AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ

ಖ್ಯಾತ ನಟ ಪ್ರಕಾಶ್ ರಾಜ್ ಅವರು ರಾಮಾಯಣದ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅನೇಕರು ಕಟುವಾಗಿ ಟೀಕಿಸಿದ್ದಾರೆ. ಪ್ರಕಾಶ್ ರಾಜ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೂಡ ಕೆಲವರು ಒತ್ತಾಯಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ
Prakash Raj Image Credit source: Kerala Literature Festival
ಮದನ್​ ಕುಮಾರ್​
|

Updated on: Apr 16, 2026 | 6:47 PM

Share

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಬಿಜೆಪಿ ನಿಲುವುಗಳನ್ನು ಅವರು ಆಗಾಗ ವಿರೋಧಿಸುತ್ತಾರೆ. ಆ ಕಾರಣದಿಂದ ಅವರನ್ನು ವಿರೋಧಿಗಳು ಟ್ರೋಲ್ ಮಾಡುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ (Ramayana) ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಪ್ರಕಾಶ್ ರಾಜ್ ಹೇಳುವುದೇನೆಂದರೆ ರಾಮನು ಉತ್ತರ ಭಾರತೀಯ, ರಾವಣನು ದಕ್ಷಿಣ ಭಾರತೀಯ ಆದಿವಾಸಿ. ರಾಮನು ಹಣ್ಣುಗಳನ್ನು ಕದ್ದ ಕಾರಣದಿಂದ ಅವರ ನಡುವಿನ ಸಂಘರ್ಷವು ಆರಂಭವಾಯಿತು. ನೀವು ಇತಿಹಾಸವನ್ನು ಚರ್ಚ್‌ನಿಂದ ಕಲಿತರೆ ಇಂತಹದ್ದೇ ಆಗುತ್ತದೆ’ ಎಂದು ನೆಟ್ಟಿಗರೊಬ್ಬರು ಟೀಕೆ ಮಾಡಿದ್ದಾರೆ.

‘ಪ್ರಕಾಶ್ ರಾಜ್ ತನ್ನದೇ ರಾಮಾಯಣವನ್ನು ರಚಿಸಿಕೊಂಡು, ಉತ್ತರ ಭಾರತದ ರಾಮನು ದಕ್ಷಿಣ ಭಾರತದ ಆದಿವಾಸಿಯಾದ ರಾವಣನಿಂದ ಹಣ್ಣುಗಳನ್ನು ಕದ್ದನೆಂದು ಹೇಳುತ್ತಿದ್ದಾರೆ. ಇದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮತ್ತೊಬ್ಬರು ಒತ್ತಾಯಿಸಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯ ಈಗ ಟ್ರೆಂಡ್ ಆಗುತ್ತಿದೆ.

‘ಹಿಂದೂಗಳನ್ನು ಅಪಹಾಸ್ಯ ಮಾಡಲು ಪ್ರಕಾಶ್ ರಾಜ್ ರಾಮಾಯಣದ ಕಲ್ಪಿತ ಆವೃತ್ತಿಯನ್ನು ವಿವರಿಸುತ್ತಾರೆ. ಅವರು ಈ ನಿಂದನೀಯ ಕಥೆಯನ್ನು ಕೇವಲ ಗೋಮಾಂಸ ಸೇವನೆಯನ್ನು ಉತ್ತೇಜಿಸಲು ಮತ್ತು ಉತ್ತರ-ದಕ್ಷಿಣ ವಿಭಜನೆಯನ್ನು ಸೃಷ್ಟಿಸಲು ಮಾಡಿದ್ದಾರೆ. ಇಂತಹ ವ್ಯಕ್ತಿಗೆ ದೃಶ್ಯಂ 3 ಮತ್ತು ವಾರಾಣಸಿ ಸಿನಿಮಾಗಳಲ್ಲಿ ಕೆಲಸ ಕೊಟ್ಟ ಅಜಯ್ ದೇವಗನ್ ಮತ್ತು ಎಸ್‌ಎಸ್ ರಾಜಮೌಳಿ ಅವರಿಗೆ ನಾಚಿಕೆ ಆಗಬೇಕು’ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ನಾನು ಪ್ರಕಾಶ್ ರಾಜ್ ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ಆದರೆ ಪ್ರೇಕ್ಷಕರಲ್ಲಿ ಇದ್ದ ಜನರು ಏನು ಮಾಡುತ್ತಿದ್ದರು? ಅವರ ಅಸಂಬದ್ಧ ಮಾತುಗಳಿಗೆ ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸುತ್ತಿದ್ದರು. ಯಾಕೆ ಯಾರೂ ಎದ್ದು ವಿರೋಧಿಸಲಿಲ್ಲ? ಅಲ್ಲಿ ಹಿಂದೂಗಳು ಯಾರೂ ಇರಲಿಲ್ಲವೇ?’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ಈ ರೀತಿಯ ಅನೇಕ ಟೀಕೆಗಳು ಎದುರಾಗಿವೆ. ಇವುಗಳಿಗೆ ಪ್ರಕಾಶ್ ರಾಜ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರ ತಾಯಿ ನಿಧನರಾದಾಗ ಅಂತ್ಯ ಸಂಸ್ಕಾರ ಮಾಡಿದ ರೀತಿಯ ಬಗ್ಗೆಯೂ ಅನೇಕರು ಟೀಕಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ