AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

MAA Election: ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಕ್ಕೆ ನನಗೆ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಯಾವುದೇ ವಿಚಾರಗಳಿಗೆ ನಾನು ಹೊರಗಿನವನು ಎಂಬುದು ಅಡ್ಡಬರಲಿಲ್ಲ. ಈಗ ಯಾಕೆ ಪ್ರಶ್ನೆ ಎದ್ದಿದೆ ಎಂದು ಪ್ರಕಾಶ್​ ರಾಜ್​ ಕೇಳಿದ್ದಾರೆ.

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?
ಪ್ರಕಾಶ್​ ರೈ
TV9 Web
| Edited By: |

Updated on: Jun 25, 2021 | 1:51 PM

Share

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟ ಪ್ರಕಾಶ್​ ರಾಜ್​ (ಪ್ರಕಾಶ್​ ರೈ) ಅವರು ಬಹುಭಾಷೆಯಲ್ಲಿ ಫೇಮಸ್​. ಕನ್ನಡ ಮಾತ್ರವಲ್ಲದೆ ಹಿಂದಿ, ಮಲಯಾಳಂ, ತಮಿಳು, ತೆಲುಗಿನಲ್ಲಿಯೂ ಅವರು ನಟಿಸಿ ಗೆದ್ದಿದ್ದಾರೆ. ಅನೇಕ ವರ್ಷಗಳಿಂದ ಅವರು ಟಾಲಿವುಡ್​ ಮಂದಿಗೆ ಚಿರಪರಿಚಿತರು. ಆದರೆ ಈಗ ಏಕಾಏಕಿ ತೆಲುಗು ಚಿತ್ರರಂಗದ ಕೆಲವರು ‘ಪ್ರಕಾಶ್​ ರಾಜ್​ ನಮ್ಮವನಲ್ಲ’ ಎಂದು ಬೊಬ್ಬೆ ಹೊಡೆಯಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಒಂದೇ ಒಂದು ಎಲೆಕ್ಷನ್​!

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಕಾಶ್​ ರಾಜ್​ ತೀರ್ಮಾನಿಸಿದ್ದಾರೆ. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ತಕರಾರು ತೆಗೆದಿದ್ದಾರೆ. ಇದಕ್ಕೆ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು ನೀಡಿದ್ದಾರೆ.

‘ನಾನು ತೆಲಂಗಾಣದಲ್ಲಿ ಒಂದು ಹಳ್ಳಿಯನ್ನು ದತ್ತು ಪಡೆದುಕೊಂಡಾಗ ಯಾರೂ ಕೂಡ ನಾನು ಸ್ಥಳೀಯನಲ್ಲ ಎಂದು ಹೇಳಲಿಲ್ಲ. ನನ್ನ ಸಹಾಯಕರಿಗಾಗಿ ನಾನು ಹೈದರಾಬಾದ್​ನಲ್ಲಿ ಮನೆ ಖರೀದಿಸಿದೆ. ನನ್ನ ಮಗ ಹೈದರಾಬಾದ್​ನ ಶಾಲೆಗೆ ಹೋಗುತ್ತಾನೆ. ನನ್ನ ಆಧಾರ್​ ವಿಳಾಸ ಕೂಡ ಹೈದರಾಬಾದ್​ನದ್ದು. ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಕ್ಕೆ ನನಗೆ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಯಾವುದೇ ವಿಚಾರಗಳಿಗೆ ನಾನು ಹೊರಗಿನವನು ಎಂಬುದು ಅಡ್ಡಬರಲಿಲ್ಲ. ಈಗ ಯಾಕೆ ಪ್ರಶ್ನೆ ಎದ್ದಿದೆ? ನಾನು ಸ್ಥಳೀಯನಲ್ಲ ಎಂದು ಕೇಳುವವರ ಸಂಕುಚಿತ ಮನೋಭಾವವನ್ನು ಇದು ತೋರಿಸುತ್ತದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಎಲೆಕ್ಷನ್​ನಲ್ಲಿ ಸ್ಪರ್ಧಿಸಬೇಕು ಎಂದು ಪ್ರಕಾಶ್​ ರಾಜ್​ ಏಕಾಏಕಿ ನಿರ್ಧಾರ ತೆಗೆದುಕೊಂಡಿರುವುದಲ್ಲ. ಒಂದು ವರ್ಷದಿಂದ ಈ ಬಗ್ಗೆ ಆಲೋಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ‘ಮೂರು ದಶಕಗಳಿಂದ ನಾನು ಈ ಚಿತ್ರರಂಗದಲ್ಲಿ ಇದ್ದೇನೆ. ಸದ್ಯದ ಬೆಳವಣಿಗೆಗಳ ಬಗ್ಗೆ ನನಗೆ ಸಮಾಧಾನವಿಲ್ಲ. ದೂಷಣೆ ಮಾಡುವುದು ಸುಲಭ. ಆದರೆ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಧ್ಯಕ್ಷನಾಗಲು ನಾನು ಸೂಕ್ತ ಎಂದು ನನ್ನ ಸಹ-ಕಲಾವಿದರು ಹೇಳಿದರು. ಕಳೆದ ವರ್ಷದ ಘಟನೆಗಳನ್ನು ನೋಡಿದ ಬಳಿಕ ನಾನು ಈ ತೀರ್ಮಾನಕ್ಕೆ ಬಂದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ:

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

ತಮಿಳು ಚಿತ್ರರಂಗದ ಕಾಮಿಡಿ ನಟ ವಿವೇಕ್ ಅಸ್ಥಿ ಹುಟ್ಟೂರಿನ ಸ್ಮಶಾನದ ಮರಗಳಿಗೆ ಗೊಬ್ಬರವಾಯ್ತು

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ