AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ
ಪ್ರಕಾಶ್ ರಾಜ್​
TV9 Web
| Edited By: |

Updated on:Nov 03, 2021 | 2:22 PM

Share

ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಂನಲ್ಲಿ ರಿಲೀಸ್​ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಸಿನಿಮಾ ಮೇಲೆ ಇಟ್ಟ ಭರವಸೆ ಹುಸಿಯಾಗಿಲ್ಲ. ಸೂರ್ಯ ನಟನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ಒಂದು ದೃಶ್ಯದ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕಾಶ್​ ರಾಜ್​ ವಿರುದ್ಧ ಸಾಕಷ್ಟು ಜನರು ದ್ವೇಷ ಕಾರುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಕನ್ನಡ ನಟನ ಪರವಾಗಿ ಧ್ವನಿ ಎತ್ತಿದ್ದಾರೆ.

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಅವರು ಆತನ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ. ಇದೇ ದೃಶ್ಯವನ್ನು ಇಟ್ಟುಕೊಂಡು ಕೆಲವರು ಕೊಂಕು ತೆಗೆದಿದ್ದಾರೆ.

‘ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಅವರವರ ಇಷ್ಟ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಅಟೆಂಡರ್​ ಹಿಂದಿ ಮಾತನಾಡಿದ ಎನ್ನುವ ಕಾರಣಕ್ಕೆ ಅವನಿಗೆ ಹೊಡೆಯುವ ಅಧಿಕಾರವನ್ನು ಪ್ರಕಾಶ್​ ರೈಗೆ ಕೊಟ್ಟವರು ಯಾರು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತದವರ ಮೇಲೆ ಹಿಂದಿ ಹೇರಿಕೆ ನಡೆಯುತ್ತಿದೆ ಎನ್ನುವ ಕೂಗು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಅನೇಕರು ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ. ಆ ದೃಷ್ಟಿಯಲ್ಲೇ ನಿರ್ದೇಶಕರು ಈ ದೃಶ್ಯ ಹೆಣೆದಿದ್ದಾರೆ. ಆದರೆ, ಪ್ರಕಾಶ್ ರಾಜ್​ ವಿರುದ್ಧ ಎಲ್ಲರೂ ತಿರುಗಿ ಬಿದ್ದಿದ್ದಾರೆ.

ಪ್ರಕಾಶ್ ರಾಜ್​ ನಟ. ನಿರ್ದೇಶಕರು ಹೇಳಿದಂತೆ ಅವರು ನಟಿಸಿದ್ದಾರೆ. ಇದಕ್ಕೆ ಅವರ ವಿರುದ್ಧ ಆರೋಪ ಹೊರಿಸುವುದು ಎಷ್ಟು ಸರಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಅಲ್ಲದೆ, ನಟನ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

MAA election ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಕಾಶ್​ ರಾಜ್​

Published On - 2:05 pm, Wed, 3 November 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ