AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ; ಸ್ಟಾರ್​ ನಟನ ಜನ್ಮದಿನದಂದು ಹೊರಬಿತ್ತು ಸುದ್ದಿ

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಹರಿಸುತ್ತಿದೆ.

ಜ್ಯೂ. ಎನ್​​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ; ಸ್ಟಾರ್​ ನಟನ ಜನ್ಮದಿನದಂದು ಹೊರಬಿತ್ತು ಸುದ್ದಿ
ಜ್ಯೂ. ಎನ್​ಟಿಆರ್​-ಪ್ರಶಾಂತ್​ ನೀಲ್
ರಾಜೇಶ್ ದುಗ್ಗುಮನೆ
| Edited By: |

Updated on: May 20, 2021 | 2:54 PM

Share

‘ಕೆಜಿಎಫ್’​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಪ್ರಶಾಂತ್​ ನೀಲ್​ಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈಗಾಗಲೇ ಅವರು ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ಸಲಾರ್’​ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೀಗಿರುವಾಗಲೇ ಅವರು ಜ್ಯೂ.ಎನ್​ಟಿಆರ್​ ಜತೆ ಕೈ ಜೋಡಿಸಿದ್ದಾರೆ.

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಹರಿಸುತ್ತಿದ್ದಾರೆ. ಆರ್​ಆರ್​ಆರ್​ ಚಿತ್ರತಂಡದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ಇದರ ಜತೆಗೆ ಮುಂದಿನ ಚಿತ್ರದ ಬಗ್ಗೆ ದೊಡ್ಡ ಅನೌನ್ಸ್​ಮೆಂಟ್​ ಕೂಡ ಆಗಿದೆ.

ಹೌದು, ಜ್ಯೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​​ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆಗಿದ್ದಾರೆ. ಈ ವಿಚಾರವನ್ನು ಖುದ್ದು ಮೈತ್ರಿ ಮೂವೀ ಮೇಕರ್ಸ್​ ನಿರ್ಮಾಣ ಸಂಸ್ಥೆ ಖಚಿತಪಡಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಮೈತ್ರಿ ಮೂವೀ ಮೇಕರ್ಸ್​, ಮುಂದಿನ ಸಿನಿಮಾಗೆ ಪ್ರಶಾಂತ್​ ನೀಲ್​-ಜ್ಯೂ.ಎನ್​ಟಿಆರ್​ ಕೈಜೋಡಿಸುತ್ತಿರುವ ಸೂಚನೆ ನೀಡಿದ್ದಾರೆ. ಅಲ್ಲದೆ, ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ತಯಾರಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈಗ ಸಿದ್ಧಗೊಳ್ಳುತ್ತಿರುವ ಚಿತ್ರದಲ್ಲೂ ಆ್ಯಕ್ಷನ್​ಗಳು ಯತೇಚ್ಛವಾಗಿ ಇರಲಿದೆಯಂತೆ.

ಕೊರೊನಾ ವೈರಸ್ ಹಾವಳಿ ಮಿತಿ ಮೀರುವುದರಿಂದ ಈ ಬಾರಿ ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡಲಾಗುತ್ತಿಲ್ಲ. ಈ ವೇಳೆ ಕೇವಲ ಸೋಶಿಯಲ್ ಮೀಡಿಯಾ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈಗಾಗಲೇ ಅಭಿಮಾನಿಗಳು ಕಾಮನ್ ಡಿಪಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಜ್ಯೂ. ಎನ್​ಟಿಆರ್​ ಸದ್ಯ, ಆರ್​ಆರ್​ಆರ್​ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್​.ಎಸ್​. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇನ್ನು, ಪ್ರಶಾಂತ್​ ನೀಲ್​ ನಿರ್ದೇಶನದ ಕೆಜಿಎಫ್​-2 ರಿಲೀಸ್​ಗೆ ರೆಡಿ ಇದೆ. ಸಲಾರ್ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ: ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​

Jr NTR Birthday: ಜ್ಯೂ. ಎನ್​ಟಿಆರ್​ಗೆ ಜನ್ಮದಿನದ ಸಂಭ್ರಮ; ಟಾಲಿವುಡ್​ ಹೀರೋಗೆ ಸಿಕ್ತಿದೆ ಭರ್ಜರಿ ಗಿಫ್ಟ್​

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!