AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್‌ಗಿಂತ ಭಿನ್ನವಾದ, ಹೊಸ ರೀತಿಯ ಸಂಗೀತವನ್ನು ಈ ಚಿತ್ರ ಹೊಂದಿರಲಿದೆ ಎಂದು ರವಿ ಬಸ್ರೂರು ತಿಳಿಸಿದ್ದಾರೆ.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ
ರವಿ, ಎನ್​ಟಿಆರ್​,ಪ್ರಶಾಂತ್
ರಾಜೇಶ್ ದುಗ್ಗುಮನೆ
|

Updated on:Nov 18, 2025 | 3:08 PM

Share

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ (JR NTR) ಸಿನಿಮಾ ಬಗ್ಗೆ ಇತ್ತೀಚೆಗೆ ಸುದ್ದಿ ಒಂದು ಹರಿದಾಡಿತ್ತು. ಈ ಸಿನಿಮಾ ದೃಶ್ಯಗಳ ಬಗ್ಗೆ ಜೂನಿಯರ್​ ಎನ್​ಟಿಆರ್​ಗೆ ಖುಷಿ ಇಲ್ಲ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಈ ಕಾರಣದಿಂದಲೇ ಸಿನಿಮಾ ನಿಂತಿದೆ ಎಂದೂ ಹೇಳಲಾಗಿತ್ತು. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಕೊನೆಗೂ ಈ ವದಂತಿಗೆ ತೆರೆ ಬಿದ್ದಿದೆ. ಈ ಚಿತ್ರದ ಸಂಗೀತ ಸಂಯೋಜಕ, ಕನ್ನಡಿಗ ರವಿ ಬಸ್ರೂರು ಅವರು ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರವಿ ಬಸ್ರೂರು ಅವರು ಪ್ರಶಾಂತ್ ನೀಲ್ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬರುತ್ತಿದ್ದಾರೆ. ‘ಉಗ್ರಂ’ ಸಿನಿಮಾದಲ್ಲಿ ಇದೇ ಜೋಡಿ ಕೆಲಸ ಮಾಡಿತ್ತು. ‘ಕೆಜಿಎಫ್’ ಹಾಡು ಹಾಗೂ ಬಿಜಿಎಂ ಸಿನಿಮಾನ ಬೇರೆ ಹಂತಕ್ಕೆ ತೆಗೆದುಕೊಂಡು ಹೋಗಿತ್ತು. ಈ ಕಾರಣದಿಂದಲೇ ಪ್ರಶಾಂತ್ ನೀಲ್ ತಮ್ಮ ನಿರ್ದೇಶನದ ಸಿನಿಮಾಗಳ ಸಂಗೀತದ ಜವಾಬ್ದಾರಿಯನ್ನು ರವಿ ಬಸ್ರೂರು ಅವರಿಗೆ ನೀಡುತ್ತಾರೆ. ಈಗ ರವಿ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಹೇಳಿದ್ದಾರೆ.

‘ಜೂನಿಯರ್ ಎನ್​ಟಿಆರ್ ಹಾಗೂ ನೀಲ್ ಸಿನಿಮಾ ಸಂಗೀತ ಹಾಗೂ ದೃಶ್ಯದಲ್ಲಿ ಅದ್ಭುತವಾಗಿ ಮೂಡಿ ಬರಲಿದೆ. ಕೆಜಿಎಫ್ ಹಾಗೂ ಸಲಾರ್​ಗಿಂತ ಈ ಚಿತ್ರದ ಮ್ಯೂಸಿಕ್ ಭಿನ್ನವಾಗಿ ಇರಲಿದೆ. ಹೊಸ ರೀತಿಯ ವಾದ್ಯ, ಎನರ್ಜಿ ಇರಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಕ್ಕಾಪಟ್ಟೆ ಸ್ಲಿಮ್ ಆದ ಜೂನಿಯರ್ ಎನ್​ಟಿಆರ್; ಇದಕ್ಕೆ ಕಾರಣ ಪ್ರಶಾಂತ್ ನೀಲ್

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಾಧಾರಣ ಎನಿಸಿಕೊಂಡಿತು. ಆ ಬಳಿಕ ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾ ಡಿಸಾಸ್ಟರ್ ಎನಿಸಿಕೊಂಡಿತು. ಹೀಗಾಗಿ, ಜೂನಿಯರ್​ ಎನ್​ಟಿಆರ್ ಅಭಿಮಾನಿಗಳು ಈ ಚಿತ್ರದಿಂದ ಹೆಚ್ಚಿನದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಸಿನಿಮಾ ನಿಂತಿದೆ ಎಂಬ ವದಂತಿ ಕೇಳಿ ಅವರು ಆತಂಕಗೊಂಡಿದ್ದರು. ಈಗ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆಯಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:06 pm, Tue, 18 November 25

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!