AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃತಿ ಶೆಟ್ಟಿಗೆ ಪ್ರ್ಯಾಂಕ್ ಮಾಡಿದ ಆ್ಯಂಕರ್​; ನಿಲ್ಲಲೇ ಇಲ್ಲ ನಟಿಯ ಕಣ್ಣೀರು

ಇದೊಂದು ಪ್ರ್ಯಾಂಕ್ ವಿಡಿಯೋ ಎಂದು ಕೃತಿಗೆ ಹೇಳಾಯಿತು. ಆದರೆ, ಅವರಿಗೆ ಆಗಲೇ ದುಃಖ ಉಮ್ಮಳಿಸಿ ಬಂದಿತ್ತು. ಅವರು ಗಳಗಳನೆ ಕಣ್ಣೀರು ಹಾಕಿದರು.

ಕೃತಿ ಶೆಟ್ಟಿಗೆ ಪ್ರ್ಯಾಂಕ್ ಮಾಡಿದ ಆ್ಯಂಕರ್​; ನಿಲ್ಲಲೇ ಇಲ್ಲ ನಟಿಯ ಕಣ್ಣೀರು
ಕೃತಿ ಶೆಟ್ಟಿ (Credit: Galatta Tamil )
TV9 Web
| Edited By: |

Updated on:May 31, 2022 | 8:47 AM

Share

ಶೋ ಅಥವಾ ಸಂದರ್ಶನದ ಸಂದರ್ಭದಲ್ಲಿ ಸೆಲೆಬ್ರಿಟಿಗಳಿ ಪ್ರ್ಯಾಂಕ್ ಮಾಡೋದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಕೆಲವರು ಇದನ್ನು ಹಗುರವಾಗಿ ಸ್ವೀಕರಿಸಿದರೆ ಇನ್ನೂ ಕೆಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಪ್ರ್ಯಾಂಕ್ ವಿಡಿಯೋದಿಂದ (Prank Video) ಕೆಲವೊಮ್ಮೆ ಶೋನಿಂದ ಸ್ಟಾರ್​​ಗಳು ಅರ್ಧಕ್ಕೆ ಎದ್ದು ಹೋಗಿದ್ದೂ ಇದೆ. ಇನ್ನೂ ಕೆಲವರು ಕಣ್ಣೀರು ಹಾಕುತ್ತಾರೆ. ಈಗ ನಟಿ ಕೃತಿ ಶೆಟ್ಟಿ ಅವರಿಗೆ (Krithi Shetty) ಪ್ರ್ಯಾಂಕ್ ಮಾಡಲಾಗಿದೆ. ಆರಂಭದಲ್ಲಿ ಏನಾಗುತ್ತಿದೆ ಎಂಬುದನ್ನು ಅರ್ಥೈಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಆ ಬಳಿಕ ಅವರು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಕೆಲವರು ನಟಿಗೆ ಪ್ರ್ಯಾಂಕ್ ಮಾಡಿದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

‘ಉಪ್ಪೇನಾ’ ಸಿನಿಮಾ ಮೂಲಕ ಕೃತಿ ಶೆಟ್ಟಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರಿಗೆ ಭರಪೂರ ಆಫರ್​​ಗಳು ಬರೋಕೆ ಆರಂಭವಾದವು. ‘ಶ್ಯಾಮ್​ ಸಿಂಗ ರಾಯ್​’ ಚಿತ್ರದಿಂದ ಕೃತಿ ಬೇಡಿಕೆ ಮತ್ತಷ್ಟು ಹೆಚ್ಚಿತು. ಸದ್ಯ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬೇರೆಬೇರೆ ಭಾಷೆಗಳಿಂದ ಅವರಿಗೆ ಆಫರ್​ಗಳು ಬರುತ್ತಿವೆ.

ತಮಿಳು ಶೋ ‘ವಡಾ ಪೋಚೆ’ದಲ್ಲಿ ಕೃತಿ ಭಾಗಿ ಆಗಿದ್ದರು. ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಇಬ್ಬರು ಆ್ಯಂಕರ್​ಗಳು ಅವರಿಗೆ ಪ್ರಶ್ನೆ ಕೇಳೋಕೆ ಆರಂಭಿಸಿದರು. ಈ ಪ್ರಶ್ನೆಗೆ ನಟಿ ಉತ್ತರ ಕೊಡುತ್ತಾ ಹೋದರು. ಆದರೆ, ಸಮಯ ಕಳೆದಂತೆ ಇಬ್ಬರು ಆ್ಯಂಕರ್​ಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಯಿತು. ಯಾರು ಪ್ರಶ್ನೆ ಕೇಳಬೇಕು ಎನ್ನುವ ಬಗ್ಗೆ ಚರ್ಚೆಗಳು ಆರಂಭವಾದವು. ಇಬ್ಬರು ಆ್ಯಂಕರ್​ಗಳ ನಡುವೆ ಜಗಳ ಏರ್ಪಡುವ ಮಟ್ಟಕ್ಕೆ ಇದು ಬೆಳೆಯಿತು. ಇದು ತಾರಕಕ್ಕೇರಿದ್ದನ್ನು ನೋಡಿ ಕೃತಿಗೆ ಮುಜುಗರವಾಗಿದೆ. ಅವರಿಗೆ ಏನು ಮಾಡಬೇಕು ಎಂಬುದೇ ತಿಳಿಯಲಿಲ್ಲ.

ಇದನ್ನೂ ಓದಿ
Image
ಕೃತಿ ಶೆಟ್ಟಿಗೆ ರಶ್ಮಿಕಾ ಮಂದಣ್ಣ ರೀತಿ ಆಗುವ ಕನಸು; ದೊಡ್ಡ ಹೀರೋಗಳಿಂದ ಬಂದ ಉತ್ತರದಿಂದ ನಿರಾಸೆ?
Image
ಅಪರೂಪದ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ; ಇವರಿಗೆ ಸರಿಸಾಟಿ ಯಾರು?
Image
Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ
Image
ಶೀಘ್ರವೇ ಆರಂಭಗೊಳ್ಳಲಿದೆ ‘ಕಾಫಿ ವಿತ್ ಕರಣ್’ ಶೋ; ಅತಿಥಿಯಾಗಿ ಬರಲಿದ್ದಾರೆ ರಶ್ಮಿಕಾ ಮಂದಣ್ಣ

ಇದನ್ನೂ ಓದಿ: ಕೃತಿ ಶೆಟ್ಟಿಗೆ ರಶ್ಮಿಕಾ ಮಂದಣ್ಣ ರೀತಿ ಆಗುವ ಕನಸು; ದೊಡ್ಡ ಹೀರೋಗಳಿಂದ ಬಂದ ಉತ್ತರದಿಂದ ನಿರಾಸೆ?

ಇದೊಂದು ಪ್ರ್ಯಾಂಕ್ ವಿಡಿಯೋ ಎಂದು ಕೃತಿಗೆ ಹೇಳಾಯಿತು. ಆದರೆ, ಅವರಿಗೆ ಆಗಲೇ ದುಃಖ ಉಮ್ಮಳಿಸಿ ಬಂದಿತ್ತು. ಅವರು ಗಳಗಳನೆ ಕಣ್ಣೀರು ಹಾಕಿದರು. ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ನಟಿಗೆ ಈ ರೀತಿ ಪ್ರ್ಯಾಂಕ್ ಮಾಡಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಈ ವಿಡಿಯೋ ನೋಡಿ ಎಂಜಾಯ್ ಮಾಡಿದ್ದಾರೆ. ಸದ್ಯ ಈ ವಿಡಿಯೋ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Tue, 31 May 22

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್