AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್‌ಗಿಂತ ಭಿನ್ನವಾದ, ಹೊಸ ರೀತಿಯ ಸಂಗೀತವನ್ನು ಈ ಚಿತ್ರ ಹೊಂದಿರಲಿದೆ ಎಂದು ರವಿ ಬಸ್ರೂರು ತಿಳಿಸಿದ್ದಾರೆ.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ
ರವಿ, ಎನ್​ಟಿಆರ್​,ಪ್ರಶಾಂತ್
ರಾಜೇಶ್ ದುಗ್ಗುಮನೆ
|

Updated on:Nov 18, 2025 | 3:08 PM

Share

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ (JR NTR) ಸಿನಿಮಾ ಬಗ್ಗೆ ಇತ್ತೀಚೆಗೆ ಸುದ್ದಿ ಒಂದು ಹರಿದಾಡಿತ್ತು. ಈ ಸಿನಿಮಾ ದೃಶ್ಯಗಳ ಬಗ್ಗೆ ಜೂನಿಯರ್​ ಎನ್​ಟಿಆರ್​ಗೆ ಖುಷಿ ಇಲ್ಲ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಈ ಕಾರಣದಿಂದಲೇ ಸಿನಿಮಾ ನಿಂತಿದೆ ಎಂದೂ ಹೇಳಲಾಗಿತ್ತು. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಕೊನೆಗೂ ಈ ವದಂತಿಗೆ ತೆರೆ ಬಿದ್ದಿದೆ. ಈ ಚಿತ್ರದ ಸಂಗೀತ ಸಂಯೋಜಕ, ಕನ್ನಡಿಗ ರವಿ ಬಸ್ರೂರು ಅವರು ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರವಿ ಬಸ್ರೂರು ಅವರು ಪ್ರಶಾಂತ್ ನೀಲ್ ಜೊತೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬರುತ್ತಿದ್ದಾರೆ. ‘ಉಗ್ರಂ’ ಸಿನಿಮಾದಲ್ಲಿ ಇದೇ ಜೋಡಿ ಕೆಲಸ ಮಾಡಿತ್ತು. ‘ಕೆಜಿಎಫ್’ ಹಾಡು ಹಾಗೂ ಬಿಜಿಎಂ ಸಿನಿಮಾನ ಬೇರೆ ಹಂತಕ್ಕೆ ತೆಗೆದುಕೊಂಡು ಹೋಗಿತ್ತು. ಈ ಕಾರಣದಿಂದಲೇ ಪ್ರಶಾಂತ್ ನೀಲ್ ತಮ್ಮ ನಿರ್ದೇಶನದ ಸಿನಿಮಾಗಳ ಸಂಗೀತದ ಜವಾಬ್ದಾರಿಯನ್ನು ರವಿ ಬಸ್ರೂರು ಅವರಿಗೆ ನೀಡುತ್ತಾರೆ. ಈಗ ರವಿ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಹೇಳಿದ್ದಾರೆ.

‘ಜೂನಿಯರ್ ಎನ್​ಟಿಆರ್ ಹಾಗೂ ನೀಲ್ ಸಿನಿಮಾ ಸಂಗೀತ ಹಾಗೂ ದೃಶ್ಯದಲ್ಲಿ ಅದ್ಭುತವಾಗಿ ಮೂಡಿ ಬರಲಿದೆ. ಕೆಜಿಎಫ್ ಹಾಗೂ ಸಲಾರ್​ಗಿಂತ ಈ ಚಿತ್ರದ ಮ್ಯೂಸಿಕ್ ಭಿನ್ನವಾಗಿ ಇರಲಿದೆ. ಹೊಸ ರೀತಿಯ ವಾದ್ಯ, ಎನರ್ಜಿ ಇರಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಕ್ಕಾಪಟ್ಟೆ ಸ್ಲಿಮ್ ಆದ ಜೂನಿಯರ್ ಎನ್​ಟಿಆರ್; ಇದಕ್ಕೆ ಕಾರಣ ಪ್ರಶಾಂತ್ ನೀಲ್

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಾಧಾರಣ ಎನಿಸಿಕೊಂಡಿತು. ಆ ಬಳಿಕ ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾ ಡಿಸಾಸ್ಟರ್ ಎನಿಸಿಕೊಂಡಿತು. ಹೀಗಾಗಿ, ಜೂನಿಯರ್​ ಎನ್​ಟಿಆರ್ ಅಭಿಮಾನಿಗಳು ಈ ಚಿತ್ರದಿಂದ ಹೆಚ್ಚಿನದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಸಿನಿಮಾ ನಿಂತಿದೆ ಎಂಬ ವದಂತಿ ಕೇಳಿ ಅವರು ಆತಂಕಗೊಂಡಿದ್ದರು. ಈಗ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆಯಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:06 pm, Tue, 18 November 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್