AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾರ್ಟ್​ 2’ ಸದ್ಯಕ್ಕಂತೂ ಅಸಂಭವದ ಮಾತು; ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್ ಮಾತು

‘ಸಲಾರ್​’ ಕಥೆಯನ್ನು ತುಂಬಾನೇ ವಿಸ್ತೃತವಾಗಿ ಹೇಳುವ ಅವಶ್ಯಕತೆ ಇದೆ. ಹೀಗಾಗಿ, ಒಂದೇ ಪಾರ್ಟ್​ನಲ್ಲಿ ಎಲ್ಲವನ್ನೂ ತುರುಕುವ ಬದಲು, ಎರಡು ಪಾರ್ಟ್​ಗಳಲ್ಲಿ ಸಿನಿಮಾ ತೆರೆಗೆ ತರಲು ಚಿಂತನೆ ನಡೆದಿದೆ ಎನ್ನುವ ಮಾತು ಈ ಮೊದಲು ಕೇಳಿ ಬಂದಿತ್ತು.

‘ಪಾರ್ಟ್​ 2’ ಸದ್ಯಕ್ಕಂತೂ ಅಸಂಭವದ ಮಾತು; ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್ ಮಾತು
ಪ್ರಶಾಂತ್ ನೀಲ್
TV9 Web
| Edited By: |

Updated on: Apr 09, 2022 | 1:47 PM

Share

ಇತ್ತೀಚಿನ ವರ್ಷಗಳಲ್ಲಿ ಹಲವು ಸಿನಿಮಾಗಳು ಎರಡು ಪಾರ್ಟ್​ನಲ್ಲಿ ತೆರೆಕಾಣುತ್ತಿವೆ. ಎಸ್​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’  (Bahubali) ಚಿತ್ರ ಎರಡು ಪಾರ್ಟ್​ನಲ್ಲಿ ಬಿಡುಗಡೆ ಆದ ನಂತರದಲ್ಲಿ ಈ ಟ್ರೆಂಡ್​ ಜೋರಾಗಿದೆ. ಕನ್ನಡದ ‘ಕೆಜಿಎಫ್​’ ಸಿನಿಮಾ (KGF Chapter 2) ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಆಗುತ್ತಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಕೂಡ ಇದೇ ಹಾಡಿ ಹಿಡಿದಿದೆ. ಖ್ಯಾತ ನಟ ಪ್ರಭಾಸ್ ಹಾಗೂ ಜನಪ್ರಿಯ ನಿರ್ದೇಶಕ ಪ್ರಶಾಂತ್​ ನೀಲ್​ ಒಟ್ಟಾಗಿ ಕೆಲಸ ಮಾಡುತ್ತಿರುವ ‘ಸಲಾರ್​’ ಸಿನಿಮಾ ಕೂಡ ಎರಡು ಪಾರ್ಟ್​ಗಳಲ್ಲಿ ಬರಲಿದೆ ಎಂಬ ಸುದ್ದಿ ಜೋರಾಗಿತ್ತು. ಇದಕ್ಕೆ ಪ್ರಶಾಂತ್​ ನೀಲ್​ ಉತ್ತರಿಸಿದ್ದಾರೆ.

‘ಬಾಹುಬಲಿ’ ಸರಣಿ ಒಪ್ಪಿಕೊಂಡ ಬಳಿಕ ಪ್ರಭಾಸ್​ ಖ್ಯಾತಿ ಹೆಚ್ಚಿದೆ ನಿಜ. ಆದರೆ, ಇತ್ತೀಚೆಗೆ ಅವರ ಸಿನಿಮಾಗಳು ಯಶಸ್ಸು ಕಾಣುತ್ತಿಲ್ಲ. 2-3 ವರ್ಷಕ್ಕೆ ಅವರ ನಟನೆಯ ಒಂದು ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ, ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆ ಪೈಕಿ ‘ಸಲಾರ್’ ಸಿನಿಮಾ ಕೂಡ ಒಂದು. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಬರಲಿದೆ ಎನ್ನಲಾಗಿತ್ತು. ಇದಕ್ಕೆ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ವಿಶ್ವಾದ್ಯಂತ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ, ಚಿತ್ರತಂಡ ಅದ್ದೂರಿಯಾಗಿಯೇ ಪ್ರಮೋಷನ್ ಮಾಡುತ್ತಿದೆ. ಈ ವೇಳೆ ಪ್ರಶಾಂತ್​ ನೀಲ್​ ಅವರಿಗೆ ‘ಸಲಾರ್’ ಬಗ್ಗೆಯೂ ಪ್ರಶ್ನೆಗಳು ಎದುರಾಗುತ್ತಿವೆ. ‘ಸಲಾರ್’ ಎರಡು ಪಾರ್ಟ್​ಗಳಲ್ಲಿ ಬರಲಿದೆಯೇ ಎಂದು ಕೇಳಲಾಯಿತು. ಇದಕ್ಕೆ ಸದ್ಯಕ್ಕಂತೂ ಆಲೋಚನೆ ಇಲ್ಲ ಎನ್ನುವ ಉತ್ತರ ಬಂತು.

‘ಸದ್ಯಕ್ಕಂತೂ ‘ಸಲಾರ್​ 2’ ಅನ್ನೋದು ಅಸಂಭವದ ಮಾತು. ಹೆಚ್ಚು ಹಣ ಗಳಿಸಬೇಕು ಎನ್ನುವ ಉದ್ದೇಶದಿಂದ ನಾನು ಕಥೆಯನ್ನು ದುರ್ಬಲಗೊಳಿಸುವುದಿಲ್ಲ. ನಿಜ ಹೇಳಬೇಕೆಂದರೆ ಇನ್ನೂ ಆ ಬಗ್ಗೆ ಆಲೋಚನೆಯನ್ನೇ ಮಾಡಿಲ್ಲ. ನಾನು ಪ್ರಭಾಸ್ ಅವರ ಜತೆ ಈ ಬಗ್ಗೆ ಚರ್ಚೆ ಮಾಡ್ತೇನೆ. ಅವರೂ ಒಪ್ಪಿದರೆ ಮುಂದುವರಿಯುತ್ತೇವೆ. ಸದ್ಯಕ್ಕೆ ನಾವು ‘ಸಲಾರ್ 2’ ಬಗ್ಗೆ ಒಂದೇ ಒಂದು ದಿನವೂ ಚರ್ಚಿಸಿಲ್ಲ’ ಎಂದಿದ್ದಾರೆ ಪ್ರಶಾಂತ್ ನೀಲ್.

‘ಸಲಾರ್​’ ಕಥೆಯನ್ನು ತುಂಬಾನೇ ವಿಸ್ತೃತವಾಗಿ ಹೇಳುವ ಅವಶ್ಯಕತೆ ಇದೆ. ಹೀಗಾಗಿ, ಒಂದೇ ಪಾರ್ಟ್​ನಲ್ಲಿ ಎಲ್ಲವನ್ನೂ ತುರುಕುವ ಬದಲು, ಎರಡು ಪಾರ್ಟ್​ಗಳಲ್ಲಿ ಸಿನಿಮಾ ತೆರೆಗೆ ತರಲು ಚಿಂತನೆ ನಡೆದಿದೆ ಎನ್ನುವ ಮಾತು ಈ ಮೊದಲು ಕೇಳಿ ಬಂದಿತ್ತು.

ಇದನ್ನೂ ಓದಿ: Shruti Haasan: ‘ಸಲಾರ್’ ಬೆಡಗಿ ಶೃತಿ ಹಾಸನ್ ತೆಕ್ಕೆಗೆ ಹೊಸ ಚಿತ್ರ; ನಟಿಯ ಬತ್ತಳಿಕೆಯಲ್ಲಿ ಈಗ ಇರುವ ಚಿತ್ರಗಳೆಷ್ಟು?

‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!