AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ 2’ ಬಳಿಕ ತೆಲುಗಿನ ಮತ್ತೊಬ್ಬ ಸ್ಟಾರ್ ಜೊತೆ ಪ್ರಶಾಂತ್ ನೀಲ್ ಸಿನಿಮಾ

Prashanth Neel movies: ‘ಕೆಜಿಎಫ್’ ಸಿನಿಮಾ ಸರಣಿಯ ಸೃಷ್ಟಿಕರ್ತ ಪ್ರಶಾಂತ್ ನೀಲ್ ತೆಲುಗು ಸಿನಿಮಾ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದೇ ಬರುವೆ ಎಂದು ನೀಲ್ ಹೇಳಿದ್ದಾರಾದರೂ ನಿಕಟ ಭವಿಷ್ಯದಲ್ಲಿ ಅದು ಸಾಧ್ಯವಾಗುವಂತಿಲ್ಲ. ಈಗ ಜೂ ಎನ್​ಟಿಆರ್ ಜೊತೆ ಸಿನಿಮಾ ಂಆಡುತ್ತಿರುವ ನೀಲ್, ಅದರ ಬಳಿಕ ‘ಸಲಾರ್ 2’ ಮಾಡಲಿದ್ದಾರೆ. ಅದಾದ ಬಳಿಕ ತೆಲುಗಿನ ಸ್ಟಾರ್ ನಟರೊಬ್ಬರ ಜೊತೆಗೆ ಹೊಸ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ.

‘ಸಲಾರ್ 2’ ಬಳಿಕ ತೆಲುಗಿನ ಮತ್ತೊಬ್ಬ ಸ್ಟಾರ್ ಜೊತೆ ಪ್ರಶಾಂತ್ ನೀಲ್ ಸಿನಿಮಾ
Prashanth Neel
ಮಂಜುನಾಥ ಸಿ.
|

Updated on: Jul 16, 2025 | 11:53 AM

Share

ಕೆಜಿಎಫ್’ (KGF) ಸಿನಿಮಾ ಸರಣಿ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ ನಿರ್ದೇಶಕ ಪ್ರಶಾಂತ್ ನೀಲ್, ‘ಕೆಜಿಎಫ್’ ಸಿನಿಮಾಗಳ ಬಳಿಕ ತೆಲುಗು ಚಿತ್ರರಂಗಕ್ಕೆ ಹೋದವರು ಅಲ್ಲೇ ಸೆಟಲ್ ಆಗಿಬಿಟ್ಟಿದ್ದಾರೆ. ಪ್ರಭಾಸ್​ಗಾಗಿ ‘ಸಲಾರ್’ ಸಿನಿಮಾ ಮಾಡಿದ ಪ್ರಶಾಂತ್ ನೀಲ್ ಈಗ ಜೂ ಎನ್​ಟಿಆರ್ ಅವರಿಗಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾದ ಬಳಿಕ ಮತ್ತೆ ಪ್ರಭಾಸ್ ಜೊತೆಗೆ ‘ಸಲಾರ್ 2’ ಸಿನಿಮಾ ಮಾಡಲಿದ್ದಾರೆ. ‘ಸಲಾರ್ 2’ ಮುಗಿದ ಬಳಿಕವಾದರೂ ಕನ್ನಡಕ್ಕೆ ಮರಳಿ ಬರುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಈಗ ಅದೂ ಸಹ ಸುಳ್ಳಾಗಿದೆ.

ಪ್ರಭಾಸ್ ಜೊತೆಗೆ ‘ಸಲಾರ್ 2’ ಸಿನಿಮಾದ ಬಳಿಕ ಪ್ರಶಾಂತ್ ನೀಲ್ ತೆಲುಗಿನ ಮತ್ತೊಬ್ಬ ಸ್ಟಾರ್ ನಟನ ಜೊತೆಗೆ ಕೆಲಸ ಮಾಡಲಿದ್ದಾರೆ. ಪ್ರಶಾಂತ್ ನೀಲ್ ಅವರು ತೆಲುಗಿನ ಸ್ಟಾರ್ ನಟ ರಾಮ್ ಚರಣ್ ಅವರಿಗಾಗಿ ಹೊಸದೊಂದು ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಈ ಬಗ್ಗೆ ಈಗಾಗಲೇ ಮಾತುಕತೆ ನಡೆದಿದ್ದು, ರಾಮ್ ಚರಣ್ ಅವರಿಗೆ ನೀಲ್ ಹೇಳಿರುವ ಐಡಿಯಾ ಇಷ್ಟವಾಗಿದೆಯಂತೆ. ಸಿನಿಮಾದ ಚಿತ್ರಕತೆ ಮೇಲೆ ನೀಲ್ ಹೆಚ್ಚಿನ ಕೆಲಸ ಮಾಡುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಹರಿದಾಡಿದ್ದ ಸುದ್ದಿಯ ಪ್ರಕಾರ, ಪ್ರಶಾಂತ್ ನೀಲ್, ಅಲ್ಲು ಅರ್ಜುನ್ ಜೊತೆಗೆ ಸಿನಿಮಾ ಮಾಡಲಿದ್ದು, ಸಿನಿಮಾಕ್ಕೆ ‘ರಾವಣಂ’ ಎಂದು ಹೆಸರಿಡಲಾಗಿದೆ. ಸಿನಿಮಾ ಅನ್ನು ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಯಂತೆ. ಅದೇ ಕತೆಯನ್ನು ಅಲ್ಲು ಅರ್ಜುನ್ ಬದಲಾಗಿ ರಾಮ್ ಚರಣ್ ಅವರಿಗೆ ಮಾಡಲಿದ್ದಾರಂತೆ. ಸಿನಿಮಾಕ್ಕೆ ದಿಲ್ ರಾಜು ಅವರೇ ಬಂಡವಾಳ ಹೂಡಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಪ್ರಶಾಂತ್ ನೀಲ್ ಸಿನಿಮಾನಲ್ಲಿ ನಟಿಸಲಿರುವ ಅಲ್ಲು ಅರ್ಜುನ್, ಹೆಸರೇನು ಗೊತ್ತೆ?

ಪ್ರಶಾಂತ್ ನೀಲ್ ಈಗ ನಿರ್ದೇಶನ ಮಾಡುತ್ತಿರುವ ಜೂ ಎನ್​ಟಿಆರ್-ರುಕ್ಮಿಣಿ ವಸಂತ್ ಸಿನಿಮಾ ಮುಂದಿನ ವರ್ಷ ಅಂದರೆ 2026, ಜೂನ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾದ ಬಿಡುಗಡೆ ಬಳಿಕ ‘ಸಲಾರ್ 2’ ಪ್ರಾರಂಭ ಆಗಲಿದ್ದು, ‘ಸಲಾರ್ 2’ 2027ರಲ್ಲಿ ತೆರೆಗೆ ಬರಲಿದೆ. ಅಲ್ಲಿದೆ. ಪ್ರಶಾಂತ್ ನೀಲ್, ರಾಮ್ ಚರಣ್ ಜೊತೆಗೆ ಸಿನಿಮಾ ಚಿತ್ರೀಕರಣ ಪ್ರಾರಂಭ ಮಾಡುವುದೇ 2027ರ ಅಂತ್ಯದಲ್ಲಿ ಬಿಡುಗಡೆ ಆಗುವುದು ಎರಡು ವರ್ಷದ ಬಳಿಕ ಅಲ್ಲಿಗೆ, ನೀಲ್ ಮತ್ತೆ ಕನ್ನಡ ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಕನಿಷ್ಟ ಇನ್ನೂ ನಾಲ್ಕು ಅಥವಾ ಐದು ವರ್ಷವಾದರೂ ಬೇಕು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ