ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ-ಮಂಜು ನಡುವೆ ಘನಘೋರ ಫೈಟ್​; ಕಾರಣ ಮಾತ್ರ ವಿಚಿತ್ರ!

ಬಿಗ್​ ಬಾಸ್​ ಮನೆಯಲ್ಲಿ ಚದುರಂಗದ ಟಾಸ್ಕ್​ ನೀಡಲಾಗಿದೆ. ಅಂದರೆ, ಒಂದು ತಂಡದವರು ಬಿಳಿ ಬಣ್ಣದ ಕಾಯಿಗಳಾದರೆ, ಮತ್ತೊಂದು ತಂಡದವರು ಕಪ್ಪು ಬಣ್ಣದ ಕಾಯಿಗಳು.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ-ಮಂಜು ನಡುವೆ ಘನಘೋರ ಫೈಟ್​; ಕಾರಣ ಮಾತ್ರ ವಿಚಿತ್ರ!
ಪ್ರಶಾಂತ್ ಸಂಬರಗಿ
Follow us
|

Updated on:Mar 24, 2021 | 3:28 PM

ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಆಗೋದು ಸಾಮಾನ್ಯ. ಇಂದು ಒಟ್ಟಾಗಿದ್ದವರ ನಡುವೆ ನಾಳೆ ಘರ್ಷಣೆ ಏರ್ಪಡಬಹುದು. ಇಂದು ಜಗಳ ಆಡಿಕೊಂಡವರು ನಾಳೆ ಒಂದಾಗಬಹುದು. ಈಗ ಬಿಗ್​ ಬಾಸ್​ ಮನೆಯಲ್ಲಿ ಹಾಗೆಯೇ ಆಗಿದೆ. ಮಾವ-ಅಳಿಯ ಎಂದು ಕರೆದೆಕೊಳ್ಳುತ್ತಿದ್ದ ಪ್ರಶಾಂತ್​ ಸಂಬರಗಿ ಹಾಗೂ ಮಂಜು ಪಾವಗಡ ನಡುವೆ ಯಾರೂ ಊಹಿಸದಷ್ಟು ದೊಡ್ಡ ಮಟ್ಟದಲ್ಲಿ ಜಗಳ ಒಂದು ಏರ್ಪಟ್ಟಿದೆ. ಬಿಗ್​ ಬಾಸ್​ ಮನೆಯಲ್ಲಿ ಚದುರಂಗದ ಟಾಸ್ಕ್​ ನೀಡಲಾಗಿದೆ. ಅಂದರೆ, ಒಂದು ತಂಡದವರು ಬಿಳಿ ಬಣ್ಣದ ಕಾಯಿಗಳಾದರೆ, ಮತ್ತೊಂದು ತಂಡದವರು ಕಪ್ಪು ಬಣ್ಣದ ಕಾಯಿಗಳು. ಇಬ್ಬರ ನಡುವೆ ಬಿಗ್​ ಬಾಸ್​ ಟಾಸ್ಕ್​ ನೀಡುತ್ತಾರೆ. ಈ ಟಾಸ್ಕ್​ಗೆ ತಲೆ ಉಪಯೋಗಿಸಬೇಕು. ಒಂದೊಮ್ಮೆ ಇದರಲ್ಲಿ ಸೋತವರು ಪಂದ್ಯದಿಂದ ಹೊರಗುಳಿಯಬೇಕು.

ಮ್ಯಾಚ್​ ನಡೆಯುವಾಗ ಪಂದ್ಯ ಆಡುವವನು ಮಾತ್ರ ಹೊರಗಿರಬೇಕು. ಉಳಿದ ಸದಸ್ಯರು ಮನೆ ಒಳಗೆ ಇರಬೇಕು. ತಮ್ಮ ತಂಡದ ಸ್ಪರ್ಧಿ ಗೆದ್ದು ಅಥವಾ ಸೋತ ನಂತರವೇ ಉಳಿದವರು ಹೊರಗೆ ಬರಬೇಕು. ಆದರೆ, ಪ್ರಶಾಂತ್​ ಸಂಬರಗಿ ಬೆಲ್​ ಆಗುವ ಮೊದಲೇ ಹೊರ ಬಂದುಬಿಟ್ಟಿದ್ದರು.

ಇದನ್ನು ನೋಡಿದ ಮಂಜುಗೆ ಸಿಟ್ಟು ಬಂದಿದೆ. ಇದನ್ನು ಅವರು ಪ್ರಶ್ನೆ ಕೂಡ ಮಾಡಿದ್ದಾರೆ. ಇದನ್ನು ಸಹಿಸಿಕೊಳ್ಳದ ಸಂಬರಗಿ ಸಿಟ್ಟಾಗಿದ್ದಾರೆ. ನಂಗೂ ಜವಾಬ್ದಾರಿ ಇದೆ. ನಿಂಗೆ ಮಾತ್ರ ಜವಾಬ್ದಾರಿ ಇದೆ ಎಂದುಕೊಳ್ಳಬೇಡ. ಹೌದು, ನೀನೆಕೆ ಆಚೆ ಬಂದೆ ಎಂದು ಪ್ರಶಾಂತ್​ ಸಿಟ್ಟಾಗಿ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಹೋಗಲೋ ಗುಬಾಲ್​ ಎಂದು ಸಿಟ್ಟಾಗಿದ್ದಾರೆ.

ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಮಾರ್ಚ್​ 24ರ ಸಂಚಿಕೆಯಲ್ಲಿ ಈ ಜಗಳದ ಫುಲ್​ ಡಿಟೇಲ್ಸ್​ ಸಿಗಲಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್ ಕೇಳಿದ 10 ಜನರಲ್​ ನಾಲೆಡ್ಜ್​ ಪ್ರಶ್ನೆಗೆ ಉತ್ತರಿಸದೇ ಸೋತ ಶಮಂತ್​! ನಿಮಗೆ ಉತ್ತರ ಗೊತ್ತಾ?

Published On - 3:28 pm, Wed, 24 March 21

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?