ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ

Prakash Raj: ಭುಜದ ಸರ್ಜರಿ ಬಳಿಕ ಪ್ರಕಾಶ್​ ರೈ ಹೆಚ್ಚು ಸಮಯ ವಿಶ್ರಾಂತಿ ತೆಗೆದುಕೊಂಡಿಲ್ಲ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿರುವ ಅವರು ಅನೇಕ ಚಟುವಟಿಕೆಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಮೆಗಾಸ್ಟಾರ್​ ಚಿರಂಜೀವಿ ಅವರನ್ನು ಭೇಟಿ ಆಗಿದ್ದಾರೆ.

ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​; ಇನ್ನಷ್ಟು ಹೆಚ್ಚಿತು ಅನುಮಾನ
ಸರ್ಜರಿ ಬಳಿಕ​ ಚಿರಂಜೀವಿ ಜೊತೆ ಪ್ರಕಾಶ್​ ರೈ ಫೋಟೋ ವೈರಲ್​
Follow us
| Updated By: ಮದನ್​ ಕುಮಾರ್​

Updated on: Aug 17, 2021 | 1:03 PM

ನಟ ಪ್ರಕಾಶ್​ ರೈ (Prakash Rai) ಅವರು ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಸಿದ್ಧಾಂತಗಳ ಕಾರಣಕ್ಕಾಗಿ ಅವರ ಬಗ್ಗೆ ಪರ-ವಿರೋಧದ ಮಾತು ಕೇಳಿಬಂದರೂ ಕೂಡ ನಟನಾಗಿ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ವಿವಾದ ಎಷ್ಟೇ ಇದ್ದರೂ ಪ್ರಕಾಶ್​ ರಾಜ್​ (Prakash Raj) ಕಾಲ್​ಶೀಟ್​ಗಾಗಿ ನಿರ್ಮಾಪಕ-ನಿರ್ದೇಶಕರು ಇಂದಿಗೂ ಅವರ ಮನೆ ಮುಂದೆ ಸಾಲುಗಟ್ಟಿ ನಿಲ್ಲುತ್ತಾರೆ. ಇತ್ತೀಚೆಗಷ್ಟೇ ಸಿನಿಮಾವೊಂದರ ಶೂಟಿಂಗ್​ ವೇಳೆ ಅವರು ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಅವರಿಗೆ ಸರ್ಜರಿ ಕೂಡ ಮಾಡಲಾಗಿತ್ತು. ಈಗ ಅವರು ಏನಾಏಕಿ ‘ಮೆಗಾ ಸ್ಟಾರ್​’ ಚಿರಂಜೀವಿ (Megastar Chiranjeevi) ಜೊತೆ ಇರುವ ಫೋಟೋ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಟನೆ ಮಾತ್ರವಲ್ಲದೇ ಅನೇಕ ವಿಚಾರಗಳಲ್ಲಿ ಪ್ರಕಾಶ್​ ರೈ ಅವರು ಮುಂದಾಳತ್ವ ವಹಿಸುತ್ತಾರೆ. ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಕುರಿತು ಬಹಳ ದೊಡ್ಡ ಚರ್ಚೆ ಆಗಿತ್ತು. ಪ್ರಕಾಶ್​ ರೈ ಮೂಲತಃ ತೆಲುಗಿನ ಕಲಾವಿದ ಅಲ್ಲ ಎಂಬ ಕಾರಣದಿಂದ ಈ ಚುನಾವಣೆಯಲ್ಲಿ ಅವರು ಸ್ಪರ್ಧಿಸುವಂತಿಲ್ಲ ಎಂದು ಕೆಲವರು ಆಕ್ಷೇಪ ಎತ್ತುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲವರು ಪ್ರಕಾಶ್​ ರೈಗೆ ಸಪೋರ್ಟ್​ ಮಾಡುತ್ತಿದ್ದಾರೆ. ಅವರಿಗೆ ಬೆಂಬಲ ನೀಡುತ್ತಿರುವವರಲ್ಲಿ ಚಿರಂಜೀವಿ ಕೂಡ ಪ್ರಮುಖಕರು ಎಂಬ ಮಾತಿದೆ. ಆ ಮಾತಿಗೆ ಪುಷ್ಟಿ ನೀಡುವ ರೀತಿಯಲ್ಲಿ ಈ ಫೋಟೋ ಕಣ್ಣು ಕುಕ್ಕುತ್ತಿದೆ.

ಭುಜದ ಸರ್ಜರಿ ಬಳಿಕ ಪ್ರಕಾಶ್​ ರೈ ಹೆಚ್ಚು ಸಮಯ ವಿಶ್ರಾಂತಿ ತೆಗೆದುಕೊಂಡಿಲ್ಲ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿರುವ ಅವರು ಅನೇಕ ಚಟುವಟಿಕೆಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಅದೇ ರೀತಿ ಜಿಮ್​ಗೂ ತೆರಳಿದ್ದಾರೆ. ಜಿಮ್​ನಲ್ಲಿಯೇ ಅವರು ಚಿರಂಜೀವಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಫೋಟೋ ಕ್ಲಿಕ್ಕಿಸಿಕೊಂಡು ಅದನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ಪ್ರಕಾಶ್​ ರೈ ನೀಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ‘ಬೆಳಗ್ಗೆ ಜಿಮ್​ನಲ್ಲಿ ಬಾಸ್ ಜೊತೆ ಭೇಟಿ. ಸಿನಿಮಾದವರ ಸಮಸ್ಯೆ ಪರಿಹರಿಸಲು ಮುಂದಾಳತ್ವ ವಹಿಸಿದ್ದಕಾಗಿ ಅವರಿಗೆ ಧನ್ಯವಾದ ತಿಳಿಸಿದ್ದೇನೆ. ಸದಾ ಸ್ಫೂರ್ತಿ ನೀಡುವ ಅಣ್ಣಯ್ಯ. ಅವರನ್ನು ಪಡೆದಿರುವ ನಾವು ಧನ್ಯರು’ ಎಂದು ಪ್ರಕಾಶ್​ ರೈ ಬರೆದುಕೊಂಡಿದ್ದಾರೆ. ​ಹಲವು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿರುವ ಈ ಕಲಾವಿದರ ನಡುವೆ ಉತ್ತಮ ಬಾಂಧವ್ಯ ಇದೆ.

ಇದನ್ನೂ ಓದಿ:

ಪ್ರೀತಿಸುವವರಿಗಾಗಿ ಆಸ್ಪತ್ರೆಯಿಂದಲೇ ಸೆಲ್ಫಿ ಕಳಿಸಿದ ಪ್ರಕಾಶ್​ ರೈ; ‘ನೀವು ಡೆವಿಲ್​ ಅಲ್ಲ’ ಎಂದ ಫ್ಯಾನ್ಸ್​

ನಟ ಪ್ರಕಾಶ್​ ರೈಗೆ ಗಾಯ; ಹೈದರಾಬಾದ್​ನಲ್ಲಿ ಶಸ್ತ್ರ ಚಿಕಿತ್ಸೆ: ಇಲ್ಲಿದೆ ಹೆಲ್ತ್​ ಅಪ್​ಡೇಟ್​

(Prakash Raj meets Megastar Chiranjeevi in gym after shoulder surgery)

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ