AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ.

ಕೆನ್ನೆಗೆ ಬಾರಿಸಿ ಸುದ್ದಿಯಾದ ಪ್ರಕಾಶ್ ರೈ; ನಟನ ಬೆಂಬಲಕ್ಕೆ ನಿಂತ ದಕ್ಷಿಣ ಭಾರತದ ಮಂದಿ
ಪ್ರಕಾಶ್ ರಾಜ್​
TV9 Web
| Edited By: |

Updated on:Nov 03, 2021 | 2:22 PM

Share

ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಂನಲ್ಲಿ ರಿಲೀಸ್​ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಸಿನಿಮಾ ಮೇಲೆ ಇಟ್ಟ ಭರವಸೆ ಹುಸಿಯಾಗಿಲ್ಲ. ಸೂರ್ಯ ನಟನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ಒಂದು ದೃಶ್ಯದ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕಾಶ್​ ರಾಜ್​ ವಿರುದ್ಧ ಸಾಕಷ್ಟು ಜನರು ದ್ವೇಷ ಕಾರುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಕನ್ನಡ ನಟನ ಪರವಾಗಿ ಧ್ವನಿ ಎತ್ತಿದ್ದಾರೆ.

‘ಜೈ ಭೀಮ್’ ಚಿತ್ರದಲ್ಲಿ ದೃಶ್ಯವೊಂದು ಬರುತ್ತದೆ. ಈ ದೃಶ್ಯದಲ್ಲಿ ಪ್ರಕಾಶ್​ ರಾಜ್​ ಬಳಿ ಬರುವ ಅಟೆಂಡರ್​ ಓರ್ವ ಹಿಂದಿಯಲ್ಲಿ ಮಾತನಾಡುತ್ತಾನೆ. ಈ ವೇಳೆ ಪ್ರಕಾಶ್​ ರೈ ಅವರು ಆತನ ಕೆನ್ನೆಗೆ ಬಾರಿಸಿ ತಮಿಳಿನಲ್ಲಿ ಮಾತನಾಡುವಂತೆ ಸೂಚಿಸುತ್ತಾರೆ. ಇದೇ ದೃಶ್ಯವನ್ನು ಇಟ್ಟುಕೊಂಡು ಕೆಲವರು ಕೊಂಕು ತೆಗೆದಿದ್ದಾರೆ.

‘ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಅವರವರ ಇಷ್ಟ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಅಟೆಂಡರ್​ ಹಿಂದಿ ಮಾತನಾಡಿದ ಎನ್ನುವ ಕಾರಣಕ್ಕೆ ಅವನಿಗೆ ಹೊಡೆಯುವ ಅಧಿಕಾರವನ್ನು ಪ್ರಕಾಶ್​ ರೈಗೆ ಕೊಟ್ಟವರು ಯಾರು’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕೆಲವರು ವಿರೊಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತದವರ ಮೇಲೆ ಹಿಂದಿ ಹೇರಿಕೆ ನಡೆಯುತ್ತಿದೆ ಎನ್ನುವ ಕೂಗು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಅನೇಕರು ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ. ಆ ದೃಷ್ಟಿಯಲ್ಲೇ ನಿರ್ದೇಶಕರು ಈ ದೃಶ್ಯ ಹೆಣೆದಿದ್ದಾರೆ. ಆದರೆ, ಪ್ರಕಾಶ್ ರಾಜ್​ ವಿರುದ್ಧ ಎಲ್ಲರೂ ತಿರುಗಿ ಬಿದ್ದಿದ್ದಾರೆ.

ಪ್ರಕಾಶ್ ರಾಜ್​ ನಟ. ನಿರ್ದೇಶಕರು ಹೇಳಿದಂತೆ ಅವರು ನಟಿಸಿದ್ದಾರೆ. ಇದಕ್ಕೆ ಅವರ ವಿರುದ್ಧ ಆರೋಪ ಹೊರಿಸುವುದು ಎಷ್ಟು ಸರಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಅಲ್ಲದೆ, ನಟನ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

MAA election ಸೋತ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಕಾಶ್​ ರಾಜ್​

Published On - 2:05 pm, Wed, 3 November 21

Follow Us
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ