AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel: ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್ ಚಿತ್ರಕ್ಕೆ ಸಿಕ್ತು ಪವರ್​ಫುಲ್ ಟೈಟಲ್

ಮೇ 20ರಂದು ಜೂನಿಯರ್​ ಎನ್​ಟಿಆರ್ ಬರ್ತ್​ಡೇ. ಈ ಹಿನ್ನೆಲೆಯಲ್ಲಿ ‘ದೇವರ’ ಸಿನಿಮಾದ ಸಾಂಗ್ ರಿಲೀಸ್ ಆಗಲಿದೆ. ‘ವಾರ್ 2’ ಕಡೆಯಿಂದ ಪೋಸ್ಟರ್ ರಿಲೀಸ್ ಆಗೋ ಸಾಧ್ಯತೆ ಇದೆ. ಅದೇ ರೀತಿ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಟೈಟಲ್ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ. ಈ ಚಿತ್ರಕ್ಕೆ ಈಗ ಪವರ್​ಫುಲ್ ಟೈಟಲ್ ಕೂಡ ಸಿಕ್ಕಿದೆ.

Prashanth Neel: ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್ ಚಿತ್ರಕ್ಕೆ ಸಿಕ್ತು ಪವರ್​ಫುಲ್ ಟೈಟಲ್
ಜೂ.ಎನ್​ಟಿಆರ್​-ಪ್ರಶಾಂತ್ ನೀಲ್
ರಾಜೇಶ್ ದುಗ್ಗುಮನೆ
|

Updated on: May 17, 2024 | 7:07 AM

Share

ಜೂನಿಯರ್ ಎನ್​ಟಿಆರ್ ಹಾಗೂ ಪ್ರಶಾಂತ್ ನೀಲ್ (Prashanth Neel) ಒಟ್ಟಾಗಿ ಸಿನಿಮಾ ಮಾಡುತ್ತಾರೆ ಅನ್ನೋದು ಇಂದು ನಿನ್ನೆಯ ಚರ್ಚೆ ಅಲ್ಲ. ಬಹಳ ವರ್ಷಗಳ ಹಿಂದೆಯೇ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಆದರೆ, ಈವರೆಗೆ ಸಿನಿಮಾ ಕೆಲಸಗಳು ಆರಂಭ ಆಗಿಲ್ಲ. ಇಬ್ಬರೂ ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಈಗ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಸಿನಿಮಾ ಸೆಟ್ಟೇರೋ ಸಮಯ. ಈ ಚಿತ್ರಕ್ಕೆ ಈಗಾಗಲೇ ಪವರ್​ಫುಲ್ ಟೈಟಲ್ ಸಿಕ್ಕಿದೆ ಎನ್ನಲಾಗಿದೆ.

ಜೂನಿಯರ್​ ಎನ್​ಟಿಆರ್​ ಅವರು ‘ದೇವರ’ ಹಾಗೂ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸುತ್ತಿದ್ದಾರೆ. ಮೇ 20ರಂದು ಜೂನಿಯರ್​ ಎನ್​ಟಿಆರ್ ಬರ್ತ್​ಡೇ. ಈ ಹಿನ್ನೆಲೆಯಲ್ಲಿ ‘ದೇವರ’ ಸಿನಿಮಾದ ಸಾಂಗ್ ರಿಲೀಸ್ ಆಗಲಿದೆ. ‘ವಾರ್ 2’ ಕಡೆಯಿಂದ ಪೋಸ್ಟರ್ ರಿಲೀಸ್ ಆಗೋ ಸಾಧ್ಯತೆ ಇದೆ. ಅದೇ ರೀತಿ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಟೈಟಲ್ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಟೈಟಲ್ ಇಡಲಾಗಿದೆಯಂತೆ.

‘ದೇವರ’ ಹಾಗೂ ‘ವಾರ್ 2’ ಕೆಲಸಗಳ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಪ್ರಶಾಂತ್ ನೀಲ್ ಸಿನಿಮಾಗಳಲ್ಲಿ ಬ್ಯುಸಿ ಆಗಲಿದ್ದಾರೆ. ಪ್ರಶಾಂತ್ ನೀಲ್ ಅವರು ‘ಸಲಾರ್’ ಬಳಿಕ ಜೂನಿಯರ್​ ಎನ್​ಟಿಆರ್ ಕಾಲ್​ಶೀಟ್​ಗಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ಟೈಟಲ್ ವಿಚಾರ ಚರ್ಚೆಗೆ ಬಂದಿದೆ. ‘ಡ್ರ್ಯಾಗನ್’ ಅನ್ನೋದು ಪವರ್​ಫುಲ್ ಟೈಟಲ್ ಎನಿಸುತ್ತದೆ. ಹೀಗಾಗಿ ಈ ಟೈಟಲ್ ಫೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ದೇವಸ್ಥಾನ ನಿರ್ಮಾಣಕ್ಕೆ 12.5 ಲಕ್ಷ ರೂಪಾಯಿ ದೇಣಿಗೆ ನೀಡಿದ ಜೂ. ಎನ್​ಟಿಆರ್​

ಈ ಮೊದಲ ಜೂನಿಯರ್​ ಎನ್​ಟಿಆರ್​ ಬರ್ತ್​ಡೇ ದಿನಗಳಲ್ಲಿ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ ಸಿನಿಮಾ ಮಾಡೋ ಬಗ್ಗೆ ಘೋಷಣೆ ಮಾಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವರ್ಷದ ಆರಂಭದಲ್ಲೇ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಕೆಲಸಗಳು ವಿಳಂಬ ಆಗುತ್ತಲೇ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?