AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈ ಭೀಮ್​’ಗೆ ರಾಷ್ಟ್ರ ಪ್ರಶಸ್ತಿ ಮಿಸ್​ ಆಗಿದ್ದಕ್ಕೆ ಪ್ರಕಾಶ್​ ರಾಜ್​ ಬೇಸರ; ವಿಜಯ್​ ರಾಜಕೀಯದ ಎಂಟ್ರಿ ಬಗ್ಗೆ ನಟನ ಅಭಿಪ್ರಾಯ ಏನು?

ತಮಿಳಿನ ಖ್ಯಾತ ನಟ ದಳಪತಿ ವಿಜಯ್​ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಪ್ರಕಾಶ್​ ರಾಜ್​ ಅವರು ಮಾತನಾಡಿದ್ದಾರೆ. ಅಲ್ಲದೇ, ಇತ್ತೀಚೆಗೆ ಘೋಷಣೆ ಆದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಬಗ್ಗೆಯೂ ಅವರು ತಮ್ಮ ಅಸಿನಿಕೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇಲ್ಲಿದೆ ವಿವರ..

‘ಜೈ ಭೀಮ್​’ಗೆ ರಾಷ್ಟ್ರ ಪ್ರಶಸ್ತಿ ಮಿಸ್​ ಆಗಿದ್ದಕ್ಕೆ ಪ್ರಕಾಶ್​ ರಾಜ್​ ಬೇಸರ; ವಿಜಯ್​ ರಾಜಕೀಯದ ಎಂಟ್ರಿ ಬಗ್ಗೆ ನಟನ ಅಭಿಪ್ರಾಯ ಏನು?
ಪ್ರಕಾಶ್​ ರಾಜ್​, ಸೂರ್ಯ, ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Aug 30, 2023 | 2:58 PM

Share

ಬಹುಭಾಷಾ ನಟ ಪ್ರಕಾಶ್​ ರಾಜ್​ (Prakash Raj) ಅವರು ತಮ್ಮ ಅನಿಸಿಕೆಯನ್ನು ನೇರವಾಗಿ ಹಂಚಿಕೊಳ್ಳುತ್ತಾರೆ. ಅವರ ಹೇಳಿಕೆಗಳಿಂದ ಕೆಲವೊಮ್ಮೆ ವಿವಾದ ಆಗಿದ್ದೂ ಕೂಡ ಉಂಟು. ಹಾಗಾಂತ ಪ್ರಕಾಶ್​ ರಾಜ್​ ಅವರು ಸೈಲೆಂಟ್​ ಆಗಿಲ್ಲ. ಈಗ ಅವರು ರಾಷ್ಟ್ರ ಪ್ರಶಸ್ತಿ ಬಗ್ಗೆ ಮಾತನಾಡಿದ್ದಾರೆ. ‘ಜೈ ಭೀಮ್​’ (Jai Bhim) ಸಿನಿಮಾಗೆ ಪ್ರಶಸ್ತಿ ಸಿಗದೇ ಇರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ದಳಪತಿ ವಿಜಯ್​ (Thalapathy Vijay) ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವುದರ ಬಗ್ಗೆ ತಮಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಕೂಡ ಪ್ರಕಾಶ್​ ರಾಜ್​ ತಿಳಿಸಿದ್ದಾರೆ. ತಮಿಳಿನ ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಇತ್ತೀಚೆಗೆ ಅನೌನ್ಸ್​ ಆಯಿತು. ‘ಪುಷ್ಪ’ ಸಿನಿಮಾದಲ್ಲಿನ ನಟನೆಗಾಗಿ ಅಲ್ಲು ಅರ್ಜುನ್​ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಆದರೆ ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾಗೆ ಪ್ರಶಸ್ತಿ ಮಿಸ್​ ಆಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ನಟ ಪ್ರಕಾಶ್​ ರಾಜ್​ ಕೂಡ ಈ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಸಿನಿಮಾಗೆ ಪ್ರಶಸ್ತಿ ನೀಡದೇ ಇರುವುದು ಅವರಿಗೆ ಬೇಸರ ಮೂಡಿಸಿದೆ. ‘ಒಂದು ಕಾರಣಕ್ಕಾಗಿಯೇ ಜೈ ಭೀಮ್​ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ನೀಡಿಲ್ಲ. ಜಾರಿ ನಿರ್ದೇಶನಾಲಯ, ಚುನಾವಣಾ ಆಯೋಗ, ಸಿನಿಮಾ ಸೆನ್ಸಾರ್​ ಮಂಡಳಿ ಕೂಡ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್; ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ: ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧ

ತಮಿಳಿನ ಖ್ಯಾತ ನಟ ದಳಪತಿ ವಿಜಯ್​ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಪ್ರಕಾಶ್​ ರಾಜ್​ ಅವರು ಮಾತನಾಡಿದ್ದಾರೆ. ರಾಜಕೀಯಕ್ಕೆ ಬರಲು ದಳಪತಿ ವಿಜಯ್​ ಅವರು ಸೂಕ್ತವಾದ ವ್ಯಕ್ತಿ. ಆದರೆ ಈಗ ಕಾಲ ಬದಲಾಗಿದೆ. ಎನ್​ಟಿಆರ್​, ಎಂಜಿಆರ್​ ಕೂಡ ರಾಜಕೀಯದಲ್ಲಿ ಯಶಸ್ವಿ ಆಗಿದ್ದರು. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ಬದಲಾವಣೆ ಆಗಿದೆ. ಸಿನಿಮಾದಲ್ಲಿನ ಜನಪ್ರಿಯತೆಯು ರಾಜಕೀಯ ಕ್ಷೇತ್ರದಲ್ಲಿ ಉಪಯೋಗಕ್ಕೆ ಬಾರದು. ಕೆಲಸ ನೋಡಿ ಜನರು ಮತ ಹಾಕುತ್ತಾರೆ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ: ‘ಚಂದ್ರಯಾನ 3’ ಬಗ್ಗೆ ಪ್ರಕಾಶ್​ ರಾಜ್​ ಮಾಡಿದ ಹಾಸ್ಯದ ಹಿಂದೆ ಬೇರೆಯದೇ ಕಥೆ ಇದೆ; ವಿವರಿಸಿದ ನಟ

ಹಲವು ವರ್ಷಗಳಿಂದ ಪ್ರಕಾಶ್​ ರಾಜ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಯ ಚಿತ್ರಗಳಲ್ಲೂ ಅವರು ಫೇಮಸ್​ ಆಗಿದ್ದಾರೆ. ಈಗಲೂ ಅವರಿಗೆ ಸಖತ್​ ಬೇಡಿಕೆ ಇದೆ. ಇತ್ತೀಚೆಗೆ ಪ್ರಕಾಶ್​ ರಾಜ್​ ಅವರು ‘ಚಂದ್ರಯಾನ 3’ ಕುರಿತು ಮಾಡಿದ ಒಂದು ಟ್ವೀಟ್​ನಿಂದ ವಿವಾದ ಸೃಷ್ಟಿಯಾಗಿತ್ತು. ನಂತರ ಅವರು ಅದರ ಬಗ್ಗೆ ಸ್ಪಷ್ಟನೆ ನೀಡಿದರು. ಸೋಶಿಯಲ್​ ಮೀಡಿಯಾದಲ್ಲಿ ಪ್ರಕಾಶ್​ ರಾಜ್​ ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ