AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್‌ಗಿಂತ ಭಿನ್ನವಾದ, ಹೊಸ ರೀತಿಯ ಸಂಗೀತವನ್ನು ಈ ಚಿತ್ರ ಹೊಂದಿರಲಿದೆ ಎಂದು ರವಿ ಬಸ್ರೂರು ತಿಳಿಸಿದ್ದಾರೆ.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ
ರವಿ, ಎನ್​ಟಿಆರ್​,ಪ್ರಶಾಂತ್
ರಾಜೇಶ್ ದುಗ್ಗುಮನೆ
|

Updated on:Nov 18, 2025 | 3:08 PM

Share

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ (JR NTR) ಸಿನಿಮಾ ಬಗ್ಗೆ ಇತ್ತೀಚೆಗೆ ಸುದ್ದಿ ಒಂದು ಹರಿದಾಡಿತ್ತು. ಈ ಸಿನಿಮಾ ದೃಶ್ಯಗಳ ಬಗ್ಗೆ ಜೂನಿಯರ್​ ಎನ್​ಟಿಆರ್​ಗೆ ಖುಷಿ ಇಲ್ಲ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಈ ಕಾರಣದಿಂದಲೇ ಸಿನಿಮಾ ನಿಂತಿದೆ ಎಂದೂ ಹೇಳಲಾಗಿತ್ತು. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಕೊನೆಗೂ ಈ ವದಂತಿಗೆ ತೆರೆ ಬಿದ್ದಿದೆ. ಈ ಚಿತ್ರದ ಸಂಗೀತ ಸಂಯೋಜಕ, ಕನ್ನಡಿಗ ರವಿ ಬಸ್ರೂರು ಅವರು ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರವಿ ಬಸ್ರೂರು ಅವರು ಪ್ರಶಾಂತ್ ನೀಲ್ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬರುತ್ತಿದ್ದಾರೆ. ‘ಉಗ್ರಂ’ ಸಿನಿಮಾದಲ್ಲಿ ಇದೇ ಜೋಡಿ ಕೆಲಸ ಮಾಡಿತ್ತು. ‘ಕೆಜಿಎಫ್’ ಹಾಡು ಹಾಗೂ ಬಿಜಿಎಂ ಸಿನಿಮಾನ ಬೇರೆ ಹಂತಕ್ಕೆ ತೆಗೆದುಕೊಂಡು ಹೋಗಿತ್ತು. ಈ ಕಾರಣದಿಂದಲೇ ಪ್ರಶಾಂತ್ ನೀಲ್ ತಮ್ಮ ನಿರ್ದೇಶನದ ಸಿನಿಮಾಗಳ ಸಂಗೀತದ ಜವಾಬ್ದಾರಿಯನ್ನು ರವಿ ಬಸ್ರೂರು ಅವರಿಗೆ ನೀಡುತ್ತಾರೆ. ಈಗ ರವಿ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಹೇಳಿದ್ದಾರೆ.

‘ಜೂನಿಯರ್ ಎನ್​ಟಿಆರ್ ಹಾಗೂ ನೀಲ್ ಸಿನಿಮಾ ಸಂಗೀತ ಹಾಗೂ ದೃಶ್ಯದಲ್ಲಿ ಅದ್ಭುತವಾಗಿ ಮೂಡಿ ಬರಲಿದೆ. ಕೆಜಿಎಫ್ ಹಾಗೂ ಸಲಾರ್​ಗಿಂತ ಈ ಚಿತ್ರದ ಮ್ಯೂಸಿಕ್ ಭಿನ್ನವಾಗಿ ಇರಲಿದೆ. ಹೊಸ ರೀತಿಯ ವಾದ್ಯ, ಎನರ್ಜಿ ಇರಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಕ್ಕಾಪಟ್ಟೆ ಸ್ಲಿಮ್ ಆದ ಜೂನಿಯರ್ ಎನ್​ಟಿಆರ್; ಇದಕ್ಕೆ ಕಾರಣ ಪ್ರಶಾಂತ್ ನೀಲ್

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಾಧಾರಣ ಎನಿಸಿಕೊಂಡಿತು. ಆ ಬಳಿಕ ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾ ಡಿಸಾಸ್ಟರ್ ಎನಿಸಿಕೊಂಡಿತು. ಹೀಗಾಗಿ, ಜೂನಿಯರ್​ ಎನ್​ಟಿಆರ್ ಅಭಿಮಾನಿಗಳು ಈ ಚಿತ್ರದಿಂದ ಹೆಚ್ಚಿನದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಸಿನಿಮಾ ನಿಂತಿದೆ ಎಂಬ ವದಂತಿ ಕೇಳಿ ಅವರು ಆತಂಕಗೊಂಡಿದ್ದರು. ಈಗ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆಯಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:06 pm, Tue, 18 November 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ