AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ-ಮಂಜು ನಡುವೆ ಘನಘೋರ ಫೈಟ್​; ಕಾರಣ ಮಾತ್ರ ವಿಚಿತ್ರ!

ಬಿಗ್​ ಬಾಸ್​ ಮನೆಯಲ್ಲಿ ಚದುರಂಗದ ಟಾಸ್ಕ್​ ನೀಡಲಾಗಿದೆ. ಅಂದರೆ, ಒಂದು ತಂಡದವರು ಬಿಳಿ ಬಣ್ಣದ ಕಾಯಿಗಳಾದರೆ, ಮತ್ತೊಂದು ತಂಡದವರು ಕಪ್ಪು ಬಣ್ಣದ ಕಾಯಿಗಳು.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ-ಮಂಜು ನಡುವೆ ಘನಘೋರ ಫೈಟ್​; ಕಾರಣ ಮಾತ್ರ ವಿಚಿತ್ರ!
ಪ್ರಶಾಂತ್ ಸಂಬರಗಿ
Follow us
ರಾಜೇಶ್ ದುಗ್ಗುಮನೆ
|

Updated on:Mar 24, 2021 | 3:28 PM

ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಆಗೋದು ಸಾಮಾನ್ಯ. ಇಂದು ಒಟ್ಟಾಗಿದ್ದವರ ನಡುವೆ ನಾಳೆ ಘರ್ಷಣೆ ಏರ್ಪಡಬಹುದು. ಇಂದು ಜಗಳ ಆಡಿಕೊಂಡವರು ನಾಳೆ ಒಂದಾಗಬಹುದು. ಈಗ ಬಿಗ್​ ಬಾಸ್​ ಮನೆಯಲ್ಲಿ ಹಾಗೆಯೇ ಆಗಿದೆ. ಮಾವ-ಅಳಿಯ ಎಂದು ಕರೆದೆಕೊಳ್ಳುತ್ತಿದ್ದ ಪ್ರಶಾಂತ್​ ಸಂಬರಗಿ ಹಾಗೂ ಮಂಜು ಪಾವಗಡ ನಡುವೆ ಯಾರೂ ಊಹಿಸದಷ್ಟು ದೊಡ್ಡ ಮಟ್ಟದಲ್ಲಿ ಜಗಳ ಒಂದು ಏರ್ಪಟ್ಟಿದೆ. ಬಿಗ್​ ಬಾಸ್​ ಮನೆಯಲ್ಲಿ ಚದುರಂಗದ ಟಾಸ್ಕ್​ ನೀಡಲಾಗಿದೆ. ಅಂದರೆ, ಒಂದು ತಂಡದವರು ಬಿಳಿ ಬಣ್ಣದ ಕಾಯಿಗಳಾದರೆ, ಮತ್ತೊಂದು ತಂಡದವರು ಕಪ್ಪು ಬಣ್ಣದ ಕಾಯಿಗಳು. ಇಬ್ಬರ ನಡುವೆ ಬಿಗ್​ ಬಾಸ್​ ಟಾಸ್ಕ್​ ನೀಡುತ್ತಾರೆ. ಈ ಟಾಸ್ಕ್​ಗೆ ತಲೆ ಉಪಯೋಗಿಸಬೇಕು. ಒಂದೊಮ್ಮೆ ಇದರಲ್ಲಿ ಸೋತವರು ಪಂದ್ಯದಿಂದ ಹೊರಗುಳಿಯಬೇಕು.

ಮ್ಯಾಚ್​ ನಡೆಯುವಾಗ ಪಂದ್ಯ ಆಡುವವನು ಮಾತ್ರ ಹೊರಗಿರಬೇಕು. ಉಳಿದ ಸದಸ್ಯರು ಮನೆ ಒಳಗೆ ಇರಬೇಕು. ತಮ್ಮ ತಂಡದ ಸ್ಪರ್ಧಿ ಗೆದ್ದು ಅಥವಾ ಸೋತ ನಂತರವೇ ಉಳಿದವರು ಹೊರಗೆ ಬರಬೇಕು. ಆದರೆ, ಪ್ರಶಾಂತ್​ ಸಂಬರಗಿ ಬೆಲ್​ ಆಗುವ ಮೊದಲೇ ಹೊರ ಬಂದುಬಿಟ್ಟಿದ್ದರು.

ಇದನ್ನು ನೋಡಿದ ಮಂಜುಗೆ ಸಿಟ್ಟು ಬಂದಿದೆ. ಇದನ್ನು ಅವರು ಪ್ರಶ್ನೆ ಕೂಡ ಮಾಡಿದ್ದಾರೆ. ಇದನ್ನು ಸಹಿಸಿಕೊಳ್ಳದ ಸಂಬರಗಿ ಸಿಟ್ಟಾಗಿದ್ದಾರೆ. ನಂಗೂ ಜವಾಬ್ದಾರಿ ಇದೆ. ನಿಂಗೆ ಮಾತ್ರ ಜವಾಬ್ದಾರಿ ಇದೆ ಎಂದುಕೊಳ್ಳಬೇಡ. ಹೌದು, ನೀನೆಕೆ ಆಚೆ ಬಂದೆ ಎಂದು ಪ್ರಶಾಂತ್​ ಸಿಟ್ಟಾಗಿ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಹೋಗಲೋ ಗುಬಾಲ್​ ಎಂದು ಸಿಟ್ಟಾಗಿದ್ದಾರೆ.

ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಮಾರ್ಚ್​ 24ರ ಸಂಚಿಕೆಯಲ್ಲಿ ಈ ಜಗಳದ ಫುಲ್​ ಡಿಟೇಲ್ಸ್​ ಸಿಗಲಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್ ಕೇಳಿದ 10 ಜನರಲ್​ ನಾಲೆಡ್ಜ್​ ಪ್ರಶ್ನೆಗೆ ಉತ್ತರಿಸದೇ ಸೋತ ಶಮಂತ್​! ನಿಮಗೆ ಉತ್ತರ ಗೊತ್ತಾ?

Published On - 3:28 pm, Wed, 24 March 21

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್