ವಿಶೇಷ ವಸ್ತು ಹಿಡಿದು ಹಿಡಿದು ‘ದೇವರ’ ಸಿನಿಮಾ ನೋಡಿದ ಪ್ರಶಾಂತ್ ನೀಲ್ ಪತ್ನಿ

Devara Movie: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನೋಡಲು ವಿಶಲ್ ತೆಗೆದುಕೊಂಡು ಚಿತ್ರಮಂದಿರಕ್ಕೆ ಹೋದ ಪ್ರಶಾಂತ್ ನೀಲ್ ಪತ್ನಿ ಲಿಖಿತಾ ರೆಡ್ಡಿ. ಅಂದಹಾಗೆ ಜೂ ಎನ್​ಟಿಆರ್ ಮುಂದಿನ ಸಿನಿಮಾ ನಿರ್ದೇಶಿಸುತ್ತಿರುವುದು ಪ್ರಶಾಂತ್ ನೀಲ್

ವಿಶೇಷ ವಸ್ತು ಹಿಡಿದು ಹಿಡಿದು ‘ದೇವರ’ ಸಿನಿಮಾ ನೋಡಿದ ಪ್ರಶಾಂತ್ ನೀಲ್ ಪತ್ನಿ
Follow us
| Updated By: ಮಂಜುನಾಥ ಸಿ.

Updated on: Sep 27, 2024 | 6:49 PM

ಪ್ರಶಾಂತ್ ನೀಲ್ ಪತ್ನಿ ಲಿಖಿತಾ ರೆಡ್ಡಿ ಅವರು ಚಿತ್ರರಂಗದಲ್ಲಿ ಸಂಪೂರ್ಣವಾಗಿ ಆ್ಯಕ್ಟೀವ್ ಆಗಿಲ್ಲ. ಆದರೆ, ಆಗಾಗ ಅವರು ಸಿನಿಮಾಗಳಿಗೆ ಬೆಂಬಲ ನೀಡುವ ಕೆಲಸ ಮಾಡುತ್ತಾರೆ. ಹೊಸ ಸಿನಿಮಾ ರಿಲೀಸ್ ಆದರೆ ಈ ಬಗ್ಗೆ ಪೋಸ್ಟ್ ಮಾಡುತ್ತಾರೆ. ಈಗ ಅವರು ‘ದೇವರ’ ಸಿನಿಮಾನ ವೀಕ್ಷಣೆ ಮಾಡಿದ್ದಾರೆ. ವಿಶೇಷ ವಸ್ತುವಿನ ಜೊತೆಗೆ ಅವರು ಈ ಸಿನಿಮಾ ನೋಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರಶಾಂತ್ ನೀಲ್, ಜಾನ್ವಿ ಕಪೂರ್ ಅಭಿನಯದ ‘ದೇವರ’ ಸಿನಿಮಾ ಇಂದು (ಸೆಪ್ಟೆಂಬರ್ 27) ಬಿಡುಗಡೆ ಕಂಡಿದೆ. ಜೂನಿಯರ್ ಎನ್ಟಿಆರ್ ಅವರ ನಟನೆಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಜೂನಿಯರ್ ಎನ್ಟಿಆರ್ ಹಾಗೂ ಕೊರಟಾಲ ಶಿವ ಅವರು ಒಟ್ಟಾಗಿ ಕೆಲಸ ಮಾಡಿದ ಈ ಚಿತ್ರವನ್ನು ಜನರು ಮೆಚ್ಚಿಕೊಳ್ಳುತ್ತಿದ್ದಾರೆ. ಕೆಲವರು ಅಪಸ್ವರ ತೆಗೆದಿದ್ದಾರೆ. ಈ ಚಿತ್ರವನ್ನು ಮೊದಲ ದಿನ ಮೊದಲ ಶೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ:‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ

ಲಿಖಿತಾ ರೆಡ್ಡಿ ಅವರು ಪತಿ ಪ್ರಶಾಂತ್ ನೀಲ್ ಜೊತೆ ‘ದೇವರ’ ನೋಡಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಅವರು ವಿಸಿಲ್ ತೆಗೆದುಕೊಂಡು ಹೋಗಿದ್ದಾರೆ. ಜೂನಿಯರ್ ಎನ್ಟಿಆರ್ ಅವರ ಎಂಟ್ರಿಗೆ ವಿಸಿಲ್ ಹೊಡೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಸಿಲ್ನ ಫೋಟೋನ ಅವರು ಹಂಚಿಕೊಂಡಿದ್ದಾರೆ.

ಲಿಖಿತಾ ರೆಡ್ಡಿ ಅವರು ‘ದೇವರ’ ಸಿನಿಮಾಗೆ ಇಷ್ಟು ಬೆಂಬಲ ನೀಡಲು ಒಂದು ಕಾರಣ ಇದೆ. ತಮ್ಮ ಪತಿ ಪ್ರಶಾಂತ್ ನೀಲ್ ಅವರ ಮುಂದಿನ ಚಿತ್ರ ಇರೋದು ಪ್ರಶಾಂತ್ ನೀಲ್ ಜೊತೆಯೇ. ಈ ಬಗ್ಗೆ ಘೋಷಣೆ ಕೂಡ ಆಗಿದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆಯಂತೆ. ಪ್ರಶಾಂತ್ ನೀಲ್-ಜೂನಿಯರ್ ಎನ್ಟಿಆರ್ ಸಿನಿಮಾದ ಕೆಲಸ ಯಾವಾಗ ಆರಂಭ ಆಗಲಿದೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.

ಇತ್ತೀಚೆಗೆ ಜೂನಿಯರ್ ಎನ್ಟಿಆರ್ ಅವರು ಕುಂದಾಪುರಕ್ಕೆ ಬಂದಿದ್ದರು. ಆಗ ಪ್ರಶಾಂತ್ ನೀಲ್ ಕೂಡ ಇದ್ದರು. ಈ ವೇಳೆ ಸಿನಿಮಾ ಕೆಲಸಗಳ ಬಗ್ಗೆ ಚರ್ಚೆ ಬಿಟ್ಟು ಪ್ರಕೃತಿ ಸೌಂದರ್ಯ ಎಂಜಾಯ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ