AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ್ ನಾಮ್ ಸಮ್ಮಾನ್’ ಮ್ಯೂಸಿಕ್‌ ಆಲ್ಬಂ: 22 ಭಾಷೆಗಳಲ್ಲಿ ದೇಶಭಕ್ತಿ ಗೀತೆ

‘ಭಾರತ್ ನಾಮ್ ಸಮ್ಮಾನ್’ ಹಾಡು ಭಾರತದ 22 ಭಾಷೆಗಳಲ್ಲಿ ಮೂಡಿಬಂದಿದೆ ಎಂಬುದು ವಿಶೇಷ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಿಡುಗಡೆ ಮಾಡಿದ ಈ ಹಾಡಿನಲ್ಲಿ ಮಹೇಂದ್ರ ಮುಣೋತ್‌ ನಟಿಸಿದ್ದಾರೆ. ಈ ದೇಶಭಕ್ತಿ ಗೀತೆಯ ವಿಶೇಷ ಏನು? ಸಂಗೀತ ಯಾರದ್ದು? ಗಾಯಕರು ಯಾರು? ಪೂರ್ತಿ ಮಾಹಿತಿ ಇಲ್ಲಿದೆ ಓದಿ..

‘ಭಾರತ್ ನಾಮ್ ಸಮ್ಮಾನ್’ ಮ್ಯೂಸಿಕ್‌ ಆಲ್ಬಂ: 22 ಭಾಷೆಗಳಲ್ಲಿ ದೇಶಭಕ್ತಿ ಗೀತೆ
Mahendra Munot
ಮದನ್​ ಕುಮಾರ್​
|

Updated on: Aug 25, 2025 | 7:30 AM

Share

ನಟ, ನಿರ್ಮಾಪಕ ಮಹೇಂದ್ರ ಮುಣೋತ್‌ (Mahendra Munot) ಅವರು ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ಒಂದು ವಿಶೇಷವಾದ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬೈ ಮೂಲದ ‘ಮೈ ಭಾರತ್ ಹೂ ಫೌಂಡೇಶನ್’ ಸ್ವಯಂ ಸೇವಾ ಸಂಸ್ಥೆಯು ‘ಭಾರತ್ ಕೋ ಭಾರತ್ ಹೀ ಬೋಲಾ ಜಾಯೇ ಇಂಡಿಯಾ ನಹಿ’ ಎಂಬ ಅಭಿಯಾನ ಆರಂಭಿಸಿದೆ. ‘ಭಾರತವನ್ನು ಭಾರತವೆಂದೇ ಕರೆಯಿರಿ, ಇಂಡಿಯಾ ಎಂದಲ್ಲ’ ಎಂಬುದು ಈ ವಾಕ್ಯದ ಅರ್ಥ. ಈ ಅಭಿಯಾನದ ಪ್ರಯುಕ್ತ ‘ಭಾರತ್ ಈಸ್ ಭಾರತ್ ನಾಟ್ ಇಂಡಿಯಾ’ (India) ಎಂಬ ಶೀರ್ಷಿಕೆಯಲ್ಲಿ ‘ಭರತ್ ನಾಮ್ ಸಮ್ಮಾನ್’ (Bharat Naam Samman) ಆಡಿಯೋ ಆಲ್ಬಂ ಬಿಡುಗಡೆ ಮಾಡಲಾಗಿದೆ.

ಭಾರತದ 22 ಭಾಷೆಗಳಲ್ಲಿ ‘ಭರತ್ ನಾಮ್ ಸಮ್ಮಾನ್’ ಹಾಡಿನ ಆಡಿಯೋ ಆಲ್ಬಂ ಹೊರಬಂದಿದೆ. ಕನ್ನಡ, ಹಿಂದಿ, ಇಂಗ್ಲಿಷ್‌, ರಾಜಸ್ಥಾನಿ ಸೇರಿದಂತೆ ಭಾರತದ ಬಹುತೇಕ ಎಲ್ಲ ಭಾಷೆಯಲ್ಲೂ ಈ ಹಾಡು ಮೂಡಿಬಂದಿದೆ ಎಂಬುದು ವಿಶೇಷ. ಖ್ಯಾತ ಸಂಗೀತ ನಿರ್ದೇಶಕ ದಿಲೀಪ್ ಸೇನ್ ಲತಾ ಹಯಾ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಭರತ್ ನಾಮ್ ಸಮ್ಮಾನ್’ ಆಡಿಯೋ ಆಲ್ಬಂ ಹಾಡಿಗೆ ಗಾಯಕರಾದ ಮೊಹಮ್ಮದ್ ಸಲಾಮತ್, ರೇಖಾ ರಾವ್, ದೀಪಕ್‌ ಮೊದಲಾದವರು ಧ್ವನಿ ನೀಡಿದ್ದಾರೆ. ಸ್ವಾತಂತ್ರೋತ್ಸವದ ಮಾಸದಲ್ಲೇ ಈ ಹಾಡು ಜನರ ಮುಂದೆ ಬಂದಿರುವುದು ವಿಶೇಷ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಈ ಮ್ಯೂಸಿಕ್‌ ಆಲ್ಬಂ ಬಿಡುಗಡೆ ಮಾಡಿದರು.

ಈ ಮ್ಯೂಸಿಕ್‌ ಆಲ್ಬಂನ ಕನ್ನಡ, ಇಂಗ್ಲಿಷ್‌, ರಾಜಸ್ಥಾನಿ ಮತ್ತು ಹಿಂದಿ ಅವತರಣಿಕೆಯ ವಿಡಿಯೋದಲ್ಲಿ ಕನ್ನಡ ಚಿತ್ರರಂಗ ನಟ, ನಿರ್ಮಾಪಕ ಮಹೇಂದ್ರ ಮುಣೋತ್‌ ಅವರು ಕಾಣಿಸಿಕೊಂಡಿದ್ದಾರೆ. ಕರ್ನಾಟಕದಿಂದ ರಾಜಸ್ಥಾನದವರೆಗೆ ಹಲವು ತಾಣಗಳಲ್ಲಿ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಮಹೇಂದ್ರ ಮುಣೋತ್‌ ಜೊತೆಗೆ ನೂರಾರು ಪ್ರಾದೇಶಿಕ ಭಾಷಾ ಕಲಾವಿದರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?

ದೇಶಭಕ್ತಿ ಭಾವನೆಗಳನ್ನು ಪ್ರೇರೇಪಿಸುವಂತಿರುವ ಈ ಗೀತೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಗೀತೆಗೆ ಗಗನ್‌ ಆರ್‌. ಛಾಯಾಗ್ರಹಣ ಮಾಡಿದ್ದಾರೆ. ನಿರ್ದೇಶಕ ಬಿ.ಪಿ. ಹರಿಹರನ್‌ ಅವರು ಈ ಹಾಡಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!