AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಕತೆಯ ಎಳೆ ಬಿಟ್ಟುಕೊಟ್ಟ ಪ್ರಶಾಂತ್ ನೀಲ್: ಆ ಸಿನಿಮಾದ ಛಾಯೆ ಇದೆ

Salaar: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಡಿಸೆಂಬರ್​ನಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಕತೆಯ ಎಳೆಯನ್ನು ಪ್ರಶಾಂತ್ ನೀಲ್ ಬಿಟ್ಟುಕೊಟ್ಟಿದ್ದಾರೆ.

‘ಸಲಾರ್’ ಕತೆಯ ಎಳೆ ಬಿಟ್ಟುಕೊಟ್ಟ ಪ್ರಶಾಂತ್ ನೀಲ್: ಆ ಸಿನಿಮಾದ ಛಾಯೆ ಇದೆ
ಸಲಾರ್
ಮಂಜುನಾಥ ಸಿ.
|

Updated on: Nov 28, 2023 | 8:58 PM

Share

ಪ್ರಭಾಸ್ (Prabhas) ನಟಿಸಿ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನ ಮಾಡಿರುವ ‘ಸಲಾರ್’ (Salaar) ಸಿನಿಮಾ ಭಾರತದ ಈ ವರ್ಷದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ‘ಕೆಜಿಎಫ್’ ಸರಣಿ ಮೂಲಕ ಭಾರಿ ದೊಡ್ಡ ಬ್ಲಾಕ್ ಬಸ್ಟರ್​ಗಳನ್ನು ನೀಡಿರುವ ಪ್ರಶಾಂತ್ ನೀಲ್, ಪ್ರಭಾಸ್ ಜೊತೆ ಕೈಜೋಡಿಸಿರುವ ಕಾರಣ ನಿರೀಕ್ಷೆಗಳು ನೂರು ಪಟ್ಟಾಗಿದೆ. ‘ಸಲಾರ್’ ಸಿನಿಮಾ ಡಿಸೆಂಬರ್​ನಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರ ಕಾರ್ಯ ಆರಂಭವಾಗಿದೆ. ಇದೀಗ ಬಾಲಿವುಡ್​ನ ವೆಬ್​ಸೈಟ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾದ ಕತೆಯ ಎಳೆ ಬಿಟ್ಟುಕೊಟ್ಟಿದ್ದಾರೆ.

‘ಪಿಂಕ್​ವಿಲ್ಲಾ’ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾ ಆತ್ಮೀಯ ಗೆಳೆಯರಿಬ್ಬರು ಬದ್ಧ ವೈರಿಗಳಾಗುವ ಕತೆ ಎಂದು ಹೇಳಿದ್ದಾರೆ. ಅಲ್ಲಿಗೆ, ‘ಸಲಾರ್’ ಸಿನಿಮಾದಲ್ಲಿ ನಟಿಸಿರುವ ಪ್ರಭಾಸ್ ಹಾಗೂ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರ್ ನಡುವೆ ನಡೆಯುವ ಕತೆಯೇ ಸಿನಿಮಾದ ಪ್ರಧಾನ ಅಂಶ ಎಂಬುದು ತಿಳಿದು ಬರುತ್ತಿದೆ. ಆದರೆ ಗೆಳೆಯರು ಹೀಗೆ ವೈರಿಗಳಾಗಲು ಏನು ಕಾರಣ? ಗೆಳೆಯರ ಯುದ್ಧದಲ್ಲಿ ಅಂತಿಮವಾಗಿ ಗೆಲ್ಲುವುದು ಯಾರು? ಎಂಬುದನ್ನು ತಿಳಿಯಲು ಸಿನಿಮಾ ನೋಡಬೇಕಿದೆ.

‘ಸಲಾರ್’ ಸಿನಿಮಾ ಪ್ರಾರಂಭವಾದಾಗಿನಿಂದಲೂ ಇದು, ಕನ್ನಡದ ‘ಉಗ್ರಂ’ ಸಿನಿಮಾದ ರೀಮೇಕ್ ಎಂಬ ಮಾತುಗಳು ಕೇಳಿ ಬರುತ್ತಿವೆ. ‘ಉಗ್ರಂ’ ಸಿನಿಮಾವನ್ನು ಪ್ರಶಾಂತ್ ನೀಲ್ ಅವರೇ ನಿರ್ದೇಶನ ಮಾಡಿದ್ದಾರೆ. ಅದರಲ್ಲಿಯೂ ಸಹ ನಾಯಕ ಶ್ರೀಮುರಳಿ ಹಾಗೂ ತಿಲಕ್ ಗೆಳೆಯರಾಗಿರುತ್ತಾರೆ. ಆದರೆ ನಂತರ ಬದ್ಧ ವೈರಿಗಳಾಗುತ್ತಾರೆ. ಈಗ ಪ್ರಶಾಂತ್ ನೀಲ್ ಹೇಳಿರುವಂತೆ ‘ಸಲಾರ್’ ಸಿನಿಮಾದಲ್ಲಿಯೂ ಗೆಳೆಯರು ವೈರಿಗಳಾಗವ ಕತೆ ಇದೆಯಂತೆ. ಪ್ರಶಾಂತ್ ನೀಲ್ ‘ಸಲಾರ್’ನ ಒನ್​ಲೈನರ್ ಹೇಳಿದ ಬಳಿಕ ಈ ಸಿನಿಮಾ ‘ಉಗ್ರಂ’ನ ರೀಮೇಕ್ ಇರಬೇಕೆನ್ನುವ ಅನುಮಾನ ಇನ್ನಷ್ಟು ಬಲವಾಗಿದೆ.

ಇದನ್ನೂ ಓದಿ:ಟ್ರೇಲರ್​ ಬಿಡುಗಡೆಗೂ ಮೊದಲೇ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ನಲ್ಲಿ ‘ಸಲಾರ್​’ ಅಬ್ಬರ ಶುರು

ಆದರೆ ‘ಉಗ್ರಂ’ ಸಿನಿಮಾ ಒಂದೇ ಭಾಗದಲ್ಲಿ ಮುಗಿದು ಹೋಗಿತ್ತು ಆದರೆ ‘ಸಲಾರ್’ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗುತ್ತಿದೆ. ‘ಸಲಾರ್’ ಸಿನಿಮಾ ‘ಉಗ್ರಂ’ನ ರೀಮೇಕ್ ಹೌದೇ ಅಲ್ಲವೆ ಎಂಬ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇಲ್ಲ. ಆದರೆ ‘ಸಲಾರ್’ ಸಿನಿಮಾ ಚಿತ್ರೀಕರಣದ ಹಂತದಲ್ಲಿದ್ದಾಗಲೇ ಯೂಟ್ಯೂಬ್ ಸೇರಿದಂತೆ ವಿವಿಧ ಫ್ಲ್ಯಾಟ್​ಫಾರ್ಮ್​ನಲ್ಲಿದ್ದ ‘ಉಗ್ರಂ’ ಸಿನಿಮಾವನ್ನು ತೆಗೆದು ಹಾಕಲಾಗಿದೆ. ಇದು ಸಹ ‘ಸಲಾರ್’, ‘ಉಗ್ರಂ’ನ ರೀಮೇಕ್ ಇರಬಹುದೆಂಬ ಅನುಮಾನವನ್ನು ಇನ್ನಷ್ಟು ಬಲಗೊಳಿಸಿದೆ.

‘ಸಲಾರ್’ ಸಿನಿಮಾನಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರ್ ಜೊತೆಗೆ ಜಗಪತಿ ಬಾಬು, ಕನ್ನಡಿಗ ಮಧು ಗುರು ಸ್ವಾಮಿ, ರಾಮಕೃಷ್ಣ, ಪಂಜು ಬಾಲಿವುಡ್ ನಟ ಟೀನು ಆನಂದ್ ಇನ್ನೂ ಹಲವರು ನಟಿಸಿದ್ದಾರೆ. ನಾಯಕಿಯಾಗಿ ಶ್ರುತಿ ಹಾಸನ್ ಅವರುಗಳು ನಟಿಸಿದ್ದಾರೆ. ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿರುವ ಈ ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಿನಿಮಾವು ಡಿಸೆಂಬರ್ 22 ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?