ರಾಮಾಯಣದ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ ವಿಡಿಯೋ ವೈರಲ್; ತೀವ್ರ ಟೀಕೆ
ಖ್ಯಾತ ನಟ ಪ್ರಕಾಶ್ ರಾಜ್ ಅವರು ರಾಮಾಯಣದ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅನೇಕರು ಕಟುವಾಗಿ ಟೀಕಿಸಿದ್ದಾರೆ. ಪ್ರಕಾಶ್ ರಾಜ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೂಡ ಕೆಲವರು ಒತ್ತಾಯಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ರಾಜಕೀಯದ ವಿಷಯಗಳ ಬಗ್ಗೆ ಆಗಾಗ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಬಿಜೆಪಿ ನಿಲುವುಗಳನ್ನು ಅವರು ಆಗಾಗ ವಿರೋಧಿಸುತ್ತಾರೆ. ಆ ಕಾರಣದಿಂದ ಅವರನ್ನು ವಿರೋಧಿಗಳು ಟ್ರೋಲ್ ಮಾಡುತ್ತಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ (Ramayana) ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಪ್ರಕಾಶ್ ರಾಜ್ ಹೇಳುವುದೇನೆಂದರೆ ರಾಮನು ಉತ್ತರ ಭಾರತೀಯ, ರಾವಣನು ದಕ್ಷಿಣ ಭಾರತೀಯ ಆದಿವಾಸಿ. ರಾಮನು ಹಣ್ಣುಗಳನ್ನು ಕದ್ದ ಕಾರಣದಿಂದ ಅವರ ನಡುವಿನ ಸಂಘರ್ಷವು ಆರಂಭವಾಯಿತು. ನೀವು ಇತಿಹಾಸವನ್ನು ಚರ್ಚ್ನಿಂದ ಕಲಿತರೆ ಇಂತಹದ್ದೇ ಆಗುತ್ತದೆ’ ಎಂದು ನೆಟ್ಟಿಗರೊಬ್ಬರು ಟೀಕೆ ಮಾಡಿದ್ದಾರೆ.
Prakash Raj claims Ram was a North Indian, Ravan a South Indian tribal, and their conflict began because Ram “STOLE FRUITS.”🥲
This is what happens when you learn itihas from church pic.twitter.com/yRJmEzwivq
— The Jaipur Dialogues (@JaipurDialogues) April 16, 2026
‘ಪ್ರಕಾಶ್ ರಾಜ್ ತನ್ನದೇ ರಾಮಾಯಣವನ್ನು ರಚಿಸಿಕೊಂಡು, ಉತ್ತರ ಭಾರತದ ರಾಮನು ದಕ್ಷಿಣ ಭಾರತದ ಆದಿವಾಸಿಯಾದ ರಾವಣನಿಂದ ಹಣ್ಣುಗಳನ್ನು ಕದ್ದನೆಂದು ಹೇಳುತ್ತಿದ್ದಾರೆ. ಇದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮತ್ತೊಬ್ಬರು ಒತ್ತಾಯಿಸಿದ್ದಾರೆ. ಟ್ವಿಟರ್ನಲ್ಲಿ ಈ ವಿಷಯ ಈಗ ಟ್ರೆಂಡ್ ಆಗುತ್ತಿದೆ.
Damn! This commie Prakash Raj has invented his own Ramayana saying North Indian Ram stole fruits from South Indian tribal Ravan. This needs legal action @HMOIndia
Blatant Hinduphobia pic.twitter.com/BGufumIiu9
— Monica Verma (@TrulyMonica) April 16, 2026
‘ಹಿಂದೂಗಳನ್ನು ಅಪಹಾಸ್ಯ ಮಾಡಲು ಪ್ರಕಾಶ್ ರಾಜ್ ರಾಮಾಯಣದ ಕಲ್ಪಿತ ಆವೃತ್ತಿಯನ್ನು ವಿವರಿಸುತ್ತಾರೆ. ಅವರು ಈ ನಿಂದನೀಯ ಕಥೆಯನ್ನು ಕೇವಲ ಗೋಮಾಂಸ ಸೇವನೆಯನ್ನು ಉತ್ತೇಜಿಸಲು ಮತ್ತು ಉತ್ತರ-ದಕ್ಷಿಣ ವಿಭಜನೆಯನ್ನು ಸೃಷ್ಟಿಸಲು ಮಾಡಿದ್ದಾರೆ. ಇಂತಹ ವ್ಯಕ್ತಿಗೆ ದೃಶ್ಯಂ 3 ಮತ್ತು ವಾರಾಣಸಿ ಸಿನಿಮಾಗಳಲ್ಲಿ ಕೆಲಸ ಕೊಟ್ಟ ಅಜಯ್ ದೇವಗನ್ ಮತ್ತು ಎಸ್ಎಸ್ ರಾಜಮೌಳಿ ಅವರಿಗೆ ನಾಚಿಕೆ ಆಗಬೇಕು’ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
Prakash Raj narrates a made up version of Ramayan to mock Hindus
-Ram JI was North Indian -Ravan was South Indian tribal -They became enemies bcz Ram Ji stole fruits from Ravan
And he made this blasphemous story only to promote beef eating and create north south divide
Shame… pic.twitter.com/HFAV95HXbR
— Amit Kumar Sindhi (@AMIT_GUJJU) April 16, 2026
‘ನಾನು ಪ್ರಕಾಶ್ ರಾಜ್ ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ಆದರೆ ಪ್ರೇಕ್ಷಕರಲ್ಲಿ ಇದ್ದ ಜನರು ಏನು ಮಾಡುತ್ತಿದ್ದರು? ಅವರ ಅಸಂಬದ್ಧ ಮಾತುಗಳಿಗೆ ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸುತ್ತಿದ್ದರು. ಯಾಕೆ ಯಾರೂ ಎದ್ದು ವಿರೋಧಿಸಲಿಲ್ಲ? ಅಲ್ಲಿ ಹಿಂದೂಗಳು ಯಾರೂ ಇರಲಿಲ್ಲವೇ?’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್ನಲ್ಲಿ ಪ್ರಾರ್ಥನೆ: ವಿಡಿಯೋ
ಈ ರೀತಿಯ ಅನೇಕ ಟೀಕೆಗಳು ಎದುರಾಗಿವೆ. ಇವುಗಳಿಗೆ ಪ್ರಕಾಶ್ ರಾಜ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರ ತಾಯಿ ನಿಧನರಾದಾಗ ಅಂತ್ಯ ಸಂಸ್ಕಾರ ಮಾಡಿದ ರೀತಿಯ ಬಗ್ಗೆಯೂ ಅನೇಕರು ಟೀಕಿಸಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




