AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ

ಉಗ್ರಂ ಸಿನಿಮಾದಲ್ಲಿ ಶ್ರೀಮುರಳಿ ರೌಡಿ ಆಗಿರುತ್ತಾರೆ. ನಂತರ ರೌಡಿಸಂ ಬಿಟ್ಟು ಗ್ಯಾರೇಜ್​ ಒಂದನ್ನು ನಡೆಸುತ್ತಿರುತ್ತಾರೆ. ಸಲಾರ್​ ಸಿನಿಮಾದ ಫಸ್ಟ್ ಪೋಸ್ಟರ್​ಗೂ ಶ್ರೀಮುರುಳಿ ನಿರ್ವಹಿಸಿದ್ದ ಪಾತ್ರಕ್ಕೂ ಲಿಂಕ್​ ಇತ್ತು.

ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ
ಹರಿಪ್ರಿಯಾ-ಶ್ರುತಿ ಹಾಸನ್
ರಾಜೇಶ್ ದುಗ್ಗುಮನೆ
|

Updated on: Apr 19, 2021 | 9:29 PM

Share

ಕೆಜಿಎಫ್​ ಖ್ಯಾತಿಯ ಪ್ರಶಾಂತ್​ ನೀಲ್​, ಪ್ರಭಾಸ್​ ನಟನೆಯ ಸಲಾರ್​ ಚಿತ್ರಕ್ಕೆ ಆ್ಯಕ್ಷನ್ ಕಟ್​​ ಹೇಳುತ್ತಿದ್ದಾರೆ. ಇದು ಸ್ಯಾಂಡಲ್​ವುಡ್​ನಲ್ಲಿ ಬಹುದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದ ಉಗ್ರಂ ಸಿನಿಮಾದ ರಿಮೇಕ್​ ಎಂದು ಹೇಳಲಾಗುತ್ತಿದೆ. ಅಚ್ಚರಿ ಎಂದರೆ, ಉಗ್ರಂನಲ್ಲಿ ಹರಿಪ್ರಿಯಾ ಮಾಡಿದ ಪಾತ್ರಕ್ಕೂ, ಸಲಾರ್​​ನಲ್ಲಿ ಶ್ರುತಿ ಹಾಸನ್​ ಮಾಡುತ್ತಿರುವ ಪಾತ್ರಕ್ಕೂ ತುಂಬಾನೇ ವ್ಯತ್ಯಾಸ ಇದೆ. ಉಗ್ರಂ ಸಿನಿಮಾದಲ್ಲಿ ಶ್ರೀಮುರಳಿ ರೌಡಿ ಆಗಿರುತ್ತಾರೆ. ನಂತರ ರೌಡಿಸಂ ಬಿಟ್ಟು ಗ್ಯಾರೇಜ್​ ಒಂದನ್ನು ನಡೆಸುತ್ತಿರುತ್ತಾರೆ. ಸಲಾರ್​ ಸಿನಿಮಾದ ಫಸ್ಟ್ ಪೋಸ್ಟರ್​ಗೂ ಶ್ರೀಮುರುಳಿ ನಿರ್ವಹಿಸಿದ್ದ ಪಾತ್ರಕ್ಕೂ ಲಿಂಕ್​ ಇತ್ತು. ಇದಾದ ಬೆನ್ನಲ್ಲೇ ಶ್ರುತಿ ಹಾಸನ್​ ಪಾತ್ರ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲ ಆಗಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ.

ಉಗ್ರಂ ಸಿನಿಮಾದಲ್ಲಿ ಹರಿಪ್ರಿಯಾ ನಾಯಕಿ. ವಿದೇಶದಿಂದ ಭಾರತಕ್ಕೆ ಬರುವ ಅವರಿಗೆ ತೊಂದರೆ ಎದುರಾಗುತ್ತದೆ. ಆಗ ಶ್ರೀಮುರಳಿ ಇವರನ್ನು ಕಾಪಾಡುತ್ತಾರೆ. ಹರಿಪ್ರಿಯಾ ನಿರ್ವಹಿಸಿದ್ದ ಪಾತ್ರದಲ್ಲಿ ಒಂದು ಮುಗ್ಧತೆ ಇತ್ತು. ಆದರೆ, ಸಲಾರ್​ ಸಿನಿಮಾದಲ್ಲಿ ಶ್ರುತಿ ಹಾಸನ್​ ಪಾತ್ರ ಸಂಪೂರ್ಣವಾಗಿ ಬೆರೆಯೇ ಇದೆ.

ಶ್ರುತಿ ಹಾಸನ್ ಈ ಸಿನಿಮಾದಲ್ಲಿ ಪೊಲಿಟಿಕಲ್​ ಜರ್ನಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಸದ್ಯ, ಈ ವಿಚಾರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಅಲ್ಲದೆ, ಸಲಾರ್​ ಸಿನಿಮಾದಲ್ಲಿ ಏನೆಲ್ಲ ವಿಚಾರಗಳಲ್ಲಿ ಬದಲಾವಣೆ ಮಾಡಲಾಗಿದೆ ಎನ್ನುವ ಕುತೂಹಲ ಕೂಡ ಮೂಡಿದೆ.

ಸಲಾರ್​ ಸಿನಿಮಾ 150 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. 2022ರ ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಕೆಜಿಎಫ್​ ಸಿನಿಮಾದಲ್ಲಿ ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತೆಲುಗು ಚಿತ್ರರಂಗಕ್ಕೆ ಹೋದರೂ ಕನ್ನಡಿಗರಿಗೆ ಆದ್ಯತೆ ನೀಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್​ ಮುಂದುವರಿಸಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ