AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸುವವರಿಗಾಗಿ ಆಸ್ಪತ್ರೆಯಿಂದಲೇ ಸೆಲ್ಫಿ ಕಳಿಸಿದ ಪ್ರಕಾಶ್​ ರೈ; ‘ನೀವು ಡೆವಿಲ್​ ಅಲ್ಲ’ ಎಂದ ಫ್ಯಾನ್ಸ್​

Prakash Raj: ಶಸ್ತ್ರ ಚಿಕಿತ್ಸೆ ಆಗಿರುವುದಕ್ಕೆ ಭಯಪಡುವ ಅಗತ್ಯ ಇಲ್ಲ ಎಂದು ಪ್ರಕಾಶ್​ ರೈ ಹೇಳಿದ್ದಾರೆ. ಆಸ್ಪತ್ರೆ ಬೆಡ್​​ ಮೇಲೆ ಮಲಗಿಯೇ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಅವರು, ಸೋಶಿಯಲ್​ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾರೆ.

ಪ್ರೀತಿಸುವವರಿಗಾಗಿ ಆಸ್ಪತ್ರೆಯಿಂದಲೇ ಸೆಲ್ಫಿ ಕಳಿಸಿದ ಪ್ರಕಾಶ್​ ರೈ; ‘ನೀವು ಡೆವಿಲ್​ ಅಲ್ಲ’ ಎಂದ ಫ್ಯಾನ್ಸ್​
ಪ್ರಕಾಶ್​ ರೈ
TV9 Web
| Edited By: |

Updated on:Aug 12, 2021 | 9:58 AM

Share

ಬಹುಭಾಷಾ ನಟ ಪ್ರಕಾಶ್​ ರೈ​ (Prakash Rai) ಅವರು ಇತ್ತೀಚೆಗಷ್ಟೇ ಶೂಟಿಂಗ್​ ಸಂದರ್ಭದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಆ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಆತಂಕ ಆಗಿತ್ತು. ತಮಗೆ ಏನಾಗಿದೆ ಎಂಬ ಬಗ್ಗೆ ಪ್ರಕಾಶ್​ ರೈ ಟ್ವಿಟರ್​ ಮೂಲಕ ಮಾಹಿತಿ ನೀಡಿ, ಅಭಿಮಾನಿಗಳ ಆತಂಕವನ್ನು ದೂರ ಮಾಡಲು ಪ್ರಯತ್ನಿಸಿದ್ದರು. ಈಗ ಅವರಿಗೆ ಶಸ್ತ್ರ ಚಿಕಿತ್ಸೆ (Surgery) ಮಾಡಲಾಗಿದೆ. ಆಪರೇಷನ್​ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಅವರು ಅದನ್ನು ಅಭಿಮಾನಿಗಳ ಜೊತೆ ಶೇರ್​ ಮಾಡಿಕೊಂಡಿದ್ದಾರೆ. ಅಲ್ಲದೆ, ತಮ್ಮ ಆರೋಗ್ಯ ಈಗ ಹೇಗಿದೆ ಎಂಬ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

ಧನುಶ್​ ಅಭಿನಯದ ಡಿ44 ಸಿನಿಮಾದ ಶೂಟಿಂಗ್​ ವೇಳೆ ಪ್ರಕಾಶ್​ ರೈ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡ ಬಳಿಕ ಅವರು ಹೈದರಾಬಾದ್​ಗೆ ತೆರಳಿದ್ದರು. ತಮ್ಮ ಸ್ನೇಹಿತ ವೈದ್ಯರಿಂದಲೇ ಹೈದರಾಬಾದ್​ನಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದರು.

ಪ್ರಕಾಶ್​ ರಾಜ್​ ಪೆಟ್ಟು ಮಾಡಿಕೊಂಡಿರುವುದು ಮತ್ತು ಆಪರೇಷನ್​ ಅಗತ್ಯವಿದೆ ಎಂಬ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಆದರೆ ಭಯಪಡುವ ಅಗತ್ಯ ಇಲ್ಲ ಎಂದು ಪ್ರಕಾಶ್​ ರೈ ಈಗ ಪ್ರತಿಕ್ರಿಯೆ ನೀಡಿದ್ದಾರೆ. ಆಸ್ಪತ್ರೆ ಬೆಡ್​​ ಮೇಲೆ ಮಲಗಿಯೇ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಅವರು, ಸೋಶಿಯಲ್​ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಅದಕ್ಕೆ ಅಭಿಮಾನಿಗಳು ಪ್ರೀತಿಯಿಂದ ಕಮೆಂಟ್​ ಮಾಡಿದ್ದಾರೆ.

‘ಡೆವಿಲ್​ ಈಸ್​ ಬ್ಯಾಕ್​. ಸರ್ಜರಿ ಯಶಸ್ವಿ ಆಗಿದೆ. ಆತ್ಮೀಯ ಗೆಳೆಯ ಡಾ. ಗುರುವರೆಡ್ಡಿ ಅವರಿಗೆ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಪ್ರಕಾಶ್​ ರೈ ಬರೆದುಕೊಂಡಿದ್ದಾರೆ. ‘ಸರ್​, ನೀವು ಸಿನಿಮಾದಲ್ಲಿ ಮಾತ್ರ ಡೆವಿಲ್​. ನೈಜ ಬದುಕಿನಲ್ಲಿ ಏಂಜಲ್​’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಇತ್ತೀಚೆಗೆ ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಶಿಯೇಷನ್​ (MAA) ಚುನಾವಣೆ ಕಾರಣಕ್ಕಾಗಿ ಪ್ರಕಾಶ್​ ರೈ ಸುದ್ದಿ ಆಗಿದ್ದರು. MAA ಚುನಾವಣೆಯಲ್ಲಿ ಅವರು ಪ್ರೆಸಿಡೆಂಟ್​ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಆದರೆ ಅದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಪ್ರಕಾಶ್​ ರೈ ಅವರು ಮೂಲತಃ ತೆಲುಗು ಕಲಾವಿದ ಅಲ್ಲ. ಹಾಗಾಗಿ ಅವರು ಮಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತಕರಾರು ತೆಗೆಯಲಾಗಿದೆ. ಎಷ್ಟೇ ವಿರೋಧ ಇದ್ದರೂ ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಪ್ರಕಾಶ್​ ರೈ ಬಂದಿಲ್ಲ.

ಇದನ್ನೂ ಓದಿ:

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಕೆಜಿಎಫ್​-2ನಲ್ಲಿ ಅನಂತ್​ ನಾಗ್​-ಪ್ರಕಾಶ್​ ರೈ​​ ಪಾತ್ರಕ್ಕೂ ಇರುವ ಸಂಬಂಧವೇನು? ಪ್ರಶಾಂತ್​ ನೀಲ್​ ಬಿಚ್ಚಿಟ್ರು ಅಸಲಿ ವಿಚಾರ

Published On - 8:53 am, Thu, 12 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್