AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಮತ್ತು ರಾಮ್​ ಚರಣ್ ಜತೆ ಪ್ರಶಾಂತ್​ ನೀಲ್​​; ಆರ್​ಆರ್​ಆರ್​ ನಿರ್ಮಾಣ ಸಂಸ್ಥೆಯಿಂದ ಬಂಡವಾಳ?

ಪ್ರಶಾಂತ್​ ನೀಲ್​ ಜತೆ ಕೆಲಸ ಮಾಡಬೇಕು ಎಂದು ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕಾದು ಕೂತಿವೆ. ಸ್ಟಾರ್​ ನಟರ ಜತೆ ಸಿನಿಮಾ ಮಾಡೋಕೆ ಪ್ರಶಾಂತ್​ ನೀಲ್​ ಆಸಕ್ತಿ ತೋರಿಸುತ್ತಿದ್ದಾರೆ.

ಚಿರಂಜೀವಿ ಮತ್ತು ರಾಮ್​ ಚರಣ್ ಜತೆ ಪ್ರಶಾಂತ್​ ನೀಲ್​​; ಆರ್​ಆರ್​ಆರ್​ ನಿರ್ಮಾಣ ಸಂಸ್ಥೆಯಿಂದ ಬಂಡವಾಳ?
ರಾಮ್​ ಚರಣ್​-ಪ್ರಶಾಂತ್​ ನೀಲ್​- ಚಿರಂಜೀವಿ
TV9 Web
| Edited By: |

Updated on:Oct 15, 2021 | 5:14 PM

Share

ಪ್ರಶಾಂತ್​ ನೀಲ್ ಬೇಡಿಕೆಯ ನಿರ್ದೇಶಕ. ‘ಕೆಜಿಎಫ್​’ ತೆರೆಕಂಡ ನಂತರದಲ್ಲಿ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಸ್ಟಾರ್​ ನಟರ ಜತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಈಗ ರಾಮ್​ ಚರಣ್​ ಹಾಗೂ ಚಿರಂಜೀವಿ ಜತೆ ಕಾಣಿಸಿಕೊಂಡಿದ್ದಾರೆ ಪ್ರಶಾಂತ್ ನೀಲ್​​. ಈ ಭೇಟಿ ಹಿಂದಿನ ಉದ್ದೇಶ ಬೇರೆಯೇ ಇದೆ ಎನ್ನುತ್ತಿದ್ದಾರೆ ಫ್ಯಾನ್ಸ್​.

ಪ್ರಶಾಂತ್​ ನೀಲ್​ ಜತೆ ಕೆಲಸ ಮಾಡಬೇಕು ಎಂದು ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕಾದು ಕೂತಿವೆ. ಸ್ಟಾರ್​ ನಟರ ಜತೆ ಸಿನಿಮಾ ಮಾಡೋಕೆ ಪ್ರಶಾಂತ್​ ನೀಲ್​ ಆಸಕ್ತಿ ತೋರಿಸುತ್ತಿದ್ದಾರೆ. ಈಗ ಅವರು ಚಿರಂಜೀವಿ ಜತೆ ಕಾಣಿಸಿಕೊಂಡಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ, ಆರ್​ಆರ್​ಆರ್​ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಈ ಟ್ವೀಟ್​ನಲ್ಲಿ ಟ್ಯಾಗ್​ ಮಾಡಲಾಗಿದೆ.

‘ಲೆಜೆಂಡ್​ ನಟರನ್ನು ಭೇಟಿ ಮಾಡಿದೆ. ಆತಿಥ್ಯ ನೀಡಿದ್ದಕ್ಕೆ ಧನ್ಯವಾದ. ಚಿರಂಜೀವಿಯನ್ನು ಭೇಟಿ ಮಾಡಬೇಕು ಎನ್ನುವ ಬಾಲ್ಯದ ಕನಸು ನನಸಾಯಿತು’ ಎಂದು ಟ್ವೀಟ್​ ಮಾಡಿದ್ದಾರೆ. ಇದರ ಜತೆಗೆ ಆರ್​ಆರ್​ಆರ್​ ಸಿನಿಮಾ ನಿರ್ಮಾಣ ಸಂಸ್ಥೆ ಡಿವಿವಿ ಮೂವಿಸ್​ ಅನ್ನು ಟ್ಯಾಗ್​ ಮಾಡಿದ್ದಾರೆ.  ಈ ಮೂಲಕ ಸಾಕಷ್ಟು ಕುತೂಹಲ ಹುಟ್ಟಿಸಿದ್ದಾರೆ.

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಈ ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಪ್ರಶಾಂತ್​ ನೀಲ್​ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

ಬಿಗ್​ ಬಾಸ್​ ಬೆಡಗಿಗೆ ‘ಸಲಾರ್​’ ಚಿತ್ರದಲ್ಲಿ ಪ್ರಶಾಂತ್​ ನೀಲ್​ ಚಾನ್ಸ್​ ಕೊಟ್ಟಿದ್ದು ನಿಜವೇ? ಇಲ್ಲಿದೆ ಅಸಲಿಯತ್ತು

Published On - 4:54 pm, Fri, 15 October 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ