AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್​ ಸಿನಿಮಾಕ್ಕೆ ಕುಮಟಾನಲ್ಲಿ ಬೃಹತ್ ಸೆಟ್, ಏನೇನಿದೆ?

Prashanth Neel: ಜೂ ಎನ್​ಟಿಆರ್ ‘ವಾರ್ 2’ ಹಿಂದಿ ಸಿನಿಮಾ ಮುಗಿಸಿ ಇತ್ತೀಚೆಗಷ್ಟೆ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ಸಿನಿಮಾ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕದ ಕುಮುಟಾ ಬಳಿ ಸಿನಿಮಾಕ್ಕೆ ಸೆಟ್ ನಿರ್ಮಿಸಲಾಗಿದ್ದು, ಸೆಟ್​ ಹೇಗಿದೆ? ಸೆಟ್​ನಲ್ಲಿ ಏನೇನಿದೆ? ಚಿತ್ರೀಕರಣ ಹೇಗೆ ಸಾಗುತ್ತಿದೆ ಮಾಹಿತಿ ಇಲ್ಲಿದೆ...

ಜೂ ಎನ್​ಟಿಆರ್​ ಸಿನಿಮಾಕ್ಕೆ ಕುಮಟಾನಲ್ಲಿ ಬೃಹತ್ ಸೆಟ್, ಏನೇನಿದೆ?
Jr Ntr Neel
ಮಂಜುನಾಥ ಸಿ.
|

Updated on: Apr 26, 2025 | 8:54 AM

Share

ತೆಲುಗಿನ ಸ್ಟಾರ್ ಜೂ ಎನ್​ಟಿಆರ್ (Jr NTR) ಹಿಂದಿಯ ‘ವಾರ್ 2’ (War 2) ಸಿನಿಮಾ ಚಿತ್ರೀಕರಣ ಮುಗಿಸಿ ಬಂದಿದ್ದಾರೆ. ಇದೀಗ ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಈ ಮೊದಲು ‘ಡ್ರ್ಯಾಗನ್’ ಎಂದು ಹೆಸರಿಡಲಾಗಿತ್ತು, ಆದರೆ ಸಿನಿಮಾದ ಹೆಸರನ್ನು ಬದಲಾಯಿಸಲಾಗುವುದು ಎನ್ನಲಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣಕ್ಕಾಗಿ ಕರ್ನಾಟಕದ ಕುಮಟಾ ಬಳಿ ಬೃಹತ್ ಸೆಟ್ ಒಂದನ್ನು ನಿರ್ಮಿಸಲಾಗಿದೆ.

ಕುಮಟಾದ ಧಾರೇಶ್ವರದಲ್ಲಿ ಭಾರಿ ಬೃಹತ್ ಸೆಟ್ ಅನ್ನು ಜೂ ಎನ್​ಟಿಆರ್ ಸಿನಿಮಾಕ್ಕಾಗಿ ನಿರ್ಮಾಣ ಮಾಡಲಾಗಿದೆ. ಜೂ ಎನ್​ಟಿಆರ್ ಹಲವು ದಿನಗಳ ಕಾಲ ಇಲ್ಲಿಯೇ ಇದ್ದು ಚಿತ್ರೀಕರಣ ಮಾಡಲಿದ್ದಾರೆ. ಸಿನಿಮಾ ಸೆಟ್​ನಲ್ಲಿ ಬೃಹತ್ ಹೆಲಿಕಾಪ್ಟರ್, ಮನೆಗಳು, ರೈಲ್ವೆ ಟ್ರ್ಯಾಕ್, ರೈಲ್ವೆ ಭೋಗಿಗಳು, ಭಾರಿ ಬೃಹತ್ ಬಂದೂಕುಗಳು, ಟ್ಯಾಂಕರ್​ಗಳನ್ನು ತಂದು ನಿಲ್ಲಿಸಲಾಗಿದೆ. ಧಾರೇಶ್ವರ ಸೆಟ್ ನೋಡಿದರೆ ಸಿನಿಮಾದ ಬೃಹತ್ತತೆ ಅರ್ಥವಾಗುವಂತಿದೆ.

ರಾಮನಗಿಂಡಿ ಕಡಲ ಕಿನಾರೆಯಲ್ಲಿ ಈ ಬೃಹತ್ ಸೆಟ್ ನಿರ್ಮಾಣ ಮಾಡಲಾಗಿದ್ದು ಪ್ರಶಾಂತ್ ನೀಲ್ ಅವರ ‘ಸಲಾರ್’, ‘ಕೆಜಿಎಫ್​’ ಸಿನಿಮಾಗಳಿಗೆ ಸೆಟ್ ನಿರ್ಮಿಸಿದ್ದ ತಂಡವೇ ಜೂ ಎನ್​ಟಿಆರ್ ಸಿನಿಮಾಕ್ಕೂ ಸೆಟ್ ನಿರ್ಮಾಣ ಮಾಡಿದೆ. ಪ್ರತಿದಿನ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಸಿನಿಮಾ ಚಿತ್ರೀಕರಣ ನಿರಾತಂಕವಾಗಿ ಸಾಗುತ್ತಿದೆ. ಸಿನಿಮಾ ಸೆಟ್​ಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿದೆ.

ಇದನ್ನೂ ಓದಿ:ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್

ಸಿನಿಮಾದಲ್ಲಿ ಜೂ ಎನ್​ಟಿಆರ್ ಎದುರು ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಶಾಂತ್ ನೀಲ್ ಅವರ ಈ ಹಿಂದಿನ ಸಿನಿಮಾಗಳಿಗೆ ಸಂಗೀತ ನೀಡಿದ್ದ ರವಿ ಬಸ್ರೂರು ಅವರೇ ಈ ಸಿನಿಮಾಕ್ಕೂ ಸಂಗೀತ ನೀಡಲಿದ್ದಾರೆ. ಭುವನ್ ಗೌಡ ಅವರು ಕ್ಯಾಮೆರಾ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಶಾಂತ್ ನೀಲ್ ಬಹುತೇಕ ತಮ್ಮ ಹಳೆಯ ತಂಡವನ್ನೇ ಈ ಸಿನಿಮಾಕ್ಕೂ ಬಳಸಿಕೊಂಡಿದ್ದಾರೆ. ಸುಮಾರು ಎರಡು ತಿಂಗಳ ಹಿಂದೆಯೇ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಜೂ ಎನ್​ಟಿಆರ್, ಒಂದು ವಾರದ ಹಿಂದಷ್ಟೆ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಭರ್ಜರಿ ಆಕ್ಷನ್ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ಎರಡು ಶೇಡ್​ನಲ್ಲಿ ಜೂ ಎನ್​ಟಿಆರ್ ಕಾಣಿಸಿಕೊಳ್ಳಲಿದ್ದಾರೆ.

ಪ್ರಶಾಂತ್ ನೀಲ್-ಜೂ ಎನ್​ಟಿಆರ್ ಸಿನಿಮಾದ ಚಿತ್ರೀಕರಣ ಈ ವರ್ಷಾಂತ್ಯಕ್ಕೆ ಮುಗಿಯಲಿದೆ. ಆ ಬಳಿಕ ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಮುಂದಿನ ವರ್ಷ ಏಪ್ರಿಲ್ ತಿಂಗಳ ವೇಳೆಗೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಬಳಿಕ ‘ದೇವರ 2’ ಸಿನಿಮಾ ಪ್ರಾರಂಭ ಮಾಡಲಿದ್ದಾರೆ ಜೂ ಎನ್​ಟಿಆರ್. ಇನ್ನು ಪ್ರಶಾಂತ್ ನೀಲ್, ಈ ಸಿನಿಮಾದ ಬಳಿಕ ಪ್ರಭಾಸ್ ಜೊತೆಗೆ ‘ಸಲಾರ್ 2’ ಪ್ರಾರಂಭ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು