AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್​ ಚಿತ್ರದಲ್ಲಿ ಪ್ರಭಾಸ್​ ಕೇಶ ವಿನ್ಯಾಸಕ್ಕೆ ಲಕ್ಷಲಕ್ಷ ಸುರಿದ ನಿರ್ಮಾಪಕರು

ಸಲಾರ್​ ಬಿಗ್​ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಚಿತ್ರ. ಹೊಂಬಾಳೆ ಫಿಲ್ಮ್ಸ್​ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದೆ. ಮೂಲಗಳ ಪ್ರಕಾರ ಈ ಚಿತ್ರ 150 ಕೋಟಿ ಬಜೆಟ್​ನಲ್ಲಿ ಸಿದ್ಧಗೊಳ್ಳಲಿದೆ ಎನ್ನುವ ಸುದ್ದಿಯಿದೆ. ಪ್ರ

ಸಲಾರ್​ ಚಿತ್ರದಲ್ಲಿ ಪ್ರಭಾಸ್​ ಕೇಶ ವಿನ್ಯಾಸಕ್ಕೆ ಲಕ್ಷಲಕ್ಷ ಸುರಿದ ನಿರ್ಮಾಪಕರು
ನಟ ಪ್ರಭಾಸ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 30, 2021 | 10:01 PM

Share

ದೊಡ್ಡ ಬಜೆಟ್​ ಸಿನಿಮಾಗಳಿಗೆ ಸಣ್ಣಸಣ್ಣ ವಿಚಾರಕ್ಕೂ ಸಾಕಷ್ಟು ಪ್ರಾಮುಖ್ಯತೆ ಕೊಡಲಾಗುತ್ತದೆ. ಸಿನಿಮಾ ಬಜೆಟ್​ ಹೆಚ್ಚೋಕೆ ಇದೂ ಕೂಡ ಒಂದು ಕಾರಣ. ಪ್ರಭಾಸ್​ ನಟನೆಯ ‘ಸಲಾರ್’​ ಸಿನಿಮಾ ಕೂಡ ಈಗ ಅಂಥದ್ದೇ ವಿಚಾರಕ್ಕೆ ಸುದ್ದಿಯಾಗಿದೆ. ಈ ಸಿನಿಮಾದಲ್ಲಿನ ಪ್ರಭಾಸ್​ ಕೇಶ ವಿನ್ಯಾಸಕ್ಕೆ ನಿರ್ಮಾಪಕರು ದೊಡ್ಡ ಮೊತ್ತದ ಹಣ ಸುರಿಯುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಸಲಾರ್​ ಬಿಗ್​ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಚಿತ್ರ. ಹೊಂಬಾಳೆ ಫಿಲ್ಮ್ಸ್​ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದೆ. ಮೂಲಗಳ ಪ್ರಕಾರ ಈ ಚಿತ್ರ 150 ಕೋಟಿ ಬಜೆಟ್​ನಲ್ಲಿ ಸಿದ್ಧಗೊಳ್ಳಲಿದೆ ಎನ್ನುವ ಸುದ್ದಿಯಿದೆ. ಪ್ರಶಾಂತ್​ ನೀಲ್​ ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿರುವುದರಿಂದ ಸಿನಿಮಾ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ಚಿತ್ರಗಳಲ್ಲಿ ಒಂದು ಅದ್ದೂರಿತನ ಇರುತ್ತದೆ. ಸಣ್ಣಸಣ್ಣ ವಿಚಾರಕ್ಕೂ ಪ್ರಶಾಂತ್​ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಸಲಾರ್​ ಸಿನಿಮಾ ಕೂಡ ಅಚ್ಚುಕಟ್ಟಾಗಿ ಮೂಡಿಬರೋಕೆ ಪ್ರಶಾಂತ್​ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಇದರಲ್ಲಿ ಪ್ರಭಾಸ್​ ಅವರ ಹೇರ್​ಸ್ಟೈಲ್​ ಕೂಡ ಒಂದು.

ಕೆಜಿಎಫ್​ ಚಿತ್ರದಲ್ಲಿ ಯಶ್​ ಉದ್ದನೆಯ ಗಡ್ಡ ಹಾಗೂ ಕೂದಲು ಎಲ್ಲರ ಗಮನ ಸೆಳೆದಿತ್ತು. ಕೆಜಿಎಫ್​ 2ನಲ್ಲೂ ಯಶ್​ ಅವತಾರ  ಹೀಗೆಯೇ ಇರಲಿದೆ. ಅದೇ ರೀತಿ ಸಲಾರ್​ ಚಿತ್ರಕ್ಕಾಗಿ ಪ್ರಭಾಸ್​ ಭಿನ್ನ ಅವತಾರ ತಾಳುತ್ತಿದ್ದಾರೆ. ಅವರ ಕೇಶ ವಿನ್ಯಾಸಕ್ಕಾಗಿ 4 ಲಕ್ಷ ರೂಪಾಯಿ ಖರ್ಚಾಗಲಿದೆಯಂತೆ. ಬಾಲಿವುಡ್​ ಹೇರ್​ ಸ್ಟೈಲಿಸ್ಟ್​ ಇದಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್​ ಅಂಗಳದಲ್ಲಿ ಕೇಳಿ ಬಂದಿದೆ.

ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ಸಲಾರ್ ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿದ್ದವು. ಈಗ ಲಾಕ್​ಡೌನ್​ ಸಡಿಲಗೊಂಡಿದ್ದು, ಮತ್ತೆ ಸಿನಿಮಾ ಕೆಲಸಗಳು ಭರದಿಂದ ಸಾಗಿವೆ.

2022ರ ಏಪ್ರಿಲ್​ ತಿಂಗಳಲ್ಲಿ ಸಲಾರ್​ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಕೆಜಿಎಫ್​ ಸಿನಿಮಾದಲ್ಲಿ ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಇದನ್ನೂ ಓದಿ: ಸಲಾರ್​ ಬಳಿಕ ಕಾದಿದೆ ಸರ್ಪ್ರೈಸ್​; ಪ್ರಭಾಸ್​ ಜೊತೆ ಇಂಥ ಸಿನಿಮಾನೂ ಮಾಡ್ತಾರಾ ಪ್ರಶಾಂತ್​ ನೀಲ್​?

ಸಲಾರ್ ಮೇಕಿಂಗ್​ನಲ್ಲಿ ಬಿಗ್​ ಟ್ವಿಸ್ಟ್​; ಎರಡನೇ ಪಾರ್ಟ್​ ಬಗ್ಗೆ ಕೇಳಿ ಬರುತ್ತಿದೆ ಗುಸುಗುಸು

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್