‘ಜೈ ಭೀಮ್​’ಗೆ ರಾಷ್ಟ್ರ ಪ್ರಶಸ್ತಿ ಮಿಸ್​ ಆಗಿದ್ದಕ್ಕೆ ಪ್ರಕಾಶ್​ ರಾಜ್​ ಬೇಸರ; ವಿಜಯ್​ ರಾಜಕೀಯದ ಎಂಟ್ರಿ ಬಗ್ಗೆ ನಟನ ಅಭಿಪ್ರಾಯ ಏನು?

|

Updated on: Aug 30, 2023 | 2:58 PM

ತಮಿಳಿನ ಖ್ಯಾತ ನಟ ದಳಪತಿ ವಿಜಯ್​ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಪ್ರಕಾಶ್​ ರಾಜ್​ ಅವರು ಮಾತನಾಡಿದ್ದಾರೆ. ಅಲ್ಲದೇ, ಇತ್ತೀಚೆಗೆ ಘೋಷಣೆ ಆದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಬಗ್ಗೆಯೂ ಅವರು ತಮ್ಮ ಅಸಿನಿಕೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇಲ್ಲಿದೆ ವಿವರ..

‘ಜೈ ಭೀಮ್​’ಗೆ ರಾಷ್ಟ್ರ ಪ್ರಶಸ್ತಿ ಮಿಸ್​ ಆಗಿದ್ದಕ್ಕೆ ಪ್ರಕಾಶ್​ ರಾಜ್​ ಬೇಸರ; ವಿಜಯ್​ ರಾಜಕೀಯದ ಎಂಟ್ರಿ ಬಗ್ಗೆ ನಟನ ಅಭಿಪ್ರಾಯ ಏನು?
ಪ್ರಕಾಶ್​ ರಾಜ್​, ಸೂರ್ಯ, ದಳಪತಿ ವಿಜಯ್​
Follow us on

ಬಹುಭಾಷಾ ನಟ ಪ್ರಕಾಶ್​ ರಾಜ್​ (Prakash Raj) ಅವರು ತಮ್ಮ ಅನಿಸಿಕೆಯನ್ನು ನೇರವಾಗಿ ಹಂಚಿಕೊಳ್ಳುತ್ತಾರೆ. ಅವರ ಹೇಳಿಕೆಗಳಿಂದ ಕೆಲವೊಮ್ಮೆ ವಿವಾದ ಆಗಿದ್ದೂ ಕೂಡ ಉಂಟು. ಹಾಗಾಂತ ಪ್ರಕಾಶ್​ ರಾಜ್​ ಅವರು ಸೈಲೆಂಟ್​ ಆಗಿಲ್ಲ. ಈಗ ಅವರು ರಾಷ್ಟ್ರ ಪ್ರಶಸ್ತಿ ಬಗ್ಗೆ ಮಾತನಾಡಿದ್ದಾರೆ. ‘ಜೈ ಭೀಮ್​’ (Jai Bhim) ಸಿನಿಮಾಗೆ ಪ್ರಶಸ್ತಿ ಸಿಗದೇ ಇರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ದಳಪತಿ ವಿಜಯ್​ (Thalapathy Vijay) ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವುದರ ಬಗ್ಗೆ ತಮಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಕೂಡ ಪ್ರಕಾಶ್​ ರಾಜ್​ ತಿಳಿಸಿದ್ದಾರೆ. ತಮಿಳಿನ ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಇತ್ತೀಚೆಗೆ ಅನೌನ್ಸ್​ ಆಯಿತು. ‘ಪುಷ್ಪ’ ಸಿನಿಮಾದಲ್ಲಿನ ನಟನೆಗಾಗಿ ಅಲ್ಲು ಅರ್ಜುನ್​ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಆದರೆ ಸೂರ್ಯ ನಟನೆಯ ‘ಜೈ ಭೀಮ್​’ ಸಿನಿಮಾಗೆ ಪ್ರಶಸ್ತಿ ಮಿಸ್​ ಆಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ನಟ ಪ್ರಕಾಶ್​ ರಾಜ್​ ಕೂಡ ಈ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಸಿನಿಮಾಗೆ ಪ್ರಶಸ್ತಿ ನೀಡದೇ ಇರುವುದು ಅವರಿಗೆ ಬೇಸರ ಮೂಡಿಸಿದೆ. ‘ಒಂದು ಕಾರಣಕ್ಕಾಗಿಯೇ ಜೈ ಭೀಮ್​ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ನೀಡಿಲ್ಲ. ಜಾರಿ ನಿರ್ದೇಶನಾಲಯ, ಚುನಾವಣಾ ಆಯೋಗ, ಸಿನಿಮಾ ಸೆನ್ಸಾರ್​ ಮಂಡಳಿ ಕೂಡ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇದೆ’ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್; ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ: ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧ

ತಮಿಳಿನ ಖ್ಯಾತ ನಟ ದಳಪತಿ ವಿಜಯ್​ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಪ್ರಕಾಶ್​ ರಾಜ್​ ಅವರು ಮಾತನಾಡಿದ್ದಾರೆ. ರಾಜಕೀಯಕ್ಕೆ ಬರಲು ದಳಪತಿ ವಿಜಯ್​ ಅವರು ಸೂಕ್ತವಾದ ವ್ಯಕ್ತಿ. ಆದರೆ ಈಗ ಕಾಲ ಬದಲಾಗಿದೆ. ಎನ್​ಟಿಆರ್​, ಎಂಜಿಆರ್​ ಕೂಡ ರಾಜಕೀಯದಲ್ಲಿ ಯಶಸ್ವಿ ಆಗಿದ್ದರು. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ಬದಲಾವಣೆ ಆಗಿದೆ. ಸಿನಿಮಾದಲ್ಲಿನ ಜನಪ್ರಿಯತೆಯು ರಾಜಕೀಯ ಕ್ಷೇತ್ರದಲ್ಲಿ ಉಪಯೋಗಕ್ಕೆ ಬಾರದು. ಕೆಲಸ ನೋಡಿ ಜನರು ಮತ ಹಾಕುತ್ತಾರೆ ಎಂದು ಪ್ರಕಾಶ್​ ರಾಜ್​ ಹೇಳಿದ್ದಾರೆ.

ಇದನ್ನೂ ಓದಿ: ‘ಚಂದ್ರಯಾನ 3’ ಬಗ್ಗೆ ಪ್ರಕಾಶ್​ ರಾಜ್​ ಮಾಡಿದ ಹಾಸ್ಯದ ಹಿಂದೆ ಬೇರೆಯದೇ ಕಥೆ ಇದೆ; ವಿವರಿಸಿದ ನಟ

ಹಲವು ವರ್ಷಗಳಿಂದ ಪ್ರಕಾಶ್​ ರಾಜ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಯ ಚಿತ್ರಗಳಲ್ಲೂ ಅವರು ಫೇಮಸ್​ ಆಗಿದ್ದಾರೆ. ಈಗಲೂ ಅವರಿಗೆ ಸಖತ್​ ಬೇಡಿಕೆ ಇದೆ. ಇತ್ತೀಚೆಗೆ ಪ್ರಕಾಶ್​ ರಾಜ್​ ಅವರು ‘ಚಂದ್ರಯಾನ 3’ ಕುರಿತು ಮಾಡಿದ ಒಂದು ಟ್ವೀಟ್​ನಿಂದ ವಿವಾದ ಸೃಷ್ಟಿಯಾಗಿತ್ತು. ನಂತರ ಅವರು ಅದರ ಬಗ್ಗೆ ಸ್ಪಷ್ಟನೆ ನೀಡಿದರು. ಸೋಶಿಯಲ್​ ಮೀಡಿಯಾದಲ್ಲಿ ಪ್ರಕಾಶ್​ ರಾಜ್​ ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.