AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

Jr NTR: ಪ್ರಶಾಂತ್​ ನೀಲ್​ ಹುಟ್ಟುಹಬ್ಬದ ಪ್ರಯುಕ್ತ ಟ್ವೀಟ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ತಮ್ಮ ಎಕ್ಸೈಟ್​ಮೆಂಟ್​ ಹಂಚಿಕೊಂಡಿದ್ದಾರೆ. ಈ ಘಟಾನುಘಟಿಗಳಿಬ್ಬರ ಕಾಂಬಿನೇಷನ್​ನ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ.

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ
ಪ್ರಶಾಂತ್​ ನೀಲ್​, ಜ್ಯೂ. ಎನ್​ಟಿಆರ್​
ಮದನ್​ ಕುಮಾರ್​
|

Updated on: Jun 04, 2021 | 12:30 PM

Share

ಕನ್ನಡ ಚಿತ್ರರಂಗಕ್ಕೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹೊಸ ಮೆರುಗು ತಂದುಕೊಟ್ಟ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಇಂದು (ಜೂ.4) ಜನ್ಮದಿನದ ಸಂಭ್ರಮ. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಪರಭಾಷೆ ಮಂದಿ ಕೂಡ ಅವರ ಜೊತೆ ಕೆಲಸ ಮಾಡಲು ಕಾದು ಕುಳಿತಿದ್ದಾರೆ. ಸದ್ಯ ಲಾಕ್​ಡೌನ್​ ಇರುವುದರಿಂದ ಪ್ರಶಾಂತ್ ನೀಲ್​ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಎಲ್ಲರೂ ಅವರಿಗೆ ಶುಭ ಕೂರುತ್ತಿದ್ದಾರೆ. ಟಾಲಿವುಡ್​ನ ಸ್ಟಾರ್​ ಕಲಾವಿದ ಜ್ಯೂ. ಎನ್​ಟಿಆರ್​ ಕೂಡ ಪ್ರಶಾಂತ್​ ನೀಲ್​ಗೆ ವಿಶ್​ ಮಾಡಿದ್ದಾರೆ.

‘ಕೆಜಿಎಫ್​’ ಸೂಪರ್​ ಹಿಟ್​ ಆದ ಬಳಿಕ ಟಾಲಿವುಡ್​ನಿಂದ ಪ್ರಶಾಂತ್​ ನೀಲ್​ಗೆ ಒಳ್ಳೊಳ್ಳೆಯ ಆಫರ್​ಗಳು ಬರಲು ಆರಂಭಿಸಿದವು. ಈಗಾಗಲೇ ಅವರು ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್​ ಜೊತೆ ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ. ಪ್ರಶಾಂತ್​ ನೀಲ್​ ಮತ್ತು ಜ್ಯೂ. ಎನ್​ಟಿಆರ್​ ಕಾಂಬಿನೇಷನ್​ನಲ್ಲಿ ಒಂದು ಸಿನಿಮಾ ಸೆಟ್ಟೇರಬೇಕಿದೆ. ಮೈತ್ರಿ ಮೂವೀ ಮೇಕರ್ಸ್​​ ಸಂಸ್ಥೆಯಿಂದ ಆ ಚಿತ್ರ ನಿರ್ಮಾಣ ಆಗಲಿದೆ. ಪ್ರಶಾಂತ್ ನೀಲ್​ ಬಗ್ಗೆ ಅಭಿಮಾನ ಹೊಂದಿರುವ ಜ್ಯೂ. ಎನ್​ಟಿಆರ್​ ಅವರು ಆದಷ್ಟು ಬೇಗ ಸಿನಿಮಾ ಶುರು ಮಾಡಲು ಕಾದಿದ್ದಾರೆ.

ಪ್ರಶಾಂತ್​ ನೀಲ್​ ಜನ್ಮದಿನ ಪ್ರಯುಕ್ತ ಟ್ವೀಟ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ತಮ್ಮ ಎಕ್ಸೈಟ್​ಮೆಂಟ್​ ಹಂಚಿಕೊಂಡಿದ್ದಾರೆ. ‘ಜನ್ಮದಿನದ ಶುಭಾಶಯಗಳು ಸಹೋದರನೇ. ಎಂದಿನಂತೆ ಅದ್ಭುತವಾಗಿರಿ. ನಿಮ್ಮ ಸೈನ್ಯವನ್ನು ಸೇರಿಕೊಳ್ಳಲು ಕಾತರದಿಂದ ಕಾಯುತ್ತಿದ್ದೇನೆ. ದೇವರು ಒಳ್ಳೆಯದು ಮಾಡಲಿ’ ಎಂದು ಹಾರೈಸಿದ್ದಾರೆ. ಈ ಘಟಾನುಘಟಿಗಳಿಬ್ಬರ ಕಾಂಬಿನೇಷನ್​ನ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಯಾವಾಗ ಈ ಸಿನಿಮಾ ಸೆಟ್ಟೇರಲಿದೆಯೋ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಪ್ರಶಾಂತ್​ ನೀಲ್​ ಸಿನಿಮಾಗಳು ಎಂದರೆ ಸಿಕ್ಕಾಪಟ್ಟೆ ಅದ್ದೂರಿಯಾಗಿ ಮೂಡಿಬರುತ್ತವೆ. ಜ್ಯೂ. ಎನ್​ಟಿಆರ್​ ಜೊತೆ ಅವರು ಮಾಡಲಿರುವ ಚಿತ್ರಕ್ಕೆ ಟಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್​ ಬಂಡವಾಳ ಹೂಡಲಿದೆ. ಹಾಗಾಗಿ ಈ ಸಿನಿಮಾ ಕೂಡ ಅದ್ದೂರಿ ಬಜೆಟ್​ನಲ್ಲಿ ತಯಾರಾಗಲಿರುವುದು ಗ್ಯಾರಂಟಿ. ಸದ್ಯ ರಾಕಿಂಗ್​ ಸ್ಟಾರ್​ ಯಶ್​ ಜೊತೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಪ್ರಶಾಂತ್​ ನೀಲ್​ ಬ್ಯುಸಿ ಆಗಿದ್ದಾರೆ. ‘ಸಲಾರ್​’ ಸಿನಿಮಾದ ಕಡೆಗೂ ಅವರು ಗಮನ ನೀಡುತ್ತಿದ್ದಾರೆ.

ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಭಿಮಾನಿಗಳು, ಸ್ನೇಹಿತರು ಮತ್ತು ನಿರ್ಮಾಣ ಸಂಸ್ಥೆಗಳಿಂದಲೂ ಪ್ರಶಾಂತ್​ ನೀಲ್​ಗೆ ಜನ್ಮದಿನದ ಶುಭಾಶಯಗಳು ಹರಿದುಬರುತ್ತಿವೆ. ‘ಕೆಜಿಎಫ್​’ ಸಿನಿಮಾ ನಿರ್ಮಿಸಿರುವ ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್​ ಹೌಸ ಹೊಂಬಾಳೆ ಫಿಲ್ಮ್ಸ್​ ಕೂಡ ಅವರಿಗೆ ವಿಶ್​ ಮಾಡಿದೆ.

ಇದನ್ನೂ ಓದಿ:

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ