AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪ್ರಕಾಶ್​ ರೈಗೆ ಗಾಯ; ಹೈದರಾಬಾದ್​ನಲ್ಲಿ ಶಸ್ತ್ರ ಚಿಕಿತ್ಸೆ: ಇಲ್ಲಿದೆ ಹೆಲ್ತ್​ ಅಪ್​ಡೇಟ್​

ಮೂಲಗಳ ಪ್ರಕಾರ, ಧನುಷ್​​ ನಟನೆಯ ಹೊಸ ಸಿನಿಮಾದಲ್ಲಿ ಪ್ರಕಾಶ್​ ರೈ ನಟಿಸುತ್ತಿದ್ದರು. ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಸ್ವತಃ ಪ್ರಕಾಶ್​ ರೈ ಮಾಹಿತಿ ಹಂಚಿಕೊಂಡಿದ್ದಾರೆ.

ನಟ ಪ್ರಕಾಶ್​ ರೈಗೆ ಗಾಯ; ಹೈದರಾಬಾದ್​ನಲ್ಲಿ ಶಸ್ತ್ರ ಚಿಕಿತ್ಸೆ: ಇಲ್ಲಿದೆ ಹೆಲ್ತ್​ ಅಪ್​ಡೇಟ್​
ಪ್ರಕಾಶ್​ ರೈ
TV9 Web
| Edited By: |

Updated on: Aug 10, 2021 | 4:25 PM

Share

ಬಹುಭಾಷಾ ನಟ ಪ್ರಕಾಶ್​ ರೈ (Prakash Rai) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಜಕೀಯದ ಸಿದ್ಧಾಂತದ ಸಲುವಾಗಿ ಎಷ್ಟೇ ವಿವಾದಗಳನ್ನು ಅವರು ಮೈಮೇಲೆ ಎಳೆದುಕೊಂಡರೂ ಕೂಡ ಅವರಿಗೆ ಇರುವ ಬೇಡಿಕೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಈ ನಡುವೆ ಪ್ರಕಾಶ್​ ರೈ (Prakash Raj) ಅವರು ಶೂಟಿಂಗ್​ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿರುವ ಘಟನೆ ನಡೆದಿದೆ. ತಕ್ಷಣ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡ ಬಳಿಕ ಅವರು ಹೈದರಾಬಾದ್​ಗೆ ತೆರಳಿದ್ದಾರೆ. ಹೈದರಾಬಾದ್​ನಲ್ಲಿ ಪ್ರಕಾಶ್​ ರೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.

ಮೂಲಗಳ ಪ್ರಕಾರ, ಧನುಷ್​​ ನಟನೆಯ ಹೊಸ ಸಿನಿಮಾದಲ್ಲಿ ಪ್ರಕಾಶ್​ ರೈ ನಟಿಸುತ್ತಿದ್ದರು. ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಸ್ವತಃ ಪ್ರಕಾಶ್​ ರೈ ಮಾಹಿತಿ ಹಂಚಿಕೊಂಡಿದ್ದಾರೆ. ‘ಒಂದು ಸಣ್ಣ ಪೆಟ್ಟಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ, ಡಾ. ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ನಾನು ಬೇಗ ಗುಣಮುಖನಾಗುತ್ತೇನೆ. ಚಿಂತೆ ಮಾಡಬೇಕಾದ ಅಗತ್ಯ ಇಲ್ಲ. ನನಗಾಗಿ ಪ್ರಾರ್ಥಿಸಿ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಇತ್ತೀಚೆಗೆ ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಶಿಯೇಷನ್​ (MAA) ಚುನಾವಣೆ ಕಾರಣಕ್ಕಾಗಿ ಪ್ರಕಾಶ್​ ರೈ ಸುದ್ದಿ ಆಗಿದ್ದರು. MAA ಚುನಾವಣೆಯಲ್ಲಿ ಅವರು ಪ್ರೆಸಿಡೆಂಟ್​ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಅದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಪ್ರಕಾಶ್​ ರೈ ಅವರು ಮೂಲತಃ ತೆಲುಗು ಕಲಾವಿದ ಅಲ್ಲ. ಹಾಗಾಗಿ ಅವರು ಮಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಕರಾರು ತೆಗೆಯಲಾಗಿದೆ. ಅದಕ್ಕೆ ಪ್ರಕಾಶ್​ ರೈ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು.

‘ನಾನು ತೆಲಂಗಾಣದಲ್ಲಿ ಒಂದು ಹಳ್ಳಿಯನ್ನು ದತ್ತು ಪಡೆದುಕೊಂಡಾಗ ಯಾರೂ ಕೂಡ ನಾನು ಸ್ಥಳೀಯನಲ್ಲ ಎಂದು ಹೇಳಲಿಲ್ಲ. ನನ್ನ ಸಹಾಯಕರಿಗಾಗಿ ನಾನು ಹೈದರಾಬಾದ್​ನಲ್ಲಿ ಮನೆ ಖರೀದಿಸಿದೆ. ನನ್ನ ಮಗ ಹೈದರಾಬಾದ್​ನ ಶಾಲೆಗೆ ಹೋಗುತ್ತಾನೆ. ನನ್ನ ಆಧಾರ್​ ವಿಳಾಸ ಕೂಡ ಹೈದರಾಬಾದ್​ನದ್ದು. ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಕ್ಕೆ ನನಗೆ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಯಾವುದೇ ವಿಚಾರಗಳಿಗೆ ನಾನು ಹೊರಗಿನವನು ಎಂಬುದು ಅಡ್ಡಬರಲಿಲ್ಲ. ಈಗ ಯಾಕೆ ಪ್ರಶ್ನೆ ಎದ್ದಿದೆ? ನಾನು ಸ್ಥಳೀಯನಲ್ಲ ಎಂದು ಕೇಳುವವರ ಸಂಕುಚಿತ ಮನೋಭಾವವನ್ನು ಇದು ತೋರಿಸುತ್ತದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದರು.

ಇದನ್ನೂ ಓದಿ:

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ