AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಸೆಟ್ಟೇರಲ್ಲ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ..

ಮೊದಲ ಭಾಗ ಫ್ಲಾಪ್ ಆದರೆ, ಎರಡನೇ ಭಾಗ ಮಾಡಲು ನಿರ್ಮಾಪಕರು ಮುಂದಾಗುವುದಿಲ್ಲ. ಆದರೆ ‘ಸಲಾರ್’ ಒಳ್ಳೆಯ ಬಿಸ್ನೆಸ್ ಮಾಡಿದೆ. ಒಟಿಟಿ ಮೊದಲಾದ ಹಕ್ಕುಗಳ ಮಾರಾಟದಿಂದ ಚಿತ್ರಕ್ಕೆ ಒಳ್ಳೆಯ ಆದಾಯ ಬಂದಿದೆ. ಈ ಎಲ್ಲಾ ಕಾರಣದಿಂದ ಎರಡನೇ ಭಾಗ ಮಾಡುವುದು ಚಿತ್ರತಂಡಕ್ಕೆ ಲಾಭದಾಯಕವೇ. ಆದರೂ ಪ್ರಶಾಂತ್ ಈ ವಿಚಾರದಲ್ಲಿ ಆತುರ ತೋರುತ್ತಿಲ್ಲ ಎನ್ನಲಾಗಿದೆ.

ಸದ್ಯಕ್ಕಂತೂ ಸೆಟ್ಟೇರಲ್ಲ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ..
ಪ್ರಶಾಂತ್​ ನೀಲ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 19, 2024 | 11:40 AM

Share

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ (Salaar Movie) ಜನರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಕಲೆ ಹಾಕಿದೆ. ಈ ಚಿತ್ರ ನೆಟ್​ಫ್ಲಿಕ್ಸ್​ನಲ್ಲಿಯೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರಲಿದೆ ಎಂದು ತಂಡ ಈ ಮೊದಲೇ ಘೋಷಣೆ ಮಾಡಿದೆ. ಮೊದಲ ಭಾಗದ ಕ್ಲೈಮ್ಯಾಕ್ಸ್​ನಲ್ಲಿ ದೊಡ್ಡ ಟ್ವಿಸ್ಟ್​ನೊಂದಿಗೆ ಸಿನಿಮಾ ಪೂರ್ಣಗೊಳಿಸಲಾಗಿದೆ. ಹೀಗಾಗಿ ಎರಡನೇ ಪಾರ್ಟ್ (Salaar 2 Movie) ಬಗ್ಗೆ ನಿರೀಕ್ಷೆ ಮೂಡಿದೆ. ಆದರೆ, ಈ ಸಿನಿಮಾ ಸದ್ಯಕ್ಕಂತೂ ಸೆಟ್ಟೇರುವುದಿಲ್ಲ ಎನ್ನಲಾಗುತ್ತಿದೆ.

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಮೊದಲ ಭಾಗ ಮುಗಿದ ತಕ್ಷಣ ಎರಡನೇ ಪಾರ್ಟ್​ನ ಕೆಲಸದಲ್ಲಿ ತೊಡಗಿಕೊಂಡರು. ಆದರೆ, ‘ಸಲಾರ್’ ವಿಚಾರದಲ್ಲಿ ಅವರು ಆ ರೀತಿ ಮಾಡುತ್ತಿಲ್ಲ. ಇದಕ್ಕೆ ಕಾರಣ ಹಲವು. ಅವರು ಜೂನಿಯರ್ ಎನ್​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಜೂನಿಯರ್ ಎನ್​ಟಿಆರ್​ ‘ದೇವರ’ ಹಾಗೂ ‘ವಾರ್ 2’ ಕೆಲಸ ಮುಗಿದ ಬಳಿಕ ಪ್ರಶಾಂತ್ ನೀಲ್ ಕೈಗೆ ಸಿಗಲಿದ್ದಾರೆ. ಅದಕ್ಕೆ ಇನ್ನೂ ಸಾಕಷ್ಟು ಸಮಯಬೇಕಿದೆ.

‘ಸಲಾರ್ 2’ ಮಾಡಬೇಕಾದರೆ ಪ್ರಭಾಸ್ ಅವರ ಕಾಲ್​ಶೀಟ್ ಕೂಡ ಮುಖ್ಯ. ಸದ್ಯ ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಇದಲ್ಲದೆ ‘ದಿ ರಾಜಾ ಸಾಬ್’ ಹಾಗೂ ‘ಸ್ಪಿರಿಟ್’ ಸಿನಿಮಾಗಳೂ ಅವರ ಕೈಯಲ್ಲಿವೆ. ಈ ಎಲ್ಲಾ ಕಾರಣದಿಂದ ಪ್ರಭಾಸ್ ಸದ್ಯಕ್ಕಂತೂ ಯಾರ ಕೈಗೂ ಸಿಗುವುದಿಲ್ಲ.

ಇದನ್ನೂ ಓದಿ: ‘ನಾನು ಬ್ಯಾಡ್ ಹಸ್ಬಂಡ್’; ಓಪನ್ ಆಗಿ ಮಾತನಾಡಿದ ಪ್ರಶಾಂತ್ ನೀಲ್

‘ಕೆಜಿಎಫ್ 2’ ಕ್ಲೈ ಮ್ಯಾಕ್ಸ್​ನಲ್ಲಿ ಮೂರನೇ ಭಾಗದ ಬಗ್ಗೆ ಸೂಚನೆ ನೀಡಲಾಗಿತ್ತು. ಈ ಕ್ರೇಜ್ ಕಡಿಮೆ ಆಗುವ ಮೊದಲು ಮೂರನೇ ಭಾಗ ಮಾಡಬೇಕಾದ ಅನಿವಾರ್ಯತೆ ತಂಡಕ್ಕೆ ಇದೆ. ಹೀಗಾಗಿ, 2025ರ ವೇಳೆಗಾದರೂ ‘ಕೆಜಿಎಫ್ 3’ ಸೆಟ್ಟೇರಬೇಕಿದೆ. ಈ ಎಲ್ಲಾ ಕಾರಣದಿಂದ ಪ್ರಶಾಂತ್ ನೀಲ್ ಅವರು ಈ ಬಗ್ಗೆ ಗಮನ ಹರಿಸಬಹುದು ಎನ್ನಲಾಗುತ್ತಿದೆ. ಜೂನಿಯರ್ ಎನ್​ಟಿಆರ್ ಜೊತೆಗಿನ ಸಿನಿಮಾ ಪೂರ್ಣಗೊಂಡ ಬಳಿಕ ಅವರು ‘ಕೆಜಿಎಫ್ 3’ ಕೈಗೆತ್ತಿಕೊಂಡಿದ್ದು ಹೌದಾದಲ್ಲಿ ‘ಸಲಾರ್ 2’ ಸೆಟ್ಟೇರೋದು ಮತ್ತಷ್ಟು ವಿಳಂಬ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ