ಪರ ನಿಂತಿದ್ದಾರೆ. ಇದರಿಂದ ನಾನು ರಾತ್ರಿಯಿಡೀ ನಿದ್ರಿಸಿಲ್ಲ. ಚಿರಂಜೀವಿ ವಿರುದ್ಧ ಜೀವಿತಾ ಈ ಮೊದಲು ಆರೋಪಗಳನ್ನು ಮಾಡಿದ್ದರು. ಹೀಗಾಗಿ, ನಾನು ಜೀವಿತಾ ಅವರನ್ನು ವಿರೋಧಿಸುತ್ತಿದ್ದೇನೆ’ ಎಂದಿದ್ದಾರೆ ಗಣೇಶ್​.

‘ಕಳೆದ 2 ವರ್ಷಗಳಲ್ಲಿ MAAನ ಪ್ರಧಾನ ಕಾರ್ಯದರ್ಶಿಯಾಗಿ ಜೀವಿತಾ ಏನನ್ನೂ ಮಾಡಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಲ್ಲದೆ ಖಚಿತವಾಗಿಯೂ ಗೆಲ್ಲುತ್ತೇನೆ’ ಎಂದು ಭವಿಷ್ಯ ನುಡಿದಿದ್ದಾರೆ.

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್​ ರಾಜ್ ಸ್ಪರ್ಧಿಸುತ್ತಿದ್ದಾರೆ​. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್