AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ

Jr NTR: ಪ್ರಶಾಂತ್​ ನೀಲ್​ ಹುಟ್ಟುಹಬ್ಬದ ಪ್ರಯುಕ್ತ ಟ್ವೀಟ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ತಮ್ಮ ಎಕ್ಸೈಟ್​ಮೆಂಟ್​ ಹಂಚಿಕೊಂಡಿದ್ದಾರೆ. ಈ ಘಟಾನುಘಟಿಗಳಿಬ್ಬರ ಕಾಂಬಿನೇಷನ್​ನ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ.

ಪ್ರಶಾಂತ್​ ನೀಲ್​ ಜನ್ಮದಿನ; ಪ್ರೀತಿಯಿಂದ ಶುಭಕೋರಿದ ಜ್ಯೂ. ಎನ್​ಟಿಆರ್​ ಕಾಯುತ್ತಿರುವುದು ಆ ಒಂದು ಕ್ಷಣಕ್ಕಾಗಿ
ಪ್ರಶಾಂತ್​ ನೀಲ್​, ಜ್ಯೂ. ಎನ್​ಟಿಆರ್​
ಮದನ್​ ಕುಮಾರ್​
|

Updated on: Jun 04, 2021 | 12:30 PM

Share

ಕನ್ನಡ ಚಿತ್ರರಂಗಕ್ಕೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹೊಸ ಮೆರುಗು ತಂದುಕೊಟ್ಟ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಇಂದು (ಜೂ.4) ಜನ್ಮದಿನದ ಸಂಭ್ರಮ. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಪರಭಾಷೆ ಮಂದಿ ಕೂಡ ಅವರ ಜೊತೆ ಕೆಲಸ ಮಾಡಲು ಕಾದು ಕುಳಿತಿದ್ದಾರೆ. ಸದ್ಯ ಲಾಕ್​ಡೌನ್​ ಇರುವುದರಿಂದ ಪ್ರಶಾಂತ್ ನೀಲ್​ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಎಲ್ಲರೂ ಅವರಿಗೆ ಶುಭ ಕೂರುತ್ತಿದ್ದಾರೆ. ಟಾಲಿವುಡ್​ನ ಸ್ಟಾರ್​ ಕಲಾವಿದ ಜ್ಯೂ. ಎನ್​ಟಿಆರ್​ ಕೂಡ ಪ್ರಶಾಂತ್​ ನೀಲ್​ಗೆ ವಿಶ್​ ಮಾಡಿದ್ದಾರೆ.

‘ಕೆಜಿಎಫ್​’ ಸೂಪರ್​ ಹಿಟ್​ ಆದ ಬಳಿಕ ಟಾಲಿವುಡ್​ನಿಂದ ಪ್ರಶಾಂತ್​ ನೀಲ್​ಗೆ ಒಳ್ಳೊಳ್ಳೆಯ ಆಫರ್​ಗಳು ಬರಲು ಆರಂಭಿಸಿದವು. ಈಗಾಗಲೇ ಅವರು ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್​ ಜೊತೆ ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ. ಪ್ರಶಾಂತ್​ ನೀಲ್​ ಮತ್ತು ಜ್ಯೂ. ಎನ್​ಟಿಆರ್​ ಕಾಂಬಿನೇಷನ್​ನಲ್ಲಿ ಒಂದು ಸಿನಿಮಾ ಸೆಟ್ಟೇರಬೇಕಿದೆ. ಮೈತ್ರಿ ಮೂವೀ ಮೇಕರ್ಸ್​​ ಸಂಸ್ಥೆಯಿಂದ ಆ ಚಿತ್ರ ನಿರ್ಮಾಣ ಆಗಲಿದೆ. ಪ್ರಶಾಂತ್ ನೀಲ್​ ಬಗ್ಗೆ ಅಭಿಮಾನ ಹೊಂದಿರುವ ಜ್ಯೂ. ಎನ್​ಟಿಆರ್​ ಅವರು ಆದಷ್ಟು ಬೇಗ ಸಿನಿಮಾ ಶುರು ಮಾಡಲು ಕಾದಿದ್ದಾರೆ.

ಪ್ರಶಾಂತ್​ ನೀಲ್​ ಜನ್ಮದಿನ ಪ್ರಯುಕ್ತ ಟ್ವೀಟ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ತಮ್ಮ ಎಕ್ಸೈಟ್​ಮೆಂಟ್​ ಹಂಚಿಕೊಂಡಿದ್ದಾರೆ. ‘ಜನ್ಮದಿನದ ಶುಭಾಶಯಗಳು ಸಹೋದರನೇ. ಎಂದಿನಂತೆ ಅದ್ಭುತವಾಗಿರಿ. ನಿಮ್ಮ ಸೈನ್ಯವನ್ನು ಸೇರಿಕೊಳ್ಳಲು ಕಾತರದಿಂದ ಕಾಯುತ್ತಿದ್ದೇನೆ. ದೇವರು ಒಳ್ಳೆಯದು ಮಾಡಲಿ’ ಎಂದು ಹಾರೈಸಿದ್ದಾರೆ. ಈ ಘಟಾನುಘಟಿಗಳಿಬ್ಬರ ಕಾಂಬಿನೇಷನ್​ನ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಯಾವಾಗ ಈ ಸಿನಿಮಾ ಸೆಟ್ಟೇರಲಿದೆಯೋ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಪ್ರಶಾಂತ್​ ನೀಲ್​ ಸಿನಿಮಾಗಳು ಎಂದರೆ ಸಿಕ್ಕಾಪಟ್ಟೆ ಅದ್ದೂರಿಯಾಗಿ ಮೂಡಿಬರುತ್ತವೆ. ಜ್ಯೂ. ಎನ್​ಟಿಆರ್​ ಜೊತೆ ಅವರು ಮಾಡಲಿರುವ ಚಿತ್ರಕ್ಕೆ ಟಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್​ ಬಂಡವಾಳ ಹೂಡಲಿದೆ. ಹಾಗಾಗಿ ಈ ಸಿನಿಮಾ ಕೂಡ ಅದ್ದೂರಿ ಬಜೆಟ್​ನಲ್ಲಿ ತಯಾರಾಗಲಿರುವುದು ಗ್ಯಾರಂಟಿ. ಸದ್ಯ ರಾಕಿಂಗ್​ ಸ್ಟಾರ್​ ಯಶ್​ ಜೊತೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಪ್ರಶಾಂತ್​ ನೀಲ್​ ಬ್ಯುಸಿ ಆಗಿದ್ದಾರೆ. ‘ಸಲಾರ್​’ ಸಿನಿಮಾದ ಕಡೆಗೂ ಅವರು ಗಮನ ನೀಡುತ್ತಿದ್ದಾರೆ.

ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಭಿಮಾನಿಗಳು, ಸ್ನೇಹಿತರು ಮತ್ತು ನಿರ್ಮಾಣ ಸಂಸ್ಥೆಗಳಿಂದಲೂ ಪ್ರಶಾಂತ್​ ನೀಲ್​ಗೆ ಜನ್ಮದಿನದ ಶುಭಾಶಯಗಳು ಹರಿದುಬರುತ್ತಿವೆ. ‘ಕೆಜಿಎಫ್​’ ಸಿನಿಮಾ ನಿರ್ಮಿಸಿರುವ ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್​ ಹೌಸ ಹೊಂಬಾಳೆ ಫಿಲ್ಮ್ಸ್​ ಕೂಡ ಅವರಿಗೆ ವಿಶ್​ ಮಾಡಿದೆ.

ಇದನ್ನೂ ಓದಿ:

ಬಯಲಾಯ್ತು ಪ್ರಭಾಸ್​-ಪ್ರಶಾಂತ್​ ನೀಲ್​ ‘ಸಲಾರ್’ ಚಿತ್ರದ ಇನ್ನೊಂದು ಸೀಕ್ರೆಟ್​

ಸೆಟ್ಟೇರುವ ಮೊದಲೇ ಪ್ರಶಾಂತ್​ ನೀಲ್- ಜ್ಯೂ. ಎನ್​​ಟಿಆರ್​ ಸಿನಿಮಾದ ಕಥೆ ಲೀಕ್?

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ