AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

MAA Election: ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಕ್ಕೆ ನನಗೆ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಯಾವುದೇ ವಿಚಾರಗಳಿಗೆ ನಾನು ಹೊರಗಿನವನು ಎಂಬುದು ಅಡ್ಡಬರಲಿಲ್ಲ. ಈಗ ಯಾಕೆ ಪ್ರಶ್ನೆ ಎದ್ದಿದೆ ಎಂದು ಪ್ರಕಾಶ್​ ರಾಜ್​ ಕೇಳಿದ್ದಾರೆ.

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?
ಪ್ರಕಾಶ್​ ರೈ
TV9 Web
| Edited By: |

Updated on: Jun 25, 2021 | 1:51 PM

Share

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟ ಪ್ರಕಾಶ್​ ರಾಜ್​ (ಪ್ರಕಾಶ್​ ರೈ) ಅವರು ಬಹುಭಾಷೆಯಲ್ಲಿ ಫೇಮಸ್​. ಕನ್ನಡ ಮಾತ್ರವಲ್ಲದೆ ಹಿಂದಿ, ಮಲಯಾಳಂ, ತಮಿಳು, ತೆಲುಗಿನಲ್ಲಿಯೂ ಅವರು ನಟಿಸಿ ಗೆದ್ದಿದ್ದಾರೆ. ಅನೇಕ ವರ್ಷಗಳಿಂದ ಅವರು ಟಾಲಿವುಡ್​ ಮಂದಿಗೆ ಚಿರಪರಿಚಿತರು. ಆದರೆ ಈಗ ಏಕಾಏಕಿ ತೆಲುಗು ಚಿತ್ರರಂಗದ ಕೆಲವರು ‘ಪ್ರಕಾಶ್​ ರಾಜ್​ ನಮ್ಮವನಲ್ಲ’ ಎಂದು ಬೊಬ್ಬೆ ಹೊಡೆಯಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಒಂದೇ ಒಂದು ಎಲೆಕ್ಷನ್​!

ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಕಾಶ್​ ರಾಜ್​ ತೀರ್ಮಾನಿಸಿದ್ದಾರೆ. ಆದರೆ ಅವರು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಪ್ರಕಾಶ್​ ರಾಜ್​ ಮೂಲತಃ ಕನ್ನಡದವರು. ಅವರ ಮಾತೃಭಾಷೆ ಕನ್ನಡ. ಹಾಗಾಗಿ ಅವರು ಎಂಎಎ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದು ಸರಿಯಲ್ಲ ಎಂದು ತಕರಾರು ತೆಗೆದಿದ್ದಾರೆ. ಇದಕ್ಕೆ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು ನೀಡಿದ್ದಾರೆ.

‘ನಾನು ತೆಲಂಗಾಣದಲ್ಲಿ ಒಂದು ಹಳ್ಳಿಯನ್ನು ದತ್ತು ಪಡೆದುಕೊಂಡಾಗ ಯಾರೂ ಕೂಡ ನಾನು ಸ್ಥಳೀಯನಲ್ಲ ಎಂದು ಹೇಳಲಿಲ್ಲ. ನನ್ನ ಸಹಾಯಕರಿಗಾಗಿ ನಾನು ಹೈದರಾಬಾದ್​ನಲ್ಲಿ ಮನೆ ಖರೀದಿಸಿದೆ. ನನ್ನ ಮಗ ಹೈದರಾಬಾದ್​ನ ಶಾಲೆಗೆ ಹೋಗುತ್ತಾನೆ. ನನ್ನ ಆಧಾರ್​ ವಿಳಾಸ ಕೂಡ ಹೈದರಾಬಾದ್​ನದ್ದು. ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಕ್ಕೆ ನನಗೆ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಯಾವುದೇ ವಿಚಾರಗಳಿಗೆ ನಾನು ಹೊರಗಿನವನು ಎಂಬುದು ಅಡ್ಡಬರಲಿಲ್ಲ. ಈಗ ಯಾಕೆ ಪ್ರಶ್ನೆ ಎದ್ದಿದೆ? ನಾನು ಸ್ಥಳೀಯನಲ್ಲ ಎಂದು ಕೇಳುವವರ ಸಂಕುಚಿತ ಮನೋಭಾವವನ್ನು ಇದು ತೋರಿಸುತ್ತದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಎಲೆಕ್ಷನ್​ನಲ್ಲಿ ಸ್ಪರ್ಧಿಸಬೇಕು ಎಂದು ಪ್ರಕಾಶ್​ ರಾಜ್​ ಏಕಾಏಕಿ ನಿರ್ಧಾರ ತೆಗೆದುಕೊಂಡಿರುವುದಲ್ಲ. ಒಂದು ವರ್ಷದಿಂದ ಈ ಬಗ್ಗೆ ಆಲೋಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ‘ಮೂರು ದಶಕಗಳಿಂದ ನಾನು ಈ ಚಿತ್ರರಂಗದಲ್ಲಿ ಇದ್ದೇನೆ. ಸದ್ಯದ ಬೆಳವಣಿಗೆಗಳ ಬಗ್ಗೆ ನನಗೆ ಸಮಾಧಾನವಿಲ್ಲ. ದೂಷಣೆ ಮಾಡುವುದು ಸುಲಭ. ಆದರೆ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಧ್ಯಕ್ಷನಾಗಲು ನಾನು ಸೂಕ್ತ ಎಂದು ನನ್ನ ಸಹ-ಕಲಾವಿದರು ಹೇಳಿದರು. ಕಳೆದ ವರ್ಷದ ಘಟನೆಗಳನ್ನು ನೋಡಿದ ಬಳಿಕ ನಾನು ಈ ತೀರ್ಮಾನಕ್ಕೆ ಬಂದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ:

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

ತಮಿಳು ಚಿತ್ರರಂಗದ ಕಾಮಿಡಿ ನಟ ವಿವೇಕ್ ಅಸ್ಥಿ ಹುಟ್ಟೂರಿನ ಸ್ಮಶಾನದ ಮರಗಳಿಗೆ ಗೊಬ್ಬರವಾಯ್ತು

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು