AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ; ಸ್ಟಾರ್​ ನಟನ ಜನ್ಮದಿನದಂದು ಹೊರಬಿತ್ತು ಸುದ್ದಿ

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಹರಿಸುತ್ತಿದೆ.

ಜ್ಯೂ. ಎನ್​​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ; ಸ್ಟಾರ್​ ನಟನ ಜನ್ಮದಿನದಂದು ಹೊರಬಿತ್ತು ಸುದ್ದಿ
ಜ್ಯೂ. ಎನ್​ಟಿಆರ್​-ಪ್ರಶಾಂತ್​ ನೀಲ್
ರಾಜೇಶ್ ದುಗ್ಗುಮನೆ
| Edited By: |

Updated on: May 20, 2021 | 2:54 PM

Share

‘ಕೆಜಿಎಫ್’​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಪ್ರಶಾಂತ್​ ನೀಲ್​ಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈಗಾಗಲೇ ಅವರು ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಅವರು ನಿರ್ದೇಶನ ಮಾಡುತ್ತಿರುವ ‘ಸಲಾರ್’​ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೀಗಿರುವಾಗಲೇ ಅವರು ಜ್ಯೂ.ಎನ್​ಟಿಆರ್​ ಜತೆ ಕೈ ಜೋಡಿಸಿದ್ದಾರೆ.

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಹರಿಸುತ್ತಿದ್ದಾರೆ. ಆರ್​ಆರ್​ಆರ್​ ಚಿತ್ರತಂಡದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ಇದರ ಜತೆಗೆ ಮುಂದಿನ ಚಿತ್ರದ ಬಗ್ಗೆ ದೊಡ್ಡ ಅನೌನ್ಸ್​ಮೆಂಟ್​ ಕೂಡ ಆಗಿದೆ.

ಹೌದು, ಜ್ಯೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಪ್ರಶಾಂತ್​ ನೀಲ್​​ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆಗಿದ್ದಾರೆ. ಈ ವಿಚಾರವನ್ನು ಖುದ್ದು ಮೈತ್ರಿ ಮೂವೀ ಮೇಕರ್ಸ್​ ನಿರ್ಮಾಣ ಸಂಸ್ಥೆ ಖಚಿತಪಡಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಮೈತ್ರಿ ಮೂವೀ ಮೇಕರ್ಸ್​, ಮುಂದಿನ ಸಿನಿಮಾಗೆ ಪ್ರಶಾಂತ್​ ನೀಲ್​-ಜ್ಯೂ.ಎನ್​ಟಿಆರ್​ ಕೈಜೋಡಿಸುತ್ತಿರುವ ಸೂಚನೆ ನೀಡಿದ್ದಾರೆ. ಅಲ್ಲದೆ, ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ತಯಾರಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈಗ ಸಿದ್ಧಗೊಳ್ಳುತ್ತಿರುವ ಚಿತ್ರದಲ್ಲೂ ಆ್ಯಕ್ಷನ್​ಗಳು ಯತೇಚ್ಛವಾಗಿ ಇರಲಿದೆಯಂತೆ.

ಕೊರೊನಾ ವೈರಸ್ ಹಾವಳಿ ಮಿತಿ ಮೀರುವುದರಿಂದ ಈ ಬಾರಿ ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡಲಾಗುತ್ತಿಲ್ಲ. ಈ ವೇಳೆ ಕೇವಲ ಸೋಶಿಯಲ್ ಮೀಡಿಯಾ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈಗಾಗಲೇ ಅಭಿಮಾನಿಗಳು ಕಾಮನ್ ಡಿಪಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಜ್ಯೂ. ಎನ್​ಟಿಆರ್​ ಸದ್ಯ, ಆರ್​ಆರ್​ಆರ್​ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್​.ಎಸ್​. ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇನ್ನು, ಪ್ರಶಾಂತ್​ ನೀಲ್​ ನಿರ್ದೇಶನದ ಕೆಜಿಎಫ್​-2 ರಿಲೀಸ್​ಗೆ ರೆಡಿ ಇದೆ. ಸಲಾರ್ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ.

ಇದನ್ನೂ ಓದಿ: ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​

Jr NTR Birthday: ಜ್ಯೂ. ಎನ್​ಟಿಆರ್​ಗೆ ಜನ್ಮದಿನದ ಸಂಭ್ರಮ; ಟಾಲಿವುಡ್​ ಹೀರೋಗೆ ಸಿಕ್ತಿದೆ ಭರ್ಜರಿ ಗಿಫ್ಟ್​

Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು