AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ

ತೆಲುಗಿನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ ಚುನಾವಣೆ ಎಂಬುದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಪ್ರಕಾಶ್​ ರಾಜ್​ ಮತ್ತು ವಿಷ್ಣು ಮಂಚು ನಡುವೆ ಭಾರಿ ಹಣಾಹಣಿ ಏರ್ಪಟ್ಟಿದೆ.

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ
ಪವನ್ ಕಲ್ಯಾಣ್, ಪ್ರಕಾಶ್ ರಾಜ್, ಚಿರಂಜೀವಿ
TV9 Web
| Edited By: |

Updated on:Oct 10, 2021 | 2:12 PM

Share

ಭಾರಿ ಕೌತುಕ ಮೂಡಿಸಿರುವ ತೆಲುಗು ಚಿತ್ರರಂಗದ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ (MAA)​ ಚುನಾವಣೆ ಇಂದು (ಅ.10) ನಡೆದಿದೆ. ಮಾ ಅಧ್ಯಕ್ಷ ಸ್ಥಾನಕ್ಕಾಗಿ ಬಹುಭಾಷಾ ನಟ ಪ್ರಕಾಶ್​ ರಾಜ್​ ಹಾಗೂ ವಿಷ್ಣು ಮಂಚು ಅವರು ಸ್ಪರ್ಧಿಸಿದ್ದಾರೆ. ಇಬ್ಬರಲ್ಲಿ ಯಾರಿಗೆ ಹೆಚ್ಚು ಮತ ಬಿದ್ದಿದೆ ಎಂಬುದನ್ನು ತಿಳಿದುಕೊಳ್ಳಲು ಇಡೀ ದಕ್ಷಿಣ ಭಾರತೀಯ ಚಿತ್ರರಂಗವೇ ಕಾದು ಕುಳಿತಿದೆ. ಟಾಲಿವುಡ್​ನ ಘಟಾನುಘಟಿ ನಟರೆಲ್ಲ ಮತಗಟ್ಟೆಗೆ ಬಂದು ವೋಟ್​ ಮಾಡಿದ್ದಾರೆ. ಮೆಗಾ ಸ್ಟಾರ್​ ಚಿರಂಜೀವಿ, ಪವನ್ ಕಲ್ಯಾಣ್​, ಮೋಹನ್​ ಬಾಬು, ರಾಮ್​ ಚರಣ್​ ಮುಂತಾದವರು ಮತ ಚಲಾಯಿಸಿದ್ದಾರೆ.

ಮಾ ಚುನಾವಣೆ ಎಂಬುದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಪ್ರಕಾಶ್​ ರಾಜ್​ ಮತ್ತು ವಿಷ್ಣು ಮಂಚು ನಡುವೆ ಭಾರಿ ಹಣಾಹಣಿ ಏರ್ಪಟ್ಟಿದೆ. ಆದರೆ ಮತದಾನ ಪ್ರಕ್ರಿಯೆಯನ್ನು ಕೆಡಿಸಲು ಅಪರಿಚಿತ ವ್ಯಕ್ತಿಯೊಬ್ಬ ಪ್ರಯತ್ನಿಸಿದ್ದಾನೆ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಆ ಕುರಿತು ಮೋಹನ್​ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಕಾಶ್​ ರಾಜ್​ ಮತ್ತು ವಿಷ್ಣು ಮಂಚು, ‘ಆತ ಯಾರು ಎಂಬುದು ನಮಗೆ ಗೊತ್ತಿಲ್ಲ. ಸದ್ಯ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ಮೂಲತಃ ಕನ್ನಡಿಗರಾದ ಪ್ರಕಾಶ್​ ರಾಜ್​ ಅವರಿಗೆ ಎಲ್ಲ ಭಾಷೆಯಲ್ಲೂ ಬೇಡಿಕೆ ಇದೆ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅಲ್ಲದೇ, ಅಲ್ಲಿನ ಕಲಾವಿದರ ಸಂಘದ ರಾಜಕೀಯದಲ್ಲೂ ಆಸಕ್ತಿ ತೋರಿಸುತ್ತಿದ್ದಾರೆ. ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ.

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ನಲ್ಲಿ ಅಂದಾಜು 900 ಸದಸ್ಯರು ಇದ್ದಾರೆ. ಈವರೆಗೂ ಇದಕ್ಕೆ ಹಿರಿಯ ನಟ ನರೇಶ್​ ಅವರು ಅಧ್ಯಕ್ಷರಾಗಿದ್ದರು. ಅವರ ಅಧಿಕಾರದ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ (ಅ.10) ಎಲೆಕ್ಷನ್​ ನಡೆದಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಇದರ ಚುನಾವಣೆ ನಡೆಯುತ್ತದೆ. ಸಂಘಕ್ಕೆ ಅಧ್ಯಕ್ಷ, ಕಾರ್ಯಕಾರಿ ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಜಿ ಮತ್ತು ಕಾರ್ಯಕಾರಿ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಪ್ರಕಾಶ್​ ರಾಜ್​ ಅವರು ಚುನಾವಣೆ ಕಣಕ್ಕೆ ಇಳಿದಿರುವ ಕಾರಣ ಈ ಬಾರಿ ಮಾ ಎಲೆಕ್ಷನ್​ ಸಖತ್​ ಹೈಪ್​ ಪಡೆದುಕೊಂಡಿದೆ.

ಪ್ರಕಾಶ್​ ರೈ ಅವರು ಮೂಲತಃ ತೆಲುಗು ನಟ ಅಲ್ಲ. ಹಾಗಾಗಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೆ ಹಲವು ಸ್ಟಾರ್​ ಕಲಾವಿದರು ಪ್ರಕಾಶ್​ ರಾಜ್​ ಪರ ನಿಂತರು. ಕಡೆಗೂ ಎಲೆಕ್ಷನ್​ನಲ್ಲಿ ಸ್ಪರ್ಧಿಸುವ ಅವಕಾಶ ಅವರಿಗೆ ಸಿಕ್ಕಿದೆ. ಸರಿಯಾದ ರೀತಿಯಲ್ಲಿ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ ಕೆಲಸ ಮಾಡುತ್ತಿಲ್ಲ ಎಂಬುದು ಪ್ರಕಾಶ್​ ರಾಜ್​ ವಾದ. ಹಾಗಾಗಿ ಅದರಲ್ಲಿ ದೊಡ್ಡ ಬದಲಾವಣೆ ತರಲು ಅವರು ನಿರ್ಧರಿಸಿದ್ದಾರೆ. ಆ ಕಾರಣಕ್ಕಾಗಿಯೇ ತಾವು ಅಧ್ಯಕ್ಷರಾಗಬೇಕು ಎಂದು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ:

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

Prakash Raj: ಮಕ್ಕಳ ಎದುರಲ್ಲೇ ಪ್ರಕಾಶ್​ ರೈ ಮತ್ತೊಮ್ಮೆ ಮದುವೆ; ಇಲ್ಲಿವೆ ಖುಷಿಯ ಕ್ಷಣದ ಫೋಟೋಗಳು

Published On - 2:06 pm, Sun, 10 October 21

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ