AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಚಿತ್ರಕ್ಕೆ 1000 ಕೋಟಿ ರೂಪಾಯಿ ಬಜೆಟ್?

ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ. ಅವರು ನಿರ್ಮಾಪಕ ದಿಲ್ ರಾಜು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದನ್ನು ದಿಲ್ ರಾಜು ಕೂಡ ಖಚಿತಪಡಿಸಿದ್ದಾರೆ.

Prashanth Neel: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಚಿತ್ರಕ್ಕೆ 1000 ಕೋಟಿ ರೂಪಾಯಿ ಬಜೆಟ್?
ಪ್ರಶಾಂತ್ ನೀಲ್
ರಾಜೇಶ್ ದುಗ್ಗುಮನೆ
|

Updated on: Apr 12, 2023 | 7:15 AM

Share

ಮುಖ್ಯಾಂಶಗಳು

  • ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಪ್ರಶಾಂತ್ ನೀಲ್
  • ಮತ್ತೊಮ್ಮೆ ಪ್ರಭಾಸ್ ಜೊತೆ ಕೆಲಸ ಮಾಡಲಿದ್ದಾರೆ ಪ್ರಶಾಂತ್
  • 1000 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತೆ ಸಿನಿಮಾ

ಪ್ರಶಾಂತ್ ನೀಲ್ (Prashanth Neel) ಅವರು ತಮ್ಮ ಕಸುಬುದಾರಿಕೆ ಏನು ಎಂಬುದನ್ನು ಜಗತ್ತಿಗೆ ತೋರಿಸಿದ್ದಾರೆ. ಅವರು ತೆರೆಗೆ ತಂದ ‘ಕೆಜಿಎಫ್ 2’ ಸಿನಿಮಾ (KGF 2 Movie) ಸೂಪರ್ ಹಿಟ್ ಆಯಿತು. ಈ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಕೇವಲ ನೂರಾರು ಕೋಟಿರೂಪಾಯಿ ಕಲೆಕ್ಷನ್ ಮಾಡುತ್ತಿದ್ದ ಕನ್ನಡ ಸಿನಿಮಾ ಮೊದಲ ಬಾರಿಗೆ 1200+ ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಕಾರಣಕ್ಕೆ ಪ್ರಶಾಂತ್ ನೀಲ್ ಕಾಲ್​ಶೀಟ್ ಪಡೆಯಲು ಅನೇಕ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ, ಅಷ್ಟು ಸುಲಭದಲ್ಲಿ ಅವರು ಸಿಗುವವರಲ್ಲ. ಈಗ ಪ್ರಶಾಂತ್ ನೀಲ್ 1000 ಕೋಟಿ ರೂಪಾಯಿ ಬಜೆಟ್​ನ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾತು ಹರಿದಾಡಿದೆ.

ಪ್ರಶಾಂತ್ ನೀಲ್ ಸದ್ಯ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಒಂದಷ್ಟು ಪೋಸ್ಟರ್ ಹಾಗೂ ರಿಲೀಸ್ ಡೇಟ್ ಘೋಷಣೆ ಆಗಿದ್ದು ಬಿಟ್ಟರೆ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಹೀಗಿರುವಾಗಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ. ಅವರು ನಿರ್ಮಾಪಕ ದಿಲ್ ರಾಜು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದನ್ನು ದಿಲ್ ರಾಜು ಕೂಡ ಖಚಿತಪಡಿಸಿದ್ದಾರೆ.

ಪಿಂಕ್​ವಿಲ್ಲಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ದಿಲ್ ರಾಜು, ‘ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಇದೊಂದು ಪೌರಾಣಿಕ ಸಿನಿಮಾ. ತೆಲುಗು ಇಂಡಸ್ಟ್ರಿಯಲ್ಲಿ ಈವರೆಗೆ  ಮಾಡದೇ ಇರುವಷ್ಟು ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧಗೊಳ್ಳಲಿದೆ’ ಎಂದಿದ್ದಾರೆ. ಈಗಾಗಲೇ ಪ್ರಭಾಸ್ ನಟನೆಯ ‘ಆದಿಪುರುಷ್​’ ಚಿತ್ರ 550 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ಆ ಬಜೆಟ್​ನೂ ಮೀರಿದ್ದು ಎಂದರೆ 1000 ಕೋಟಿ ರೂಪಾಯಿ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು, ಪವನ್ ಕಲ್ಯಾಣ್ ಇಂದಾಗಿ ಒಂದೇ ವರ್ಷದಲ್ಲಿ 25 ಕೋಟಿ ನಷ್ಟವಾಗಿತ್ತು: ನಿರ್ಮಾಪಕ ದಿಲ್ ರಾಜು

ಈ ಚಿತ್ರಕ್ಕೆ ಈಗಾಗಲೇ ಸ್ಕ್ರಿಪ್ಟ್ ಫೈನಲ್ ಆಗಿದೆ ಎನ್ನಲಾಗುತ್ತಿದೆ. ‘ಸಲಾರ್ ಬಳಿಕ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್​ಟಿಆರ್ ಜೊತೆ ಸಿನಿಮಾ ಮಾಡಲಿದ್ದಾರೆ. ಈ ಚಿತ್ರದ ಬಳಿಕ ಪ್ರಶಾಂತ್ ನೀಲ್ ಈ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಸದ್ಯ ಇದೆಲ್ಲವೂ ಪ್ರಾಥಮಿಕ ಹಂತದಲ್ಲಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಯಶ್ ಜೊತೆ ಸಿನಿಮಾ ಮಾಡಲಿದ್ದಾರೆ ತೆಲುಗಿನ ಖ್ಯಾತ ನಿರ್ಮಾಪಕ​; ವಿಷಯ ಖಚಿತಪಡಿಸಿದ ದಿಲ್ ರಾಜು

ಅಂದಹಾಗೆ ‘ಸಲಾರ್’ ಸಿನಿಮಾ ಸೆಪ್ಟೆಂಬರ್​ನಲ್ಲಿ ತೆರೆಗೆ ಬರಲಿದೆ. ಜೂನಿಯರ್ ಎನ್​ಟಿಆರ್ ಅವರು ತಮ್ಮ 30ನೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಮುಗಿಯೋಕೆ ಇನ್ನೂ ಒಂದು ವರ್ಷ ಬೇಕಾಗಬಹುದು. ಆ ಬಳಿಕ ಅವರು ಪ್ರಶಾಂತ್ ನೀಲ್ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. ಹೀಗಾಗಿ ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಮತ್ತೆ ಕೈ ಜೋಡಿಸೋದು ವಿಳಂಬ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್