AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಸೆಟ್ಟೇರಲ್ಲ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ..

ಮೊದಲ ಭಾಗ ಫ್ಲಾಪ್ ಆದರೆ, ಎರಡನೇ ಭಾಗ ಮಾಡಲು ನಿರ್ಮಾಪಕರು ಮುಂದಾಗುವುದಿಲ್ಲ. ಆದರೆ ‘ಸಲಾರ್’ ಒಳ್ಳೆಯ ಬಿಸ್ನೆಸ್ ಮಾಡಿದೆ. ಒಟಿಟಿ ಮೊದಲಾದ ಹಕ್ಕುಗಳ ಮಾರಾಟದಿಂದ ಚಿತ್ರಕ್ಕೆ ಒಳ್ಳೆಯ ಆದಾಯ ಬಂದಿದೆ. ಈ ಎಲ್ಲಾ ಕಾರಣದಿಂದ ಎರಡನೇ ಭಾಗ ಮಾಡುವುದು ಚಿತ್ರತಂಡಕ್ಕೆ ಲಾಭದಾಯಕವೇ. ಆದರೂ ಪ್ರಶಾಂತ್ ಈ ವಿಚಾರದಲ್ಲಿ ಆತುರ ತೋರುತ್ತಿಲ್ಲ ಎನ್ನಲಾಗಿದೆ.

ಸದ್ಯಕ್ಕಂತೂ ಸೆಟ್ಟೇರಲ್ಲ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ..
ಪ್ರಶಾಂತ್​ ನೀಲ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 19, 2024 | 11:40 AM

Share

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ (Salaar Movie) ಜನರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಕಲೆ ಹಾಕಿದೆ. ಈ ಚಿತ್ರ ನೆಟ್​ಫ್ಲಿಕ್ಸ್​ನಲ್ಲಿಯೂ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರಲಿದೆ ಎಂದು ತಂಡ ಈ ಮೊದಲೇ ಘೋಷಣೆ ಮಾಡಿದೆ. ಮೊದಲ ಭಾಗದ ಕ್ಲೈಮ್ಯಾಕ್ಸ್​ನಲ್ಲಿ ದೊಡ್ಡ ಟ್ವಿಸ್ಟ್​ನೊಂದಿಗೆ ಸಿನಿಮಾ ಪೂರ್ಣಗೊಳಿಸಲಾಗಿದೆ. ಹೀಗಾಗಿ ಎರಡನೇ ಪಾರ್ಟ್ (Salaar 2 Movie) ಬಗ್ಗೆ ನಿರೀಕ್ಷೆ ಮೂಡಿದೆ. ಆದರೆ, ಈ ಸಿನಿಮಾ ಸದ್ಯಕ್ಕಂತೂ ಸೆಟ್ಟೇರುವುದಿಲ್ಲ ಎನ್ನಲಾಗುತ್ತಿದೆ.

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಮೊದಲ ಭಾಗ ಮುಗಿದ ತಕ್ಷಣ ಎರಡನೇ ಪಾರ್ಟ್​ನ ಕೆಲಸದಲ್ಲಿ ತೊಡಗಿಕೊಂಡರು. ಆದರೆ, ‘ಸಲಾರ್’ ವಿಚಾರದಲ್ಲಿ ಅವರು ಆ ರೀತಿ ಮಾಡುತ್ತಿಲ್ಲ. ಇದಕ್ಕೆ ಕಾರಣ ಹಲವು. ಅವರು ಜೂನಿಯರ್ ಎನ್​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಜೂನಿಯರ್ ಎನ್​ಟಿಆರ್​ ‘ದೇವರ’ ಹಾಗೂ ‘ವಾರ್ 2’ ಕೆಲಸ ಮುಗಿದ ಬಳಿಕ ಪ್ರಶಾಂತ್ ನೀಲ್ ಕೈಗೆ ಸಿಗಲಿದ್ದಾರೆ. ಅದಕ್ಕೆ ಇನ್ನೂ ಸಾಕಷ್ಟು ಸಮಯಬೇಕಿದೆ.

‘ಸಲಾರ್ 2’ ಮಾಡಬೇಕಾದರೆ ಪ್ರಭಾಸ್ ಅವರ ಕಾಲ್​ಶೀಟ್ ಕೂಡ ಮುಖ್ಯ. ಸದ್ಯ ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಇದಲ್ಲದೆ ‘ದಿ ರಾಜಾ ಸಾಬ್’ ಹಾಗೂ ‘ಸ್ಪಿರಿಟ್’ ಸಿನಿಮಾಗಳೂ ಅವರ ಕೈಯಲ್ಲಿವೆ. ಈ ಎಲ್ಲಾ ಕಾರಣದಿಂದ ಪ್ರಭಾಸ್ ಸದ್ಯಕ್ಕಂತೂ ಯಾರ ಕೈಗೂ ಸಿಗುವುದಿಲ್ಲ.

ಇದನ್ನೂ ಓದಿ: ‘ನಾನು ಬ್ಯಾಡ್ ಹಸ್ಬಂಡ್’; ಓಪನ್ ಆಗಿ ಮಾತನಾಡಿದ ಪ್ರಶಾಂತ್ ನೀಲ್

‘ಕೆಜಿಎಫ್ 2’ ಕ್ಲೈ ಮ್ಯಾಕ್ಸ್​ನಲ್ಲಿ ಮೂರನೇ ಭಾಗದ ಬಗ್ಗೆ ಸೂಚನೆ ನೀಡಲಾಗಿತ್ತು. ಈ ಕ್ರೇಜ್ ಕಡಿಮೆ ಆಗುವ ಮೊದಲು ಮೂರನೇ ಭಾಗ ಮಾಡಬೇಕಾದ ಅನಿವಾರ್ಯತೆ ತಂಡಕ್ಕೆ ಇದೆ. ಹೀಗಾಗಿ, 2025ರ ವೇಳೆಗಾದರೂ ‘ಕೆಜಿಎಫ್ 3’ ಸೆಟ್ಟೇರಬೇಕಿದೆ. ಈ ಎಲ್ಲಾ ಕಾರಣದಿಂದ ಪ್ರಶಾಂತ್ ನೀಲ್ ಅವರು ಈ ಬಗ್ಗೆ ಗಮನ ಹರಿಸಬಹುದು ಎನ್ನಲಾಗುತ್ತಿದೆ. ಜೂನಿಯರ್ ಎನ್​ಟಿಆರ್ ಜೊತೆಗಿನ ಸಿನಿಮಾ ಪೂರ್ಣಗೊಂಡ ಬಳಿಕ ಅವರು ‘ಕೆಜಿಎಫ್ 3’ ಕೈಗೆತ್ತಿಕೊಂಡಿದ್ದು ಹೌದಾದಲ್ಲಿ ‘ಸಲಾರ್ 2’ ಸೆಟ್ಟೇರೋದು ಮತ್ತಷ್ಟು ವಿಳಂಬ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್