AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮಪ್ಪನ ಬಗ್ಗೆ ಮಾತನಾಡೋಕೆ ನೀನ್ಯಾರೋ? ಪ್ರಶಾಂತ್​-ಮಂಜು ಜಗಳದಿಂದ ರಣರಂಗವಾದ ಮನೆ

ಮಂಜು ಹೀಗೆ ಹೇಳುವುದನ್ನೇ ಕಾಯುತ್ತಿದ್ದ ಪ್ರಶಾಂತ್​ ಸಂಬರಗಿ, ನಿನ್ನ ಡವ್​ಗೆ ಹೇಳಬೇಕಿತ್ತು ಎಂದಿದ್ದಾರೆ. ಇದಕ್ಕೆ ದಿವ್ಯಾ ಸುರೇಶ್​ ತಿರುಗಿ ಬಿದ್ದಿದ್ದಾರೆ.

ನಮ್ಮಪ್ಪನ ಬಗ್ಗೆ ಮಾತನಾಡೋಕೆ ನೀನ್ಯಾರೋ? ಪ್ರಶಾಂತ್​-ಮಂಜು ಜಗಳದಿಂದ ರಣರಂಗವಾದ ಮನೆ
ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ-ಪ್ರಶಾಂತ್​ ನಡುವಿನ ಜಗಳ
ರಾಜೇಶ್ ದುಗ್ಗುಮನೆ
| Edited By: |

Updated on: Apr 07, 2021 | 3:44 PM

Share

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಕಡಿಮೆ ಆಗುತ್ತಿದ್ದಾರೆ. ಇದರ ಜತೆಗೆ ಸ್ಪರ್ಧಿಗಳ ನಡುವೆ ಕಾಂಪಿಟೇಷನ್​ ಕೂಡ ಹೆಚ್ಚುತ್ತಿದೆ. ಯಾರನ್ನು ಹೇಗೆ ಮಣಿಸಬೇಕು ಎನ್ನುವ ಬಗ್ಗೆ ಲೆಕ್ಕಾಚಾರಗಳು ನಡೆಯುತ್ತಿವೆ. ಹೀಗಿರುವಾಗಲೇ ಮನೆಯಲ್ಲಿ ಜಗಳಗಳು ಕೂಡ ಹೆಚ್ಚುತ್ತಿದೆ. ಪ್ರಶಾಂತ್​ ಸಂಬರಗಿ ಹಾಗೂ ಮಂಜು ಪಾವಗಡ ನಡುವೆ ಘನಘೋರ ವಾಕ್​ಸಮರ ನಡೆದು ಹೋಗಿದೆ. ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಚಕ್ರವರ್ತಿ ಚಂದ್ರಚೂಡ್​ ಎಂಟ್ರಿ ಕೊಟ್ಟ ನಂತರದಲ್ಲಿ ಪ್ರಶಾಂತ್​ ಸಂಬರಗಿ ಶಕ್ತಿ ಹೆಚ್ಚಿದೆ. ಇಬ್ಬರೂ ಸೇರಿ ಮನೆಯ ಎಲ್ಲಾ ಸದಸ್ಯರ ಫೇವರಿಟ್​ ಆಗಿರುವ ಮಂಜು ಶಕ್ತಿ ಕುಗ್ಗಿಸಲು ಪ್ಲ್ಯಾನ್​ ರೂಪಿಸುತ್ತಿದ್ದಾರೆ. ಇತ್ತೀಚೆಗೆ, ಮಂಜು ಆಪ್ತೆ ಎನಿಸಿಕೊಂಡಿರುವ ದಿವ್ಯಾ ಸುರೇಶ್​ ಬಳಿ ಪ್ರಶಾಂತ್​ ಹೋಗಿ ಇಲ್ಲದ್ದನ್ನು ಇದ್ದ ರೀತಿಯಲ್ಲಿ ಹೇಳಿದ್ದರು. ಕೊನೆಗೆ ಶಮಂತ್ ಬಳಿ ಹೋಗಿ, ದಿವ್ಯಾ ವಿರುದ್ಧವೇ ಮಾತನಾಡಿದ್ದರು.

ಈಗ ದಿವ್ಯಾ ಹಾಗೂ ಮಂಜು ಇಬ್ಬರನ್ನೂ ಕುಗ್ಗಿಸುವ ಪ್ರಯತ್ನವನ್ನು ಪ್ರಶಾಂತ್​ ಮಾಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ದಿವ್ಯಾ ವಿಚಾರವಾಗಿ ಪ್ರಶಾಂತ್​ ಹಾಗೂ ಮಂಜು ನಡುವೆ ಜಗಳ ನಡೆದಿರುವುದು ಕಂಡು ಬಂದಿದೆ.

ರಾತ್ರಿ ಸಮಯದಲ್ಲಿ ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸ್ನಾನ ಮಾಡುತ್ತಿದ್ದರು. ಆಗ ಸೌಂಡ್​ ಸ್ವಲ್ಪ ಕಡಿಮೆ ಇದ್ದರೆ ಉತ್ತಮವಾಗಿರುತ್ತದೆ ಎಂದು ದಿವ್ಯಾ ಸುರೇಶ್​ ಹೇಳಿದ್ದಾರೆ. ಆಗ, ಮಂಜು ಪಾವಗಡ ಬೆಡ್​ರೂಂನಲ್ಲಿ ಗಲಾಟೆ ಮಾಡಿದ ವಿಚಾರವನ್ನು ಪರೋಕ್ಷವಾಗಿ ತೆಗೆದುಕೊಂಡು ಚಂದ್ರಚೂಡ್​ ಮಾತನಾಡಿದ್ದಾರೆ. ಬೆಡ್​ರೂಂನಲ್ಲಿ ಗಲಾಟೆ ಮಾಡಿದರೆ ಹೇಳಬೇಕು, ಇಲ್ಲಲ್ಲ ಎಂದು ಚಂದ್ರಚೂಡ್​ ಮಂಜುಗೆ ಟಾಂಗ್ ಕೊಟ್ಟಿದ್ದಾರೆ. ಆಗ, ಮಂಜು, ನಾನೇನಾದರೂ ಹೇಳಿದ್ದೀನಾ ಎಂದು ಪ್ರಶ್ನೆ ಮಾಡಿದ್ದಾರೆ.

ಮಂಜು ಹೀಗೆ ಹೇಳುವುದನ್ನೇ ಕಾಯುತ್ತಿದ್ದ ಪ್ರಶಾಂತ್​ ಸಂಬರಗಿ, ನಿನ್ನ ಡವ್​ಗೆ ಹೇಳಬೇಕಿತ್ತು ಎಂದಿದ್ದಾರೆ. ಇದಕ್ಕೆ ದಿವ್ಯಾ ಸುರೇಶ್​ ತಿರುಗಿ ಬಿದ್ದಿದ್ದಾರೆ. ಆಗ ಪ್ರಶಾಂತ್​, ಡವ್​ ಅಂತಾನೂ ಹೇಳ್ತೀನಿ, ಲವರ್​ ಅಂತಾನೂ ಹೇಳ್ತೀನಿ ಎಂದು ಆವಾಜ್​ ಹಾಕಿದ್ದಾರೆ.

ಇದಕ್ಕೆ ಸಿಟ್ಟಾದ ಮಂಜು, ಮಾವ ಎಂದು ಪ್ರಶಾಂತ್​ ಅವರನ್ನು ಸಂಬೋಧಿಸುತ್ತಿದ್ದಂತೆ ಅವರು ಸಿಟ್ಟಾಗಿದ್ದಾರೆ. ಯಾರು ಮಾವ? ನಿಮ್ಮಪ್ಪ ಮಾವ ಎಂದು ಸಂಬರಗಿ ಕೂಗಾಡಿದ್ದಾರೆ. ನಮ್ಮಪ್ಪನ ಬಗ್ಗೆ ಮಾತನಾಡೋಕೆ ನೀನ್ಯಾರೋ ಎಂದು ಮಂಜು ಪ್ರಶ್ನೆ ಮಾಡಿದ್ದಾರೆ. ಇವರ ನಡುವೆ ಏನೆಲ್ಲ ಆಯ್ತು ಎಂಬುದನ್ನು ತಿಳಿದುಕೊಳ್ಳೋಕೆ ಇಂದಿನ (ಏಪ್ರಿಲ್​ 7) ಎಪಿಸೋಡ್​ ನೋಡಬೇಕು.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ಎದುರು ತಪ್ಪು ಒಪ್ಪಿಕೊಂಡ ನಿಧಿ; ದ್ವೇಷ ಕಳೆದುಕೊಂಡು ಒಂದಾದರು!

ದಿವ್ಯಾ ಉರುಡುಗ ನನಗೆ ತಂಗಿ ಇದ್ದಂತೆ; ಎಲ್ಲರೆದುರು ಒಪ್ಪಿಕೊಂಡ ಪ್ರಶಾಂತ್​ ಸಂಬರಗಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ