NTR31: ಜ್ಯೂ.ಎನ್​ಟಿಆರ್ ಅಭಿಮಾನಿಗಳಿಗೆ ತ್ರಿಬಲ್ ಧಮಾಕಾ; ನೀಲ್-ತಾರಕ್ ಕಾಂಬಿನೇಷನ್​ನ ಹೊಸ ಚಿತ್ರ ಅನೌನ್ಸ್​​​

Jr NTR Birthday | Prashanth Neel: ಜ್ಯೂ.ಎನ್​ಟಿಆರ್ ಜನ್ಮದಿನದ ಸಂಭ್ರಮದಲ್ಲಿರುವ ಅಭಿಮಾನಿಗಳಿಗೆ 3 ಉಡುಗೊರೆಗಳು ಸಿಕ್ಕಿವೆ. ಗುರುವಾರ ‘ಎನ್​ಟಿಆರ್ 30’ ಅನೌನ್ಸ್ ಆಗಿತ್ತು. ಇಂದು ಪ್ರಶಾಂತ್ ನೀಲ್- ತಾರಕ್ ಕಾಂಬಿನೇಷನ್​ನ ‘ಎನ್​ಟಿಆರ್31’ ಫಸ್ಟ್​ ಲುಕ್ ಬಿಡುಗಡೆಯಾಗಿದೆ. ಇದಲ್ಲದೇ ‘ಆರ್​ಆರ್​ಆರ್​’ ಚಿತ್ರ ಇಂದಿನಿಂದ ಓಟಿಟಿಯಲ್ಲಿ ಬಿತ್ತರವಾಗಲಿದೆ.

NTR31: ಜ್ಯೂ.ಎನ್​ಟಿಆರ್ ಅಭಿಮಾನಿಗಳಿಗೆ ತ್ರಿಬಲ್ ಧಮಾಕಾ; ನೀಲ್-ತಾರಕ್ ಕಾಂಬಿನೇಷನ್​ನ ಹೊಸ ಚಿತ್ರ ಅನೌನ್ಸ್​​​
‘ಎನ್​ಟಿಆರ್​31’ ಫಸ್ಟ್​​ ಲುಕ್ (ಎಡ ಚಿತ್ರ), ಪ್ರಶಾಂತ್ ನೀಲ್-ಜ್ಯೂ.ಎನ್​ಟಿಆರ್ (ಬಲ ಚಿತ್ರ)
Follow us
| Updated By: shivaprasad.hs

Updated on:May 20, 2022 | 12:48 PM

ಟಾಲಿವುಡ್​ನ ಖ್ಯಾತ ನಟ ಜ್ಯೂ.ಎನ್​ಟಿಆರ್ (JR NTR Birthday) ಇಂದು (ಮೇ.20) ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜ್ಯೂ.ಎನ್​ಟಿಆರ್​ ಅಭಿಮಾನಿಗಳ ಸಂಭ್ರಮಕ್ಕೆ ಕಿಚ್ಚು ಹತ್ತಿಸುವಂತೆ ಪ್ರಶಾಂತ್ ನೀಲ್ ಕಾಂಬಿನೇಷನ್​ನ ಹೊಸ ಚಿತ್ರ ಘೋಷಣೆಯಾಗಿದೆ. ‘ಎನ್​ಟಿಆರ್​31’ ಎಂದು ಚಿತ್ರವನ್ನು ಗುರುತಿಸಲಾಗುತ್ತಿದ್ದು, ಮೊದಲ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ‘ಪುಷ್ಪ’ದಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ‘ಮೈತ್ರಿ ಮೂವಿ ಮೇಕರ್ಸ್​’ ನೀಲ್-ತಾರಕ್ ಕಾಂಬಿನೇಷನ್​ನ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಮೊದಲ ಪೋಸ್ಟರ್​ನಲ್ಲಿ ಸಖತ್ ಮಾಸ್ ಆಗಿ ಕಾಣಿಸಿಕೊಂಡಿರುವ ಜ್ಯೂ.ಎನ್​ಟಿಆರ್​ ಕಣ್ಣಿನಲ್ಲೇ ಅಬ್ಬರಿಸಿದ್ದಾರೆ. ಪ್ರಶಾಂತ್ ನೀಲ್ ಟ್ರೇಡ್​ ಮಾರ್ಕ್​ ಮಾದರಿಯಲ್ಲಿ ಕಪ್ಪು-ಬಿಳುಪಿನ ಪೋಸ್ಟರ್​ ರಿಲೀಸ್ ಮಾಡಲಾಗಿದೆ. ಅದಕ್ಕೆ ‘‘ರಕ್ತದಲ್ಲಿ ತೋಯ್ದ ಮಣ್ಣು ನೆನಪಿನಲ್ಲಿ ಉಳಿಯುತ್ತದೆ. ಅವನ ಮಣ್ಣು, ಅವನ ಆಳ್ವಿಕೆ.. ಆದರೆ ರಕ್ತ ಮಾತ್ರ ಅವನದ್ದಲ್ಲ’’ ಎಂದು ಪವರ್​ಫುಲ್ ಕ್ಯಾಪ್ಶನ್ ನೀಡಲಾಗಿದೆ. ಚಿತ್ರದ ಪೋಸ್ಟರ್ ಇಲ್ಲಿದೆ.

ಮೈತ್ರಿ ಮೂವಿ ಮೇಕರ್ಸ್​ ಹಂಚಿಕೊಂಡ ಟ್ವೀಟ್:

ಇದನ್ನೂ ಓದಿ
Image
Vijay Babu: ಲೈಂಗಿಕ ದೌರ್ಜನ್ಯದ ಆರೋಪ; ನಟ ವಿಜಯ್ ಬಾಬು ಪಾಸ್​ಪೋರ್ಟ್​​ ಜಪ್ತಿ
Image
Bagheera Movie: ನೆರವೇರಿತು ‘ಬಘೀರಾ’ ಮುಹೂರ್ತ; ಪ್ರಶಾಂತ್ ನೀಲ್ ಕತೆಗೆ ಶ್ರೀಮುರುಳಿ ನಾಯಕ
Image
Jr NTR Birthday: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್
Image
ಲೈವ್​ನಲ್ಲಿ ಹೆಂಡತಿಗೆ ಕಿಸ್ ಮಾಡಿದ ಬಿಗ್ ಬಾಸ್ ಸ್ಪರ್ಧಿ; ಸಿಟ್ಟಾದ ಪತ್ನಿ, ವೈರಲ್ ಆಯ್ತು ವಿಡಿಯೋ

ಇದನ್ನೂ ಓದಿ: Jr NTR Birthday: ಟಾಲಿವುಡ್ ನಟನಾದರೂ ಕನ್ನಡದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಜ್ಯೂ. ಎನ್‌ಟಿಆರ್

ಜ್ಯೂ.ಎನ್​ಟಿಆರ್ ಅಭಿಮಾನಿಗಳಿಗೆ ತ್ರಿಬಲ್ ಧಮಾಕಾ:

ನಿನ್ನೆಯಷ್ಟೇ ಕೊರಟಾಲ ಶಿವ ಹಾಗೂ ಜ್ಯೂ.ಎನ್​ಟಿಆರ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ ಅನೌನ್ಸ್ ಆಗಿತ್ತು. ಅದನ್ನು ‘ಎನ್​ಟಿಆರ್30’ ಹೆಸರಿನಿಂದ ಗುರುತಿಸಲಾಗುತ್ತಿದೆ. ಅದರ ಸಣ್ಣ ಟೀಸರ್​ ಕೂಡ ಬಿಡುಗಡೆ ಮಾಡಲಾಗಿತ್ತು. ಪಕ್ಕಾ ಆಕ್ಷನ್​ ಚಿತ್ರದ ಸೂಚನೆ ನೀಡಿರುವ ಅದು ವೈರಲ್ ಆಗಿತ್ತು.

ಇದನ್ನೂ ಓದಿ: Jr NTR Birthday: ಜ್ಯೂ.ಎನ್​ಟಿಆರ್​ ಜನ್ಮದಿನ; ಈ ನಟನ ಬಗ್ಗೆ ನಿಮಗೆ ಗೊತ್ತಿರದ ಐದು ಅಪರೂಪದ ವಿಚಾರಗಳು

ಎರಡು ಹೊಸ ಚಿತ್ರಗಳು ಅನೌನ್ಸ್​ ಆದ ಖುಷಿಯಲ್ಲಿ ಅಭಿಮಾನಿಗಳಿಗೆ ಮತ್ತೊಂದು ಉಡುಗೊರೆಯೂ ಸಿಕ್ಕಿದೆ. ಹೌದು. ರಾಜಮೌಳಿ ನಿರ್ದೇಶನದ ಸೂಪರ್ ಹಿಟ್ ಚಿತ್ರ ‘ಆರ್​ಆರ್​ಆರ್​’ ಇಂದಿನಿಂದ ಓಟಿಟಿಯಲ್ಲಿ ಬಿತ್ತರವಾಗುತ್ತಿದೆ. ಈ ಮೂಲಕ ಅಭಿಮಾನಿಗಳಿಗೆ ತ್ರಿಬಲ್ ಧಮಾಕಾ ಸಿಕ್ಕಿದಂತಾಗಿದ್ದು, ನೆಚ್ಚಿನ ನಟನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Fri, 20 May 22

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ