AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ
ಪ್ರಕಾಶ್ ರಾಜ್​
TV9 Web
| Edited By: |

Updated on:Nov 03, 2021 | 2:22 PM

Share

ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಂನಲ್ಲಿ ರಿಲೀಸ್​ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಸಿನಿಮಾ ಮೇಲೆ ಇಟ್ಟ ಭರವಸೆ ಹುಸಿಯಾಗಿಲ್ಲ. ಸೂರ್ಯ ನಟನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ಒಂದು ದೃಶ್ಯದ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕಾಶ್​ ರಾಜ್​ ವಿರುದ್ಧ ಸಾಕಷ್ಟು ಜನರು ದ್ವೇಷ ಕಾರುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಕನ್ನಡ ನಟನ ಪರವಾಗಿ ಧ್ವನಿ ಎತ್ತಿದ್ದಾರೆ.

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಅವರು ಆತನ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ. ಇದೇ ದೃಶ್ಯವನ್ನು ಇಟ್ಟುಕೊಂಡು ಕೆಲವರು ಕೊಂಕು ತೆಗೆದಿದ್ದಾರೆ.

‘ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಅವರವರ ಇಷ್ಟ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಅಟೆಂಡರ್​ ಹಿಂದಿ ಮಾತನಾಡಿದ ಎನ್ನುವ ಕಾರಣಕ್ಕೆ ಅವನಿಗೆ ಹೊಡೆಯುವ ಅಧಿಕಾರವನ್ನು ಪ್ರಕಾಶ್​ ರೈಗೆ ಕೊಟ್ಟವರು ಯಾರು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತದವರ ಮೇಲೆ ಹಿಂದಿ ಹೇರಿಕೆ ನಡೆಯುತ್ತಿದೆ ಎನ್ನುವ ಕೂಗು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಅನೇಕರು ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ. ಆ ದೃಷ್ಟಿಯಲ್ಲೇ ನಿರ್ದೇಶಕರು ಈ ದೃಶ್ಯ ಹೆಣೆದಿದ್ದಾರೆ. ಆದರೆ, ಪ್ರಕಾಶ್ ರಾಜ್​ ವಿರುದ್ಧ ಎಲ್ಲರೂ ತಿರುಗಿ ಬಿದ್ದಿದ್ದಾರೆ.

ಪ್ರಕಾಶ್ ರಾಜ್​ ನಟ. ನಿರ್ದೇಶಕರು ಹೇಳಿದಂತೆ ಅವರು ನಟಿಸಿದ್ದಾರೆ. ಇದಕ್ಕೆ ಅವರ ವಿರುದ್ಧ ಆರೋಪ ಹೊರಿಸುವುದು ಎಷ್ಟು ಸರಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಅಲ್ಲದೆ, ನಟನ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

MAA election ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಕಾಶ್​ ರಾಜ್​

Published On - 2:05 pm, Wed, 3 November 21

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?