AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಸಲಾರ್’ ಚಿತ್ರದ ಸೆಟ್​​ಗೆ ಹೊಸ ನಿಯಮ ಜಾರಿಗೆ ತಂದ ಪ್ರಶಾಂತ್ ನೀಲ್​; ಚಿಂತೆಗೊಳಗಾಯ್ತು ತಾಂತ್ರಿಕ ವರ್ಗ

ಈ ಮೊದಲು ರಾಜಮೌಳಿ ಕೂಡ ಇದೇ ತಂತ್ರ ಉಪಯೋಗಿಸಿದ್ದರು. ‘ಆರ್​ಆರ್​ಆರ್​’ ಸಿನಿಮಾದ ಸೆಟ್​ನ ಫೋಟೋಗಳು ಈ ಮೊದಲು ಲೀಕ್ ಆಗಿದ್ದವು. ಅದನ್ನು ತಡೆಯಲು ಮೊಬೈಲ್ ಬಳಕೆ ನಿರ್ಬಂಧ ನಿಯಮ ಜಾರಿಗೆ ತರಲಾಗಿತ್ತು.

 ‘ಸಲಾರ್’ ಚಿತ್ರದ ಸೆಟ್​​ಗೆ ಹೊಸ ನಿಯಮ ಜಾರಿಗೆ ತಂದ ಪ್ರಶಾಂತ್ ನೀಲ್​; ಚಿಂತೆಗೊಳಗಾಯ್ತು ತಾಂತ್ರಿಕ ವರ್ಗ
ಪ್ರಭಾಸ್​-ಪ್ರಶಾಂತ್ ನೀಲ್
TV9 Web
| Edited By: |

Updated on:Sep 26, 2022 | 3:00 PM

Share

‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ (KGF Chapter 2) ತೆರೆಕಂಡ ನಂತರದಲ್ಲಿ ಪ್ರಶಾಂತ್ ನೀಲ್ (Prashanth Neel) ಅವರ ಬೇಡಿಕೆ ಹೆಚ್ಚಿದೆ. ಅವರ ಮುಂದಿನ ಸಿನಿಮಾ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರು ಸದ್ಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದು, ಈ ಚಿತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಮಧ್ಯೆ ಸಿನಿಮಾಗೆ ಸಾಕಷ್ಟು ಅಡೆತಡೆಗಳು ಕೂಡ ಎದುರಾಗುತ್ತಿವೆ. ಹಲವು ಕಾರಣಗಳಿಂದ ಸಿನಿಮಾದ ಕೆಲಸ ಮುಂದಕ್ಕೆ ಹೋಗಿದೆ. ಮುಂದಿನ ವರ್ಷ ಈ ಚಿತ್ರ ರಿಲೀಸ್ ಆಗಲಿದೆ. ಈ ಮಧ್ಯೆ ಪ್ರಶಾಂತ್ ನೀಲ್ ಅವರು ಹೊಸ ನಿಯಮ ಜಾರಿಗೆ ತಂದಿದ್ದಾರೆ. ಇದರಿಂದ ತಾಂತ್ರಿಕ ವರ್ಗಕ್ಕೆ ಚಿಂತೆ ಶುರುವಾಗಿದೆ.

‘ಸಲಾರ್’ ಸಿನಿಮಾದ ಶೂಟಿಂಗ್ ಆರಂಭಗೊಂಡು ಹಲವು ಸಮಯ ಕಳೆದಿದೆ. ಈ ಚಿತ್ರದ ಪೋಸ್ಟರ್ ಹೊರತುಪಡಿಸಿ ಮತ್ತಾವುದೇ ವಿಚಾರ ರಿವೀಲ್ ಆಗಿಲ್ಲ. ಈ ಮಧ್ಯೆ ಅನೇಕ ಬಾರಿ ಸಿನಿಮಾದ ಸೆಟ್​​ನಿಂದ ಫೋಟೋಗಳು ಲೀಕ್ ಆಗಿವೆ. ಸಿನಿಮಾದ ತಾಂತ್ರಿಕ ವರ್ಗದವರೇ ಈ ಸೆಟ್​ನ ಫೋಟೋಗಳನ್ನು ಲೀಕ್ ಮಾಡಿದ್ದಿದೆ. ಇದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿದೆ. ಎಷ್ಟೇ ಪ್ರಯತ್ನ ಮಾಡಿದರೂ ಸಿನಿಮಾ ಸೆಟ್​​ನ ಫೋಟೋಗಳು ಆನ್​ಲೈನ್​ನಲ್ಲಿ ವೈರಲ್ ಆಗುತ್ತಿರುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಪ್ರಶಾಂತ್ ನೀಲ್ ಕಠಿಣ ನಿಯಮ ತರಲು ನಿರ್ಧರಿಸಿದ್ದಾರೆ.

ಸಿನಿಮಾ ತಂಡದವರು ಇನ್ನುಮುಂದೆ ಶೂಟಿಂಗ್​ಗೆ ಬರುವುದಕ್ಕೂ ಮೊದಲು ತಮ್ಮ ಮೊಬೈಲ್​​ಗಳನ್ನು ಕ್ಯಾರವಾನ್​, ರೂಮ್ ಅಥವಾ ನಿಗದಿಪಡಿಸಿದ ಲಾಕರ್​ನಲ್ಲಿ ಇಟ್ಟು ಬರಬೇಕು. ಇದರಿಂದ ಸೆಟ್​ನಲ್ಲಿ ಮೊಬೈಲ್ ಬಳಕೆ ನಿಲ್ಲಲಿದೆ. ಈ ಬಗ್ಗೆ ಸೆಟ್​ನಲ್ಲಿ ಸಿಬ್ಬಂದಿಗೆ ಸೂಚನೆ ಹೋಗಿದೆ ಎನ್ನಲಾಗಿದೆ.  ಇದರಿಂದ ತಾಂತ್ರಿಕ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಎಮರ್ಜೆನ್ಸಿ ಕರೆ ಮಾಡುವುದಿದ್ದರೂ ನಿರ್ದೇಶಕರ ಒಪ್ಪಿಗೆ ಪಡೆದುಕೊಂಡೇ ಮೊಬೈಲ್ ಬಳಕೆ ಮಾಡಬೇಕಿದೆ.

ಈ ಮೊದಲು ರಾಜಮೌಳಿ ಕೂಡ ಇದೇ ತಂತ್ರ ಉಪಯೋಗಿಸಿದ್ದರು. ‘ಆರ್​ಆರ್​ಆರ್​’ ಸಿನಿಮಾದ ಸೆಟ್​ನ ಫೋಟೋಗಳು ಈ ಮೊದಲು ಲೀಕ್ ಆಗಿದ್ದವು. ಅದನ್ನು ತಡೆಯಲು ಮೊಬೈಲ್ ಬಳಕೆ ನಿರ್ಬಂಧ ನಿಯಮ ಜಾರಿಗೆ ತರಲಾಗಿತ್ತು.

ಇದನ್ನೂ ಓದಿ: Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ನಟಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಹೊಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಸಿದ್ಧಗೊಳ್ಳುತ್ತಿದೆ. ಈ ಚಿತ್ರದಲ್ಲಿ ಮಲಯಾಳಂನ ಪೃಥ್ವಿರಾಜ್​ ಕೂಡ ನಟಿಸುತ್ತಿದ್ದಾರೆ.

Published On - 3:00 pm, Mon, 26 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ