AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಸಂಬರಗಿ ಎದುರು ತಪ್ಪು ಒಪ್ಪಿಕೊಂಡ ನಿಧಿ; ದ್ವೇಷ ಕಳೆದುಕೊಂಡು ಒಂದಾದರು!

ಈಗ ನಿಧಿ-ಪ್ರಶಾಂತ್​ ಒಂದಾಗಿದ್ದಾರೆ. ನಿಧಿ ತಮ್ಮ ಕಷ್ಟವನ್ನೆಲ್ಲ ಹೇಳಿಕೊಂಡಿದ್ದಾರೆ. ಟಾಸ್ಕ್​ ವೇಳೆ ಮಾತನಾಡುವಾಗ ಎಲ್ಲರೂ ರೇಗಾಡುತ್ತಿದ್ದರು.

ಪ್ರಶಾಂತ್​ ಸಂಬರಗಿ ಎದುರು ತಪ್ಪು ಒಪ್ಪಿಕೊಂಡ ನಿಧಿ; ದ್ವೇಷ ಕಳೆದುಕೊಂಡು ಒಂದಾದರು!
ನಿಧಿ ಸುಬ್ಬಯ್ಯ - ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Apr 02, 2021 | 6:57 AM

Share

ಬಿಗ್​ ಬಾಸ್​ ಮನೆಯಲ್ಲಿ ನಿಧಿ ಸುಬ್ಬಯ ಮತ್ತು ಪ್ರಶಾಂತ್​ ಸಂಬರಗಿ ಹಾವು ಮುಂಗುಸಿ ರೀತಿ ಇದ್ದರು. ಪ್ರಶಾಂತ್​ ಅವರನ್ನು ಕಂಡರೆ ಸದಾ ಉರಿದು ಬೀಳುತ್ತಿದ್ದರು ನಿಧಿ. ಪ್ರಶಾಂತ್​ ಸರಿ ಇಲ್ಲ. ಅವರು ಹಾಗೆ ಮಾಡ್ತಾರೆ, ಹೀಗೆ ಮಾಡ್ತಾರೆ ಎಂದು ಆರೋಪಿಸುತ್ತಿದ್ದರು. ಆದರೆ, ಈಗ ಎಲ್ಲವನ್ನೂ ಮರೆತು ಇಬ್ಬರೂ ಒಂದಾಗಿದ್ದಾರೆ. ಅಲ್ಲದೆ, ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾಲ್ಕನೇ ವಾರದ ಟಾಸ್ಕ್​ ವೇಳೆ ನಿಧಿ ಸುಬ್ಬಯ್ಯ ಹಾಗೂ ಪ್ರಶಾಂತ್​ ನಡುವೆ ಕಿತ್ತಾಟ ನಡೆದಿತ್ತು. ಎಲ್ಲರೂ ತಮ್ಮನ್ನು ದಡ್ಡನಂತೆ ನೋಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಅಂತ ನಿಧಿ ಎಂದುಕೊಂಡರು. ಅಷ್ಟೇ ಅಲ್ಲ, ಚಿಕ್ಕ ವಿಚಾರವನ್ನು ದೊಡ್ಡದು ಮಾಡಿ ಹೇಳುವ ಅಗತ್ಯವಾದರೂ ಏನಿತ್ತು ಎನ್ನುವ ಪ್ರಶ್ನೆಯನ್ನು ತಮಗೆ ತಾವೇ ಕೇಳಿಕೊಂಡು ಒಮ್ಮೆಲೇ ಸಿಟ್ಟಾದರು. ನಾನು ದಡ್ಡಿಯಲ್ಲ. ಅಧಿಕಪ್ರಸಂಗ ಮಾಡುವುದು ನಂಗೆ ಇಷ್ಟ ಆಗುವುದೇ ಇಲ್ಲ. ಇಷ್ಟು ಸಣ್ಣ ಸಣ್ಣ ವಿಚಾರ ಹೇಳಿ ನಂಗೆ ಇರಿಟೇಟ್​ ಮಾಡಬೇಡಿ ಎಂದು ಬುದ್ಧಿ ಹೇಳಿದ್ರು.

ಆದರೆ, ಈಗ ಇಬ್ಬರೂ ಒಂದಾಗಿದ್ದಾರೆ. ನಿಧಿ ತಮ್ಮ ಕಷ್ಟವನ್ನೆಲ್ಲ ಹೇಳಿಕೊಂಡಿದ್ದಾರೆ. ಟಾಸ್ಕ್​ ವೇಳೆ ಮಾತನಾಡುವಾಗ ಎಲ್ಲರೂ ರೇಗಾಡುತ್ತಿದ್ದರು. ಆಗ ನಾವು ಅವರ ಮಾತಿಗೆ ತಿರುಗಿ ಹೇಳಬಾರದು. ಹಾಗೆ ಮಾಡಿದರೆ, ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗುತ್ತದೆ ಎಂದರು. ಈ ವೇಳೆ ಪ್ರಶಾಂತ್​ ಕೂಡ ನಿಧಿಗೆ ಒಂದಷ್ಟು ಟಿಪ್ಸ್​ ನೀಡಿದರು. ಇದನ್ನು ನಿಧಿ ಸ್ವೀಕಾರ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಇಂದು ಗೆಳೆಯರಾಗಿದ್ದವರು ನಾಳೆ ದ್ವೇಷಿಗಳಾಗುತ್ತಾರೆ. ಇಂದು ದ್ವೇಷಿಗಳಾಗಿದ್ದವರು ನಾಳೆ ಒಂದಾಗಿ ಬಿಡುತ್ತಾರೆ. ಇದಕ್ಕೆ ಇಂದು ನಡೆದ ಈ ಘಟನೆ ಹೊಸ ಸಾಕ್ಷಿ. ಮುಂದಿನ ದಿನಗಳಲ್ಲಿ ಇವರ ಗೆಳೆತನ ಹೇಗೆ ಸಾಗಲಿದೆ ಎಂಬುದನ್ನು ನೋಡಬೇಕಿದೆ.

ಇದನ್ನೂ ಓದಿ: ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು