AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾರ್ಟ್​ 2’ ಸದ್ಯಕ್ಕಂತೂ ಅಸಂಭವದ ಮಾತು; ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್ ಮಾತು

‘ಸಲಾರ್​’ ಕಥೆಯನ್ನು ತುಂಬಾನೇ ವಿಸ್ತೃತವಾಗಿ ಹೇಳುವ ಅವಶ್ಯಕತೆ ಇದೆ. ಹೀಗಾಗಿ, ಒಂದೇ ಪಾರ್ಟ್​ನಲ್ಲಿ ಎಲ್ಲವನ್ನೂ ತುರುಕುವ ಬದಲು, ಎರಡು ಪಾರ್ಟ್​ಗಳಲ್ಲಿ ಸಿನಿಮಾ ತೆರೆಗೆ ತರಲು ಚಿಂತನೆ ನಡೆದಿದೆ ಎನ್ನುವ ಮಾತು ಈ ಮೊದಲು ಕೇಳಿ ಬಂದಿತ್ತು.

‘ಪಾರ್ಟ್​ 2’ ಸದ್ಯಕ್ಕಂತೂ ಅಸಂಭವದ ಮಾತು; ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್ ಮಾತು
ಪ್ರಶಾಂತ್ ನೀಲ್
TV9 Web
| Edited By: |

Updated on: Apr 09, 2022 | 1:47 PM

Share

ಇತ್ತೀಚಿನ ವರ್ಷಗಳಲ್ಲಿ ಹಲವು ಸಿನಿಮಾಗಳು ಎರಡು ಪಾರ್ಟ್​ನಲ್ಲಿ ತೆರೆಕಾಣುತ್ತಿವೆ. ಎಸ್​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ‘ಬಾಹುಬಲಿ’  (Bahubali) ಚಿತ್ರ ಎರಡು ಪಾರ್ಟ್​ನಲ್ಲಿ ಬಿಡುಗಡೆ ಆದ ನಂತರದಲ್ಲಿ ಈ ಟ್ರೆಂಡ್​ ಜೋರಾಗಿದೆ. ಕನ್ನಡದ ‘ಕೆಜಿಎಫ್​’ ಸಿನಿಮಾ (KGF Chapter 2) ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಆಗುತ್ತಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಕೂಡ ಇದೇ ಹಾಡಿ ಹಿಡಿದಿದೆ. ಖ್ಯಾತ ನಟ ಪ್ರಭಾಸ್ ಹಾಗೂ ಜನಪ್ರಿಯ ನಿರ್ದೇಶಕ ಪ್ರಶಾಂತ್​ ನೀಲ್​ ಒಟ್ಟಾಗಿ ಕೆಲಸ ಮಾಡುತ್ತಿರುವ ‘ಸಲಾರ್​’ ಸಿನಿಮಾ ಕೂಡ ಎರಡು ಪಾರ್ಟ್​ಗಳಲ್ಲಿ ಬರಲಿದೆ ಎಂಬ ಸುದ್ದಿ ಜೋರಾಗಿತ್ತು. ಇದಕ್ಕೆ ಪ್ರಶಾಂತ್​ ನೀಲ್​ ಉತ್ತರಿಸಿದ್ದಾರೆ.

‘ಬಾಹುಬಲಿ’ ಸರಣಿ ಒಪ್ಪಿಕೊಂಡ ಬಳಿಕ ಪ್ರಭಾಸ್​ ಖ್ಯಾತಿ ಹೆಚ್ಚಿದೆ ನಿಜ. ಆದರೆ, ಇತ್ತೀಚೆಗೆ ಅವರ ಸಿನಿಮಾಗಳು ಯಶಸ್ಸು ಕಾಣುತ್ತಿಲ್ಲ. 2-3 ವರ್ಷಕ್ಕೆ ಅವರ ನಟನೆಯ ಒಂದು ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ, ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆ ಪೈಕಿ ‘ಸಲಾರ್’ ಸಿನಿಮಾ ಕೂಡ ಒಂದು. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ಬರಲಿದೆ ಎನ್ನಲಾಗಿತ್ತು. ಇದಕ್ಕೆ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ವಿಶ್ವಾದ್ಯಂತ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ, ಚಿತ್ರತಂಡ ಅದ್ದೂರಿಯಾಗಿಯೇ ಪ್ರಮೋಷನ್ ಮಾಡುತ್ತಿದೆ. ಈ ವೇಳೆ ಪ್ರಶಾಂತ್​ ನೀಲ್​ ಅವರಿಗೆ ‘ಸಲಾರ್’ ಬಗ್ಗೆಯೂ ಪ್ರಶ್ನೆಗಳು ಎದುರಾಗುತ್ತಿವೆ. ‘ಸಲಾರ್’ ಎರಡು ಪಾರ್ಟ್​ಗಳಲ್ಲಿ ಬರಲಿದೆಯೇ ಎಂದು ಕೇಳಲಾಯಿತು. ಇದಕ್ಕೆ ಸದ್ಯಕ್ಕಂತೂ ಆಲೋಚನೆ ಇಲ್ಲ ಎನ್ನುವ ಉತ್ತರ ಬಂತು.

‘ಸದ್ಯಕ್ಕಂತೂ ‘ಸಲಾರ್​ 2’ ಅನ್ನೋದು ಅಸಂಭವದ ಮಾತು. ಹೆಚ್ಚು ಹಣ ಗಳಿಸಬೇಕು ಎನ್ನುವ ಉದ್ದೇಶದಿಂದ ನಾನು ಕಥೆಯನ್ನು ದುರ್ಬಲಗೊಳಿಸುವುದಿಲ್ಲ. ನಿಜ ಹೇಳಬೇಕೆಂದರೆ ಇನ್ನೂ ಆ ಬಗ್ಗೆ ಆಲೋಚನೆಯನ್ನೇ ಮಾಡಿಲ್ಲ. ನಾನು ಪ್ರಭಾಸ್ ಅವರ ಜತೆ ಈ ಬಗ್ಗೆ ಚರ್ಚೆ ಮಾಡ್ತೇನೆ. ಅವರೂ ಒಪ್ಪಿದರೆ ಮುಂದುವರಿಯುತ್ತೇವೆ. ಸದ್ಯಕ್ಕೆ ನಾವು ‘ಸಲಾರ್ 2’ ಬಗ್ಗೆ ಒಂದೇ ಒಂದು ದಿನವೂ ಚರ್ಚಿಸಿಲ್ಲ’ ಎಂದಿದ್ದಾರೆ ಪ್ರಶಾಂತ್ ನೀಲ್.

‘ಸಲಾರ್​’ ಕಥೆಯನ್ನು ತುಂಬಾನೇ ವಿಸ್ತೃತವಾಗಿ ಹೇಳುವ ಅವಶ್ಯಕತೆ ಇದೆ. ಹೀಗಾಗಿ, ಒಂದೇ ಪಾರ್ಟ್​ನಲ್ಲಿ ಎಲ್ಲವನ್ನೂ ತುರುಕುವ ಬದಲು, ಎರಡು ಪಾರ್ಟ್​ಗಳಲ್ಲಿ ಸಿನಿಮಾ ತೆರೆಗೆ ತರಲು ಚಿಂತನೆ ನಡೆದಿದೆ ಎನ್ನುವ ಮಾತು ಈ ಮೊದಲು ಕೇಳಿ ಬಂದಿತ್ತು.

ಇದನ್ನೂ ಓದಿ: Shruti Haasan: ‘ಸಲಾರ್’ ಬೆಡಗಿ ಶೃತಿ ಹಾಸನ್ ತೆಕ್ಕೆಗೆ ಹೊಸ ಚಿತ್ರ; ನಟಿಯ ಬತ್ತಳಿಕೆಯಲ್ಲಿ ಈಗ ಇರುವ ಚಿತ್ರಗಳೆಷ್ಟು?

‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು