AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ವಿಚಾರದಲ್ಲಿ ಬೇಸರಗೊಂಡ ವೀಕ್ಷಕರು; ಮಾತಿಗೆ ತಪ್ಪೋದು ಇಷ್ಟೊಂದು ಸುಲಭವಾ?

ಪ್ರಶಾಂತ್​ ಸಂಬರಗಿ ವಿಚಾರದಲ್ಲಿ ಚಕ್ರವರ್ತಿ ಚಂದ್ರಚೂಡ್​ ಸುಳ್ಳು ಹೇಳುತ್ತಿರುವ ವಿಚಾರ ಮನೆಯಲ್ಲಿ ಸಾಬೀತಾಗಿತ್ತು. ಈ ವಿಚಾರದ ನಂತರ ಪ್ರಶಾಂತ್​ ಹಾಗೂ ಚಕ್ರವರ್ತಿ ಗೆಳೆತನದಲ್ಲಿ ಬಿರುಕು ಮೂಡಿತ್ತು.

ಪ್ರಶಾಂತ್​ ವಿಚಾರದಲ್ಲಿ ಬೇಸರಗೊಂಡ ವೀಕ್ಷಕರು; ಮಾತಿಗೆ ತಪ್ಪೋದು ಇಷ್ಟೊಂದು ಸುಲಭವಾ?
ಪ್ರಶಾಂತ್ ಸಂಬರಗಿ
TV9 Web
| Edited By: |

Updated on: Jul 20, 2021 | 6:37 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನಲ್ಲಿ ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಶಾಂತ್ ಸಂಬರಗಿ ನಡುವೆ ಒಳ್ಳೆಯ ಗೆಳೆತನವಿದೆ. ಆದರೆ, ಇತ್ತೀಚೆಗೆ ನಡೆದ ಜಗಳದಿಂದ ಇಬ್ಬರೂ ಬೇರೆ ಆಗಿದ್ದರು. ಇಬ್ಬರೂ ಮತ್ತೆ ಒಂದಾಗುವುದಿಲ್ಲ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಈಗ ಎಲ್ಲವೂ ಉಲ್ಟಾ ಆಗಿದೆ. ಅಷ್ಟೇ ಅಲ್ಲ, ಪ್ರಶಾಂತ್​ ಬಗ್ಗೆ ಅನೇಕರು ಬೇಸರ ಹೊರ ಹಾಕಿದ್ದಾರೆ.

ಪ್ರಶಾಂತ್​ ಸಂಬರಗಿ ವಿಚಾರದಲ್ಲಿ ಚಕ್ರವರ್ತಿ ಚಂದ್ರಚೂಡ್​ ಸುಳ್ಳು ಹೇಳುತ್ತಿರುವ ವಿಚಾರ ಮನೆಯಲ್ಲಿ ಸಾಬೀತಾಗಿತ್ತು. ಈ ಘಟನೆ ನಂತರದಲ್ಲಿ ಪ್ರಶಾಂತ್​ ಹಾಗೂ ಚಕ್ರವರ್ತಿ ಗೆಳೆತನದಲ್ಲಿ ಬಿರುಕು ಮೂಡಿತ್ತು. ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ. ಇದಾದ ಮರುವಾರ (ಹಿಂದಿನ ವಾರ) ಚಕ್ರವರ್ತಿ ಹಾಗೂ ಪ್ರಶಾಂತ್​ ಸಂಬರಗಿ ಅಷ್ಟಾಗಿ ಮಾತನಾಡಿಕೊಂಡಿಲ್ಲ.

‘ನಾನು ಚಕ್ರವರ್ತಿ ಜತೆ ಎಷ್ಟು ಬೇಕೋ ಅಷ್ಟು ಮಾತ್ರ ಮಾತನಾಡುತ್ತಿದ್ದೇನೆ. ಅವನ ಜತೆ ಇದ್ದರೆ ನನಗೂ ಕೂಡ ಕೆಟ್ಟ ಹೆಸರು ಬರುತ್ತದೆ. ಚಕ್ರವರ್ತಿ ಯಾಕೋ ತುಂಬಾನೇ ಬದಲಾಗಿದ್ದಾರೆ’ ಎಂದು ಮನೆಯ ಎಲ್ಲಾ ಸದಸ್ಯರ ಜತೆ ಪ್ರಶಾಂತ್​ ಹೇಳಿಕೊಂಡು ಬಂದಿದ್ದರು. ಆದರೆ, ಈ ವಾರ ಎಲ್ಲವೂ ಮೊದಲಿನಂತೆ ಆಗಿದೆ.

ಚಕ್ರವರ್ತಿ ಚಂದ್ರಚೂಡ್​ ಹಾಗೂ ಪ್ರಶಾಂತ್​ ಮತ್ತೆ ಒಂದಾಗಿದ್ದಾರೆ. ಇಬ್ಬರೂ ಕುಳಿತು ಮನೆಯ ಆ ಸದಸ್ಯರು ಹೀಗೆ, ಈ ಸದಸ್ಯರು ಹಾಗೆ ಎಂದೆಲ್ಲ ಮಾತನಾಡಿಕೊಂಡಿದ್ದಾರೆ. ದಿವ್ಯಾ ಉರುಡುಗ ಅವರಿಗೆ ಕಿಚ್ಚನ ಚಪ್ಪಾಳಿ ಸಿಕ್ಕಿತ್ತು. ಇಡೀ ಬಿಗ್​ ಬಾಸ್​ ಮನೆಯ ಜರ್ನಿ ಇಟ್ಟುಕೊಂಡು ಈ ಚಪ್ಪಾಳೆ ನೀಡಲಾಗಿತ್ತು. ಈ ವಿಚಾರದ ಬಗ್ಗೆ ಪ್ರಶಾಂತ್​-ಚಕ್ರವರ್ತಿ ಹೊಟ್ಟೆಕಿಚ್ಚಿನ ಮಾತುಗಳನ್ನು ಆಡಿಕೊಂಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​ ಕಳೆದ ಕೆಲ ವಾರಗಳಿಂದ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗಿಲ್ಲ. ಈ ಬಾರಿಯಂತೂ ಅವರು ಪ್ರಿಯಾಂಕಾ ತಿಮ್ಮೇಶ್​ಗೆ ಮಧ್ಯ ಬೆರಳು ತೋರಿಸುವ ಮೂಲಕ ಎಲ್ಲರ ಕೋಪಕ್ಕೆ ಕಾರಣವಾಗಿದ್ದರು. ಈ ಮಧ್ಯೆ ಪ್ರಶಾಂತ್​ ತುಂಬಾನೇ ಬದಲಾಗಿದ್ದರು. ಎಲ್ಲರ ಜತೆಯೂ ಸಾಫ್ಟ್ ಆಗಿ ನಡೆದುಕೊಳ್ಳುತ್ತಿದ್ದರು. ಹಿಂದಿನಿಂದ ಮಾತನಾಡುವುದನ್ನು ನಿಲ್ಲಿಸಿದ್ದರು. ಆದರೆ, ಈಗ ಅವರು ಮತ್ತೆ ಮೊದಲಿನಂತೆ ಆಗಿರುವುದು ವೀಕ್ಷಕರಿಗೆ ಬೇಸರ ತರಿಸಿದೆ. ಮಾತಿಗೆ ತಪ್ಪೋದು ಇಷ್ಟೊಂದು ಸುಲಭವಾ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಒದಿ: ‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು