Prashanth Neel: ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್ ಚಿತ್ರಕ್ಕೆ ಸಿಕ್ತು ಪವರ್​ಫುಲ್ ಟೈಟಲ್

ಮೇ 20ರಂದು ಜೂನಿಯರ್​ ಎನ್​ಟಿಆರ್ ಬರ್ತ್​ಡೇ. ಈ ಹಿನ್ನೆಲೆಯಲ್ಲಿ ‘ದೇವರ’ ಸಿನಿಮಾದ ಸಾಂಗ್ ರಿಲೀಸ್ ಆಗಲಿದೆ. ‘ವಾರ್ 2’ ಕಡೆಯಿಂದ ಪೋಸ್ಟರ್ ರಿಲೀಸ್ ಆಗೋ ಸಾಧ್ಯತೆ ಇದೆ. ಅದೇ ರೀತಿ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಟೈಟಲ್ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ. ಈ ಚಿತ್ರಕ್ಕೆ ಈಗ ಪವರ್​ಫುಲ್ ಟೈಟಲ್ ಕೂಡ ಸಿಕ್ಕಿದೆ.

Prashanth Neel: ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್ ಚಿತ್ರಕ್ಕೆ ಸಿಕ್ತು ಪವರ್​ಫುಲ್ ಟೈಟಲ್
ಜೂ.ಎನ್​ಟಿಆರ್​-ಪ್ರಶಾಂತ್ ನೀಲ್
Follow us
|

Updated on: May 17, 2024 | 7:07 AM

ಜೂನಿಯರ್ ಎನ್​ಟಿಆರ್ ಹಾಗೂ ಪ್ರಶಾಂತ್ ನೀಲ್ (Prashanth Neel) ಒಟ್ಟಾಗಿ ಸಿನಿಮಾ ಮಾಡುತ್ತಾರೆ ಅನ್ನೋದು ಇಂದು ನಿನ್ನೆಯ ಚರ್ಚೆ ಅಲ್ಲ. ಬಹಳ ವರ್ಷಗಳ ಹಿಂದೆಯೇ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಆದರೆ, ಈವರೆಗೆ ಸಿನಿಮಾ ಕೆಲಸಗಳು ಆರಂಭ ಆಗಿಲ್ಲ. ಇಬ್ಬರೂ ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಈಗ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಸಿನಿಮಾ ಸೆಟ್ಟೇರೋ ಸಮಯ. ಈ ಚಿತ್ರಕ್ಕೆ ಈಗಾಗಲೇ ಪವರ್​ಫುಲ್ ಟೈಟಲ್ ಸಿಕ್ಕಿದೆ ಎನ್ನಲಾಗಿದೆ.

ಜೂನಿಯರ್​ ಎನ್​ಟಿಆರ್​ ಅವರು ‘ದೇವರ’ ಹಾಗೂ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸುತ್ತಿದ್ದಾರೆ. ಮೇ 20ರಂದು ಜೂನಿಯರ್​ ಎನ್​ಟಿಆರ್ ಬರ್ತ್​ಡೇ. ಈ ಹಿನ್ನೆಲೆಯಲ್ಲಿ ‘ದೇವರ’ ಸಿನಿಮಾದ ಸಾಂಗ್ ರಿಲೀಸ್ ಆಗಲಿದೆ. ‘ವಾರ್ 2’ ಕಡೆಯಿಂದ ಪೋಸ್ಟರ್ ರಿಲೀಸ್ ಆಗೋ ಸಾಧ್ಯತೆ ಇದೆ. ಅದೇ ರೀತಿ ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಟೈಟಲ್ ಅನೌನ್ಸ್ ಆಗೋ ಸಾಧ್ಯತೆ ಇದೆಯಂತೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಟೈಟಲ್ ಇಡಲಾಗಿದೆಯಂತೆ.

‘ದೇವರ’ ಹಾಗೂ ‘ವಾರ್ 2’ ಕೆಲಸಗಳ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ಪ್ರಶಾಂತ್ ನೀಲ್ ಸಿನಿಮಾಗಳಲ್ಲಿ ಬ್ಯುಸಿ ಆಗಲಿದ್ದಾರೆ. ಪ್ರಶಾಂತ್ ನೀಲ್ ಅವರು ‘ಸಲಾರ್’ ಬಳಿಕ ಜೂನಿಯರ್​ ಎನ್​ಟಿಆರ್ ಕಾಲ್​ಶೀಟ್​ಗಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ಟೈಟಲ್ ವಿಚಾರ ಚರ್ಚೆಗೆ ಬಂದಿದೆ. ‘ಡ್ರ್ಯಾಗನ್’ ಅನ್ನೋದು ಪವರ್​ಫುಲ್ ಟೈಟಲ್ ಎನಿಸುತ್ತದೆ. ಹೀಗಾಗಿ ಈ ಟೈಟಲ್ ಫೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ದೇವಸ್ಥಾನ ನಿರ್ಮಾಣಕ್ಕೆ 12.5 ಲಕ್ಷ ರೂಪಾಯಿ ದೇಣಿಗೆ ನೀಡಿದ ಜೂ. ಎನ್​ಟಿಆರ್​

ಈ ಮೊದಲ ಜೂನಿಯರ್​ ಎನ್​ಟಿಆರ್​ ಬರ್ತ್​ಡೇ ದಿನಗಳಲ್ಲಿ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ ಸಿನಿಮಾ ಮಾಡೋ ಬಗ್ಗೆ ಘೋಷಣೆ ಮಾಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವರ್ಷದ ಆರಂಭದಲ್ಲೇ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಕೆಲಸಗಳು ವಿಳಂಬ ಆಗುತ್ತಲೇ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!