AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prakash Raj: ಪ್ರತಿಷ್ಠೆಯ ಚುನಾವಣೆಯಲ್ಲಿ ಪ್ರಕಾಶ್​ ರಾಜ್​ ಸ್ಪರ್ಧೆ; ಪರಭಾಷೆಯಲ್ಲಿ ಕನ್ನಡದ ನಟನಿಗೆ ಅ.10ರಂದು ಬಿಗ್​ ಡೇ

MAA Election: ಸರಿಯಾದ ರೀತಿಯಲ್ಲಿ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ ಕೆಲಸ ಮಾಡುತ್ತಿಲ್ಲ ಎಂಬುದು ಪ್ರಕಾಶ್​ ರಾಜ್​ ವಾದ. ಹಾಗಾಗಿ ಅದರಲ್ಲಿ ದೊಡ್ಡ ಬದಲಾವಣೆ ತರಲು ಅವರು ನಿರ್ಧರಿಸಿದ್ದಾರೆ.

Prakash Raj: ಪ್ರತಿಷ್ಠೆಯ ಚುನಾವಣೆಯಲ್ಲಿ ಪ್ರಕಾಶ್​ ರಾಜ್​ ಸ್ಪರ್ಧೆ; ಪರಭಾಷೆಯಲ್ಲಿ ಕನ್ನಡದ ನಟನಿಗೆ ಅ.10ರಂದು ಬಿಗ್​ ಡೇ
ಪ್ರಕಾಶ್​ ರೈ
TV9 Web
| Updated By: ಮದನ್​ ಕುಮಾರ್​|

Updated on: Oct 09, 2021 | 4:19 PM

Share

ಮೂಲತಃ ಕನ್ನಡಿಗರಾದ ಪ್ರಕಾಶ್​ ರಾಜ್​ ಅವರಿಗೆ ಎಲ್ಲ ಭಾಷೆಯಲ್ಲೂ ಬೇಡಿಕೆ ಇದೆ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅಲ್ಲದೇ, ಅಲ್ಲಿನ ಕಲಾವಿದರ ಸಂಘದ ರಾಜಕೀಯದಲ್ಲೂ ಆಸಕ್ತಿ ತೋರಿಸುತ್ತಿದ್ದಾರೆ. ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಕಾಶ್​ ರಾಜ್​ ಸ್ಪರ್ಧೆ ಮಾಡುತ್ತಿದ್ದಾರೆ. ಈ ಕುರಿತು ತಿಂಗಳುಗಟ್ಟಲೆ ಡ್ರಾಮಾ ನಡೆದಿದೆ. ಕಡೆಗೂ ಎಲೆಕ್ಷನ್​ಗೆ ಕ್ಷಣಗಣನೆ ಶುರುವಾಗಿದ್ದು, ಭಾನುವಾರ (ಅ.10) ನಡೆಯಲಿರುವ ಈ ಚುನಾವಣೆಯಲ್ಲಿ ಪ್ರಕಾಶ್​ ರಾಜ್​ ವಿರುದ್ಧ ​ನಟ ವಿಷ್ಣು ಮಂಚು ಸ್ಪರ್ಧಿಸುತ್ತಿದ್ದಾರೆ.

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ನಲ್ಲಿ ಅಂದಾಜು 900 ಸದಸ್ಯರು ಇದ್ದಾರೆ. ಸದ್ಯ ಇದಕ್ಕೆ ಹಿರಿಯ ನಟ ನರೇಶ್​ ಅವರು ಅಧ್ಯಕ್ಷರಾಗಿದ್ದಾರೆ. ಅವರ ಅಧಿಕಾರದ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಷನ್​ ನಡೆಯಬೇಕಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಇದರ ಚುನಾವಣೆ ನಡೆಯುತ್ತದೆ. ಸಂಘಕ್ಕೆ ಅಧ್ಯಕ್ಷ, ಕಾರ್ಯಕಾರಿ ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಜಿ ಮತ್ತು ಕಾರ್ಯಕಾರಿ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಪ್ರಕಾಶ್​ ರಾಜ್​ ಅವರು ಚುನಾವಣೆ ಕಣಕ್ಕೆ ಇಳಿದಿರುವ ಕಾರಣ ಈ ಬಾರಿ ಮಾ ಎಲೆಕ್ಷನ್​ ಸಖತ್​ ಹೈಪ್​ ಪಡೆದುಕೊಂಡಿದೆ.

ಪ್ರಕಾಶ್​ ರೈ ಅವರು ಮೂಲತಃ ತೆಲುಗು ನಟ ಅಲ್ಲ. ಹಾಗಾಗಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೆ ಹಲವು ಸ್ಟಾರ್​ ಕಲಾವಿದರು ಪ್ರಕಾಶ್​ ರಾಜ್​ ಪರ ನಿಂತಿದ್ದು, ಅವರು ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.

ಸರಿಯಾದ ರೀತಿಯಲ್ಲಿ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ ಕೆಲಸ ಮಾಡುತ್ತಿಲ್ಲ ಎಂಬುದು ಪ್ರಕಾಶ್​ ರಾಜ್​ ವಾದ. ಹಾಗಾಗಿ ಅದರಲ್ಲಿ ದೊಡ್ಡ ಬದಲಾವಣೆ ತರಲು ಅವರು ನಿರ್ಧರಿಸಿದ್ದಾರೆ. ಆ ಕಾರಣಕ್ಕಾಗಿಯೇ ತಾವು ಅಧ್ಯಕ್ಷರಾಗಬೇಕು ಎಂದು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಎಷ್ಟು ವೋಟ್​ ಬೀಳಲಿದೆ? ಪ್ರತಿ ಸ್ಪರ್ಧಿ ವಿಷ್ಣು ಮಂಚುಗೆ ಎಷ್ಟು ವೋಟ್​ ಬೀಳಲಿದೆ? ಅಂತಿಮವಾಗಿ ಯಾರಿಗೆ ವಿಜಯದ ಮಾಲೆ ಸಿಗಲಿದೆ ಎಂಬುದನ್ನು ತಿಳಿದುಕೊಳ್ಳಲು ಇಡೀ ದಕ್ಷಿಣ ಭಾರತದ ಚಿತ್ರರಂಗ ಕುತೂಹಲದಿಂದ ಕಾಯುತ್ತಿದೆ. ತೆಲುಗು ನೆಲದಲ್ಲಿ ಪ್ರಕಾಶ್​ ರಾಜ್​ ಗೆದ್ದರೆ ಅವರ ಚಾರ್ಮ್​ ಇನ್ನಷ್ಟು ಹೆಚ್ಚಲಿದೆ. ಒಟ್ಟಿನಲ್ಲಿ ನಾಳೆ (ಅ.10) ಪ್ರಕಾಶ್​ ರೈ ಮತ್ತು ವಿಷ್ಣು ಮಂಚು ಪಾಲಿಗೆ ಮಹತ್ವದ ದಿನವಾಗಿದೆ.

ಇದನ್ನೂ ಓದಿ:

ನಾಗಾರ್ಜುನ ಜನ್ಮದಿನ: ಸ್ವಾರ್ಥಕ್ಕಾಗಿ ಪ್ರಕಾಶ್​ ರೈ ಪಾರ್ಟಿ? ಮಾ ಚುನಾವಣೆ ಹೊಸ್ತಿಲಲ್ಲಿ ಹೊಸ ಆರೋಪ

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್