AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ
ಪ್ರಕಾಶ್ ರಾಜ್​
TV9 Web
| Edited By: |

Updated on:Nov 03, 2021 | 2:22 PM

Share

ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಂನಲ್ಲಿ ರಿಲೀಸ್​ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಸಿನಿಮಾ ಮೇಲೆ ಇಟ್ಟ ಭರವಸೆ ಹುಸಿಯಾಗಿಲ್ಲ. ಸೂರ್ಯ ನಟನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ಒಂದು ದೃಶ್ಯದ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕಾಶ್​ ರಾಜ್​ ವಿರುದ್ಧ ಸಾಕಷ್ಟು ಜನರು ದ್ವೇಷ ಕಾರುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಕನ್ನಡ ನಟನ ಪರವಾಗಿ ಧ್ವನಿ ಎತ್ತಿದ್ದಾರೆ.

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಅವರು ಆತನ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ. ಇದೇ ದೃಶ್ಯವನ್ನು ಇಟ್ಟುಕೊಂಡು ಕೆಲವರು ಕೊಂಕು ತೆಗೆದಿದ್ದಾರೆ.

‘ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಅವರವರ ಇಷ್ಟ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಅಟೆಂಡರ್​ ಹಿಂದಿ ಮಾತನಾಡಿದ ಎನ್ನುವ ಕಾರಣಕ್ಕೆ ಅವನಿಗೆ ಹೊಡೆಯುವ ಅಧಿಕಾರವನ್ನು ಪ್ರಕಾಶ್​ ರೈಗೆ ಕೊಟ್ಟವರು ಯಾರು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತದವರ ಮೇಲೆ ಹಿಂದಿ ಹೇರಿಕೆ ನಡೆಯುತ್ತಿದೆ ಎನ್ನುವ ಕೂಗು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಅನೇಕರು ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ. ಆ ದೃಷ್ಟಿಯಲ್ಲೇ ನಿರ್ದೇಶಕರು ಈ ದೃಶ್ಯ ಹೆಣೆದಿದ್ದಾರೆ. ಆದರೆ, ಪ್ರಕಾಶ್ ರಾಜ್​ ವಿರುದ್ಧ ಎಲ್ಲರೂ ತಿರುಗಿ ಬಿದ್ದಿದ್ದಾರೆ.

ಪ್ರಕಾಶ್ ರಾಜ್​ ನಟ. ನಿರ್ದೇಶಕರು ಹೇಳಿದಂತೆ ಅವರು ನಟಿಸಿದ್ದಾರೆ. ಇದಕ್ಕೆ ಅವರ ವಿರುದ್ಧ ಆರೋಪ ಹೊರಿಸುವುದು ಎಷ್ಟು ಸರಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಅಲ್ಲದೆ, ನಟನ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

MAA election ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಕಾಶ್​ ರಾಜ್​

Published On - 2:05 pm, Wed, 3 November 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್