AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಪಾರ್ಟ್​ನಲ್ಲಿ ಬರಲಿದೆ ನೀಲ್​-ಜೂ. ಎನ್​ಟಿಆರ್ ಸಿನಿಮಾ? ‘ಕೆಜಿಎಫ್ 3’ ಕಥೆ ಏನು?

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಎರಡು ಪಾರ್ಟ್​ನಲ್ಲಿ ಮೂಡಿ ಬಂದಿದೆ. ಮೂರನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ಅದೇ ರೀತಿ ಜೂನಿಯರ್ ಎನ್​ಟಿಆರ್ ಜೊತೆ ಅವರು ಮಾಡಲಿರುವ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿದೆ.

ಎರಡು ಪಾರ್ಟ್​ನಲ್ಲಿ ಬರಲಿದೆ ನೀಲ್​-ಜೂ. ಎನ್​ಟಿಆರ್ ಸಿನಿಮಾ? ‘ಕೆಜಿಎಫ್ 3’ ಕಥೆ ಏನು?
ಜೂನಿಯರ್ ಎನ್​ಟಿಆರ್- ಪ್ರಶಾಂತ್ ನೀಲ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 26, 2024 | 9:30 AM

ಇತ್ತೀಚೆಗೆ ಸಿನಿಮಾಗಳನ್ನು ಎರಡು ಪಾರ್ಟ್​ನಲ್ಲಿ ರಿಲೀಸ್ ಮಾಡೋ ಟ್ರೆಂಡ್ ಜೋರಾಗಿದೆ. ಹಲವು ಸಿನಿಮಾಗಳನ್ನು ಎರಡು ಪಾರ್ಟ್​ಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ. ಮೊದಲಿಗೆ ‘ಬಾಹುಬಲಿ’ ಎರಡು ಪಾರ್ಟ್​ನಲ್ಲಿ ಬಂತು. ಆ ಬಳಿಕ ‘ಕೆಜಿಎಫ್’ (KGF), ‘ಪುಷ್ಪ’ ಸೇರಿ ಅನೇಕ ಸಿನಿಮಾಗಳು ಈ ಟ್ರೆಂಡ್​ನ ಫಾಲೋ ಮಾಡಿವೆ. ಒಂದು ಕಥೆಯನ್ನು ವಿಸ್ತಾರವಾಗಿ ಹೇಳಲು ಇದು ಹೆಚ್ಚು ಸಹಕಾರಿ. ಈಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗೋ ಸೂಚನೆ ಸಿಕ್ಕಿದೆ. ಜೂನಿಯರ್ ಎನ್​ಟಿಆರ್ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿದೆ ಎನ್ನಲಾಗಿದೆ.

ಜೂನಿಯರ್ ಎನ್​ಟಿಆರ್ ಅವರು ಈಗಾಗಲೇ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ಗೆ ಹೆಚ್ಚು ನಿರೀಕ್ಷೆ ಇದೆ. ಈ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿದೆ. ಈ ಆ್ಯಕ್ಷನ್ ಸಿನಿಮಾದ ಸೆಟ್​ನ ಫೋಟೋಗಳು ಲೀಕ್ ಆಗುತ್ತಿವೆ. ಹೀಗಿರುವಾಗಲೇ ಹೊಸ ಸುದ್ದಿ ಒಂದು ಹರಿದಾಡಿದೆ. ಪ್ರಶಾಂತ್ ನೀಲ್ ಜೊತೆ ಅವರು ಮಾಡುತ್ತಿರುವ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಬರಲಿದೆಯಂತೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಎರಡು ಪಾರ್ಟ್​ನಲ್ಲಿ ಮೂಡಿ ಬಂದಿದೆ. ಮೂರನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ಅದೇ ರೀತಿ ‘ಸಲಾರ್’ ಸಿನಿಮಾದ ಒಂದು ಪಾರ್ಟ್ ರಿಲೀಸ್ ಆಗಿದ್ದು, ಎರಡನೇ ಪಾರ್ಟ್​ನ ಕೆಲಸ ಇನ್ನಷ್ಟೇ ಆರಂಭ ಆಗಬೇಕಿದೆ. ಅದೇ ರೀತಿ ಜೂನಿಯರ್ ಎನ್​ಟಿಆರ್ ಜೊತೆ ಅವರು ಮಾಡಲಿರುವ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿದೆ.

ಜೂನಿಯರ್ ಎನ್​ಟಿಆರ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮೊದಲ ಪಾರ್ಟ್​ ರಿಲೀಸ್​ ಆದ ಬಳಿಕ ಎರಡನೇ ಪಾರ್ಟ್ ಶೂಟ್ ಮಾಡಲು ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ. ಇದನ್ನು ಕೇವಲ ಸೆಟ್​ನಲ್ಲಿ ಶೂಟ್ ಮಾಡದೇ 10ಕ್ಕೂ ಅಧಿಕ ದೇಶಗಳಲ್ಲಿ ಇದನ್ನು ಶೂಟ್ ಮಾಡುವ ಆಲೋಚನೆ ಪ್ರಶಾಂತ್ ನೀಲ್ ಅವರಿಗೆ ಇದೆ.

ಇದನ್ನೂ ಓದಿ: ‘ಪ್ರಶಾಂತ್ ನೀಲ್ ಮಾತು ಟಚ್ ಆಯ್ತು’; ತಮ್ಮ ಬಗ್ಗೆ ಮಾತನಾಡಿದ ನಿರ್ದೇಶಕನಿಗೆ ಉಪೇಂದ್ರ ಧನ್ಯವಾದ

ಪ್ರಶಾಂತ್ ನೀಲ್ ಅವರು ‘ಕೆಜಿಎಫ್ 3’ ಕೆಲಸಗಳಲ್ಲೂ ತೊಡಗಿಕೊಳ್ಳಬೇಕಿದೆ. ಆದರೆ, ಸದ್ಯಕ್ಕಂತೂ ಈ ಸಿನಿಮಾ ಸೆಟ್ಟೇರೋದು ಅನುಮಾನ ಎಂದು ಹೇಳಲಾಗುತ್ತಿದೆ. ಪ್ರಶಾಂತ್ ನೀಲ್ ಅವರು ‘ಸಲಾರ್​’ ಸಿನಿಮಾದ ಎರಡನೇ ಪಾರ್ಟ್​ ಕೆಲಸಗಳಲ್ಲೂ ತೊಡಗಿಕೊಳ್ಳಬೇಕಿದೆ. ಈ ಚಿತ್ರದ ಕೆಲಸಗಳು ಶುರುವಾಗೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.  ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ಆದ ಬಳಿಕ ‘ಕೆಜಿಎಫ್ 3’ ಸೆಟ್ಟೇರಲಿದೆಯೇ ಎನ್ನುವ ಪ್ರಶ್ನೆಯೂ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ